ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ನಡೆದಿದೆ ಎನ್ನಲಾದ ₹400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್ಗಳ ದರೋಡೆ ಪ್ರಕರಣ ವರ್ಷಗಳ ಬಳಿಕ ಬಹಿರಂಗವಾಗಿದ್ದು, ದೂರುದಾರ ಸಂದೀಪ ಹೇಳಿಕೆಯ ಪ್ರಕಾರ ದರೋಡೆ ಆಗಿದ್ದು 400 ಕೋಟಿ ಅಲ್ಲ 1000 ಕೋಟಿ ಎಂದು ವಿಡಿಯೋ ಹೇಳಿಕೆ ನೀಡಿರುವದು ರಾಜ್ಯ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಬಂಧನವಾಗಿದೆ.
ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದೆಂದು ಹೇಳಲಾಗುತ್ತಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣ ಪ್ರಕರಣದ ತನಿಖೆ ವೇಳೆ ಈ ಭಾರಿ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ವಿಶೇಷ ತನಿಖಾ ದಳ (SIT) ರಚಿಸಲು ಆದೇಶಿಸಿದ್ದು, ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಪೊಲೀಸರು ಕಂಟೇನರ್ಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, “ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ ಈ ಹಂತದಲ್ಲಿ ಪ್ರಕರಣದ ಕುರಿತು ನಮಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ಇನ್ನೂ ಆರಂಭಿಕ ಹಂತದಲ್ಲಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ ಜಿಲ್ಲಾ ಆಸ್ಪತ್ರೆಯ ‘ಸಖಿ’ ಕೇಂದ್ರಕ್ಕೆ ಕೇಸ್ ವರ್ಕರ್ ನೇಮಕಕ್ಕೆ ಅರ್ಜಿ ಆಹ್ವಾನ
“ಸಂಪೂರ್ಣ ಮಾಹಿತಿ ಲಭ್ಯವಾದ ಬಳಿಕ ಕರ್ನಾಟಕ ಪೊಲೀಸ್ ಇಲಾಖೆಯ ಪಾತ್ರ ಹಾಗೂ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಮುಂದಿನ ತನಿಖೆಗಳಲ್ಲಿ ಕರ್ನಾಟಕದ ಸಹಕಾರ ಅಗತ್ಯವಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.




