ಬೆಳಗಾವಿ | ಭರವಸೆಯಾಗಿಯೇ ಉಳಿದ ಗೋಕಾಕ್ ಫಾಲ್ಸ್‌ನಲ್ಲಿ ಗಾಜಿನ ಸೇತುವೆ ನಿರ್ಮಾಣದ ಭರವಸೆ

Date:

ಬೆಳಗಾವಿ ಜಿಲ್ಲೆಯ ಗೋಕಾಕ್‌ ಫಾಲ್ಸ್ ಎಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಗೋಕಾಕ್ ಫಾಲ್ಸ್ ಅಮೆರಿಕಾದ ನಯಾಗರ ಜಲಪಾತವನ್ನು ಹೊಲುವುದರಿಂದ ಇದನ್ನು ‘ಭಾರತದ ನಯಾಗರ ಜಲಪಾತ’ ಎಂದು ಕರೆಯಲಾಗುತ್ತದೆ.

ಗೋಕಾಕ್‌ ನಗರದಿಂದ 6 ಕಿಲೋ ಮೀಟರ್ ದೂರದಲ್ಲಿರುವ ಈ ಫಾಲ್ಸ್, ಘಟಪ್ರಭಾ ನದಿಯಿಂದ ಉಂಟಾಗುತ್ತದೆ. 180 ಅಡಿ ಎತ್ತರದಿಂದ ನೀರು ಧುಮ್ಮಿಕ್ಕುವ ನಯನ ಮನೋಹರ ದೃಶ್ಯವು ನೋಡುಗರ ಕಣ್ಮನ ಸೆಳೆಯುತ್ತದೆ.

ಜೂನ್ ತಿಂಗಳಿನಿಂದ ಡಿಸೆಂಬರ್ ತಿಂಗಳಿನವರೆಗೂ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡಬಹುದು. ವಾರದಿಂದೀಚೆಗೆ ಹಿಡಕಲ್ ಡ್ಯಾಮ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ದಪ್ಪ ಕೆಂಪು ಕಂದು ಬಣ್ಣದ ಅಂಚನ್ನು ಉಜ್ಜುತ್ತಾ ಹರಿದು ನೀರು ಬರುತ್ತಿದೆ. ಇದು ಫಾಲ್ಸ್‌ನ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಿಸಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಫಾಲ್ಸ್ ನೋಡಲು ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗ ತೊಡಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐದಾರು ವರ್ಷಗಳ ಹಿಂದೆ ಸೇತುವೆ ಮೇಲೆ ನಿಂತು ಫಾಲ್ಸ್ ಸೌಂದರ್ಯವನ್ನು ಜನರು ನೋಡಿ ಕಣ್ತುಂಬಿಕೊಳ್ಳುತ್ತಿದ್ದರು. ಆದರೆ 2019ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ತೂಗು ಸೇತುವೆಗೆ ಹಾನಿಯಾಗಿ ಪ್ರವಾಸಿಗರಿಗೆ ಸಂಚಾರವನ್ನು ಬಂದ್ ಮಾಡಲಾಗಿದ್ದು, ಸದ್ಯ ಕಾರ್ಖಾನೆಯ ಸಿಬ್ಬಂದಿಗಳಿಗೆ ಮಾತ್ರ ಸೇತುವೆಯ ಮೇಲೆ ಸಂಚರಿಸಲು ಅವಕಾಶ ನೀಡಲಾಗಿದೆ.

ಗೋಕಾಕ್ ಫಾಲ್ಸ್ ಸೇತುವೆಯ ಇತಿಹಾಸ

1887ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಪರೀಕ್ಷಾರ್ಥವಾಗಿ ಜಲವಿದ್ಯುತ್ ಉತ್ಪಾದನೆ ಮಾಡಲಾಯಿತು. 1882ರಲ್ಲಿ ಘಟಕ ನಿರ್ಮಿಸಲಾಯಿತು. ಹಾಗೂ 1883 ದಿಲ್ಲಿ ದೂಪಧಾಳ ಬಳಿ ಅಣೆಕಟ್ಟು ನಿರ್ಮಿಸಲಾಯಿತು. ಅದರೊಂದಿಗೆ ಹತ್ತಿ ಮಿಲ್‌ಗೆ ಆಗಮಿಸುವ ಕಾರ್ಮಿಕರ ಸಂಚಾರಕ್ಕಾಗಿ ತೂಗು ಸೇತುವೆ ನಿರ್ಮಾಣವಾಯಿತು.

ಗಾಜಿನ ಸೇತುವೆ: ರಮೇಶ್ ಜಾರಕಿಹೊಳಿಯವರು ಕೊಟ್ಟ ಭರವಸೆ ಈಡೇರಿಲ್ಲ

2020ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯವರು ಗೋಕಾಕ್ ಫಾಲ್ಸ್‌ನಲ್ಲಿ 350 ಕೋಟಿ ವೆಚ್ಚದಲ್ಲಿ ನೀರು ಧುಮ್ಮಿಕ್ಕುವ ಸ್ಥಳದಿಂದ 20 ರಿಂದ 30 ಮೀಟರ್ ಅಂತರದಲ್ಲಿ ಅಮೆರಿಕಾದಲ್ಲಿನ ಗಾಜಿನ ಸೇತುವೆಯ ಮಾದರಿಯಲ್ಲಿ ಸೇತುವೆ ಹಾಗೂ ಯಾತ್ರಿ ನಿವಾಸ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು. ಇದಕ್ಕಾಗಿ ನೀಲನಕ್ಷೆಯು ಸಹ ತಯಾರಾಗಿದೆ ಎಂದು ಭರವಸೆ ಕೊಟ್ಟಿದ್ದರು. ಆದರೆ ಇಂದಿಗೂ ಆ ಭರವಸೆ ಈಡೇರಿಲ್ಲ ಎಂಬುದು ಮಾತ್ರ ವಾಸ್ತವ.

ನೀಲನಕ್ಷೆ ತಯಾರಾಗಿದೆ ಎಂದಿದ್ದ ರಮೇಶ್ ಜಾರಕಿಹೊಳಿಯವರೇ ಇದಕ್ಕೆ ಉತ್ತರಿಸಬೇಕಿದ್ದು, ಆ ನೀಲನಕ್ಷೆ ಏನಾಗಿದೆ ಎಂಬುದನ್ನು ತಿಳಿಸಬೇಕಿದೆ. ಗಾಜಿನ ಸೇತುವೆ ಈವರೆಗೆ ನಿರ್ಮಾಣವಾಗದಿರುವುದು ರಾಜ್ಯದ ಬೇರೆ ಬೇರೆ ಭಾಗಗಳಿಂದ ಗೋಕಾಕ್ ಫಾಲ್ಸ್ ನೋಡಲು ಬರುವ ಪ್ರವಾಸಿಗರಿಗೆ ನಿರಾಸೆಯನ್ನುಂಟು ಮಾಡಿದೆ.

ಸದ್ಯ ಹಳೆಯ ಸೇತುವೆ ಸಂಚಾರ ಬಂದ್ ಆಗಿರುವುದರಿಂದ ಇಲ್ಲಿಗೆ ಬರುವ ಪ್ರವಾಸಿಗರಿಗೆ ಬೇಸರ ಮೂಡಿಸಿದೆ. ಪ್ರವಾಸಿಗರು ದೂರದಿಂದಲೇ ಜಲಪಾತ ವೀಕ್ಷಣೆ ಮಾಡಿ ತೆರಳಬೇಕಾಗಿದೆ.

ನೈಸರ್ಗಿಕ ಸೌಂದರ್ಯದ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಫಾಲ್ಸ್ ಅಮೆರಿಕಾ ಮಾದರಿಯಲ್ಲಿ ಗಾಜಿನ ಸೇತುವೆ ನಿರ್ಮಾಣ ಮಾಡಿದರೆ ಜಲಪಾತಕ್ಕೆ ಮುಕುಟಮಣಿಯಂತಾಗುತ್ತದೆ. ಆದ್ದರಿಂದ, ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಮೇಶ್ ಜಾರಕಿಹೊಳಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಎಂಬುವುದು ಪ್ರವಾಸಿಗರ ಒತ್ತಾಯವಾಗಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...