ಬಳ್ಳಾರಿ | ಕೈಗಾರಿಕೆಗಳಲ್ಲಿ ಶೇ.70 ಹುದ್ದೆಗಳನ್ನು ಸ್ಥಳೀಯ ಕನ್ನಡಿಗರಿಗೆ ಮೀಸಲಿಡಲಿ: ನಾರಾಯಣಸ್ವಾಮಿ ಒತ್ತಾಯ

Date:

ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಒತ್ತಾಯಿಸಿದರು.

ಈ ಕುರಿತು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, “ತಾಲೂಕಿನ ಹಲಕುಂದಿ ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕುಡಿತಿನಿ, ತೋರಣಗಲ್ಲು, ಬೆಳಗಲ್ಲು, ಸಿಡಿಗಿನಮೊಳ ಮತ್ತು ಜಿಲ್ಲೆಯ ಇತರ ಕಡೆಗಳಲ್ಲಿ ಖಾಸಗಿ ಕಾರ್ಖಾನೆಗಳಿದ್ದು, ಆ ಕಾರ್ಖಾನೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರರಾಜ್ಯದಿಂದ ಬಂದವರಿಗೆ ಉದ್ಯೋಗವನ್ನು ನೀಡಿ ಸ್ಥಳೀಯರನ್ನು ಕಡೆಗಣಿಸಲಾಗಿದೆ. ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಸ್ಥಳೀಯರ ಸಂಖ್ಯೆ ಕಡಿಮೆಯಿದೆ. ನೆಲ, ಜಲ, ಊರು, ಕೇರಿ ನಮ್ಮದು ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ನಮ್ಮವರಲ್ಲ. ಇದೆಂಥ ದುರದೃಷ್ಟ! ಕೂಡಲೇ ಕಾರ್ಖಾನೆಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದರು.

ಈ ಭಾಗದಲ್ಲಿ ಖಾಸಗಿ ಕಾರ್ಖಾನೆಗಳು ಮುಂದುವರಿಯಬೇಕಾದರೆ ಸ್ಥಳೀಯರಿಗೆ ಉದ್ಯೋಗವಕಾಶ ನೀಡಲೇಬೇಕು. ಇಲ್ಲದಿದ್ದದಲ್ಲಿ ಕಾರ್ಖಾನೆಗಳು ಬಳ್ಳಾರಿ ಜಿಲ್ಲೆ ಮತ್ತು ತಾಲೂಕನ್ನು ತೊರೆದು ಬೇರೆ ಕಡೆ ಸ್ಥಳಾಂತರಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ತೈಲ ಹೊರತೆಗೆಯುವ ಕಾರ್ಖಾನೆ ಮೇಲೆ ದಾಳಿ; 7 ಬಾಲ ಕಾರ್ಮಿಕರ ರಕ್ಷಣೆ

ಜಿಲ್ಲೆಯಾದ್ಯಂತ ಐಟಿಐ, ಡಿಪ್ಲಮಾ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ನಿರುದ್ಯೋಗಿ ಯುವ ಸಮೂಹವೇ ಇದೆ. ಅವರಿಗೆ ಕಾರ್ಖಾನೆಗಳಲ್ಲಿ ಉದ್ಯೋಗ ಕಲ್ಪಿಸುವ ಮೂಲಕ ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಕಾರ್ಖಾನೆಗಳ ಮಾಲೀಕರನ್ನು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...