ಬೆಳಗಾವಿ | ಮಹದಾಯಿ ನೀರಿಗಾಗಿ ಹೋರಾಟ ತೀವ್ರ: ಪ್ರಹ್ಲಾದ ಜೋಶಿ ಮನೆ ಮುಂದೆ ಧರಣಿಗೆ ರೈತ ಸೇನಾ ನಿರ್ಧಾರ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಮಹದಾಯಿ ನೀರಿನ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯ ವಿರುದ್ಧ ರೈತರು ಗಟ್ಟಿಯಾಗಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಮಹದಾಯಿ ಯೋಜನೆಗೆ ಮೂರು ತಿಂಗಳಲ್ಲಿ ಅನುಮತಿ ತರುತ್ತೇವೆ ಎಂದು ಭರವಸೆ ನೀಡಿದ್ದ ಪ್ರಹ್ಲಾದ ಜೋಶಿ, ಇದೀಗ ಜನತೆಗೂ ರೈತ ಸಮುದಾಯಕ್ಕೂ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

‘ಭರವಸೆ ಮುರಿದ ಕೇಂದ್ರ, ಹೋರಾಟ ಅನಿವಾರ್ಯ’

ಶಾಸಕರು ಮತ್ತು ಸಂಸದರು ಮಹದಾಯಿ ವಿಷಯದಲ್ಲಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಆದರೆ ಧಾರವಾಡ-ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಜನತೆಗೆ ನೀರಿನ ಅಗತ್ಯ ಅತ್ಯಂತ ಗಂಭೀರವಾಗಿದೆ. ಮಲಪ್ರಭಾ ನದಿಯಿಂದ ತುಂಬು ಪ್ರಮಾಣದಲ್ಲಿ ನೀರು ಒದಗಿಸುವಂತಾಗದೆ, ಮುಂದಿನ ಎರಡು ತಿಂಗಳಲ್ಲಿ ಅಣೆಕಟ್ಟು ಸಂಪೂರ್ಣ ಖಾಲಿಯಾಗುವ ಭೀತಿ ಎದುರಾಗಿದೆ ಎಂದು ವಿರೇಶ ಸೊಬರದಮಠ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋಳಿಯ ಬಳಿಕ ಭಾರಿ ಹೋರಾಟ

ಮಹದಾಯಿ ನೀರಿಗಾಗಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದ್ದು, ಹೋಳಿ ಹಬ್ಬದ ನಂತರ ರೈತರು ಒಗ್ಗೂಡಿ ಧರಣಿಗೆ ಮುಂದಾಗಲಿದ್ದಾರೆ. ಪ್ರಹ್ಲಾದ ಜೋಶಿಯ ಮನೆ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಮಹದಾಯಿಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಒತ್ತಡ ಹೇರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

‘ಗೋವಾ ಸರ್ಕಾರದ ಅಡ್ಡಿ – ಕೇಂದ್ರದ ನಿರ್ಲಕ್ಷ್ಯ’

ಮಹದಾಯಿ ಯೋಜನೆಯ ಅಡಿಯಲ್ಲಿ 36 ಗ್ರಾಮಗಳ ಸ್ಥಳಾಂತರ, 300 ಕಿಲೋಮೀಟರ್ ಕಾಲುವೆ ನಿರ್ಮಾಣ ಮತ್ತು 2.25 ಲಕ್ಷ ಹೆಕ್ಟೇರ್ ಭೂಮಿ ನೀರಾವರಿ ಘೋಷಿಸಲಾಗಿದೆ. ಆದರೆ ಗೋವಾ ಸರ್ಕಾರ ಈ ಕುರಿತು ಸರಿಯಾದ ಮಾಹಿತಿ ಪಡೆಯದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಸೂಕ್ತ ವಿವರಗಳನ್ನು ನೀಡಿದರೂ, ಈ ವಿಚಾರದಲ್ಲಿ ಮುಂದುವರಿದ ಪ್ರಗತಿ ಕಂಡುಬಂದಿಲ್ಲ.

ನೀರಿಗಾಗಿ ಹೋರಾಟ ದುರದೃಷ್ಟಕರವಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಮಹದಾಯಿ ಹೋರಾಟವು ಜನಾಂದೋಲನ ರೂಪ ಪಡೆಯಬೇಕಾಗಿದೆ ಎಂದು ರೈತ ಸೇನಾ ಮುಖಂಡರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...