ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27 ನೇಯ ಸಾಲಿನ ರಾಜ್ಯ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಘೋಷಿಸಿದ ಪ್ರಮುಖ ಯೋಜನೆಗಳು ಹೀಗಿವೆ:
ರಾಮದುರ್ಗ ನಗರದಲ್ಲಿ ಹೊಸ ಬಸ್ ನಿಲ್ದಾಣ
ರಾಮದುರ್ಗ ನಗರಕ್ಕೆ ಹೊಸ ಬಸ್ ನಿಲ್ದಾಣ ನಿರ್ಮಿಸಲು ಇಂದಿನ ದಿನದ 17ನೇ ಆಯವ್ಯಯ ಬಜೆಟ್ ಸಂದರ್ಭಲ್ಲಿ ಅನುಮೋದನೆ ನೀಡಿದ ರಾಜ್ಯ ಸರ್ಕಾರ
ಕುರಿ-ಮೇಕೆ ಸಾಕಾಣಿಕೆ ಯೋಜನೆ
ಬೆಳಗಾವಿ ಮತ್ತು ಕಲ್ಬುರ್ಗಿಯ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಉತ್ತೇಜಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25 ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳು.
ಸುವರ್ಣ ಸೌಧದಲ್ಲಿ ಸಿಬ್ಬಂದಿಗಳಿಗೆ ವಸತಿ ಬ್ಯಾರಕ್
ಸುವರ್ಣ ವಿಧಾನಸೌಧ ವಿಧಾನಮಂಡಲ ಅಧಿವೇಶನದ ವೇಳೆ ಬಂದೋಬಸ್ತ್ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ₹20 ಕೋಟಿ ವೆಚ್ಚದಲ್ಲಿ 1,000 ಮಂದಿಗೆ ಶಾಶ್ವತ ಬ್ಯಾರಕ್ ನಿರ್ಮಾಣ.
ಹೊಸ ಪೋಲೀಸ್ ಠಾಣೆ
ರಾಜ್ಯದಲ್ಲಿ 12 ಹೊಸ ಪೋಲೀಸ್ ಠಾಣೆಗಳನ್ನು ಸ್ಥಾಪಿಸುವ ಯೋಜನೆಯಡಿ ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ಪೋಲೀಸ್ ಠಾಣೆ ಸ್ಥಾಪನೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಬೆಳಗಾವಿ ಗ್ರಾಮಾಂತರ ಕ್ಷೇತದಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 150 ಸಾಮರ್ಥ್ಯದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಆರಂಭ.
ಕೈಗಾರಿಕಾ ಪಾರ್ಕ್ ಅಭಿವೃದ್ಧಿ
ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆಯ ಸುಮಾರು 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ.
ಬೈಲಹೊಂಗಲದಲ್ಲಿ ಪ್ರಜಾಸೌಧ ನಿರ್ಮಾಣ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ‘ಪ್ರಜಾಸೌಧ’ ಕಟ್ಟಡ ನಿರ್ಮಾಣ.
ಅಂಬೇಡ್ಕರ್ ಹೆಸರಿನ CBSE ವಸತಿ ಶಾಲೆ
ಡಾ.ಬಿ.ಆರ್.ಅಂಬೇಡಕರ್ ಅವರು ಭೇಟಿ ನೀಡಿದ್ದ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ KREIS CBSE ವಸತಿ ಶಾಲೆ ಸ್ಥಾಪನೆ. ಈ ಶಾಲೆಗಳು ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಆರಂಭವಾಗಲಿವೆ.





