ಇರಾನ್ನ ಸರ್ವೋಚ್ಚ ನಾಯಕ ಖಮೇನಿ ಅವರ ಹತ್ಯೆ ಖಂಡಿಸಿ ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಲಾದ ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಪ್ರಮೊದ ಮುತಾಲಿಕ ಆಗ್ರಹಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾದ ಪ್ರಮೋದ್ ಮುತಾಲಿಕ್ ಅವರು ಈ ಕುರಿತು ಮನವಿ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಖಮೇನಿ ಹತ್ಯೆ ಖಂಡಿಸಿ ಕೆಲವರು ಗಲಭೆ ಮತ್ತು ಗಲಾಟೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಶಾಸಕ ಎನ್.ಎ. ಹ್ಯಾರಿಸ್ ನೇತೃತ್ವದಲ್ಲಿ ಮೆರವಣಿಗೆ ನಡೆದಿರುವ ಕುರಿತು ನಾವು ದೂರು ದಾಖಲಿಸಿದ್ದೇವೆ,” ಎಂದು ಹೇಳಿದರು.
“ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಖಮೇನಿ ಫೋಟೋ ಹಾಗೂ ಪೋಸ್ಟರ್ಗಳನ್ನು ಅಳವಡಿಸಲಾಗಿದೆ. ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಪೋಸ್ಟರ್ಗಳು ನಮ್ಮ ದೇಶದಲ್ಲಿ ಇರಬಾರದು. ಈ ದೇಶದ ಮುಸ್ಲಿಮರಿಗೂ ಖಮೇನಿಗೂ ಏನು ಸಂಬಂಧ?” ಎಂದು ಪ್ರಶ್ನಿಸಿದರು.




