ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

Date:

ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪದಡಿ ಬಳ್ಳಾರಿ ಜಿಲ್ಲಾ ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷ ಎ ರಾಮಕೃಷ್ಣ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ಸಂಘದ ಹಾಲಿ ಅಧ್ಯಕ್ಷ ಎ.ರಾಮಕೃಷ್ಣ ಕಳೆದ ಒಂದು ವರ್ಷದಿಂದ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಂಘದ 11 ಜನ ನಿರ್ದೇಶಕರು ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಸಂಘದ ನೋಂದಣಾಧಿಕಾರಿಗಳು ಹಾಗೂ ಉಪನಿಬಂಧಕರಿಗೆ ಕಳೆದ 15 ದಿನಗಳ ಹಿಂದೆ ದೂರು ಸಲ್ಲಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಸಂಘದ ಹಾಲಿ ಅಧ್ಯಕ್ಷರ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಅವರ ಮೇಲೆ ಸೂಕ್ತ ಕ್ರಮ ಕ್ರಮಕೈಗೊಳ್ಳಬೇಕು. ಸಂಘದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಸೊಸೈಟಿಯಲ್ಲಿ ಚುನಾವಣೆ ನಡೆದು 11 ಜನ ಚುನಾಯಿತ ನಿರ್ದೇಶಕರುಗಳು ಮತದಾನ ಮಾಡುವ ಮೂಲಕ ಪ್ರತಿಸ್ಪರ್ಧಿ ಶೀಲಾ ಬ್ರಹ್ಮಯ್ಯ ಅವರ ವಿರುದ್ಧ ರಾಮಕೃಷ್ಣ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು. ಅಧ್ಯಕ್ಷರಾಗಿ ಆಯ್ಕೆಯಾದ ರಾಮಕೃಷ್ಣ ಅವರು ನಿರ್ದೇಶಕರ ಗಮನಕ್ಕೆ ತರದೆ ಅನುಕೂಲಕ್ಕೆ ತಕ್ಕಂತೆ ಸಭೆಗಳನ್ನು ಕರೆದು ನಿರ್ಣಯ ತೆಗೆದುಕೊಳ್ಳುತ್ತಾರೆ” ಎಂದು ಆರೋಪಿಸಲಾಗಿದೆ.

“ಈ ಹಿಂದಿನ ಅಧ್ಯಕ್ಷರು ನಡೆಸಿದ ಅಕ್ರಮಗಳ ಬಗ್ಗೆ ಹಾಗ ಎಲ್ಲರೂ ಸುಮ್ಮನಿದ್ದು ಈಗ ಯಾಕೆ ಮಾತನಾಡುತ್ತಿರಾ? ಎಂದು ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಸಂಘದ ಕಟ್ಟಡದಿಂದ ಪ್ರತಿ ತಿಂಗಳು ಸುಮಾರು 1.50 ಲಕ್ಷ ರೂಪಾಯಿಗಳ ಬಾಡಿಗೆ ಹಣವನ್ನು ಸರಿಯಾಗಿ ಸಂಘದ ಬ್ಯಾಂಕ್ ಖಾತೆಗೆ ಜಮಾ ಮಾಡದೇ ಸ್ವಂತಕ್ಕೆ ಬಳಸುತ್ತಿದ್ದಾರೆ. ಕೈಮಗ್ಗದಲ್ಲಿ ಉತ್ಪತ್ತಿಯಾದ ಕಾಟನ್ ಬಟ್ಟೆಗಳನ್ನು ಮನಸೋ ಇಚ್ಛೆ ಮಾರಾಟ ಮಾಡಿ ಇದರಿಂದ ಸಂಘಕ್ಕೆ ನಷ್ಟವುಂಟು ಮಾಡುತ್ತಿದ್ದಾರೆ. ಸಂಘದ ಆವರಣದಲ್ಲಿರುವ ಗುಜರಿ ಅಂಗಡಿಯನ್ನು ತೆರವುಗೊಳಿಸುವಂತೆ ಸಭೆಯಲ್ಲಿ ಎಲ್ಲಾ ನಿರ್ದೇಶಕರು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ, ಅಧ್ಯಕ್ಷರು ಗುಜರಿ ಅಂಗಡಿ ಮಾಲಿಕರಿಂದ 2 ಲಕ್ಷ ಲಂಚ ಸ್ವೀಕರಿಸಿದ್ದು ಸ್ಥಳಾಂತರಗೊಳಿಸದೇ ನೆಪ ಹೇಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇವರ ಎಲ್ಲಾ ಅವ್ಯವಹಾರಕ್ಕೆ ಕಾರ್ಯದರ್ಶಿ ರಂಗಸ್ವಾಮಿ ಬೆಂಬಲವಾಗಿ ನಿಂತಿದ್ದಾರೆ. ಇವರಿಬ್ಬರನ್ನು ಕೂಡಲೇ ಸಂಘದಿಂದ ವಜಾಗೊಳಿಸಲು ಕ್ರಮಕೈಗೊಳ್ಳಬೇಕು. 2019ರಿಂದ ಇಲ್ಲಿಯವರೆಗೂ ಸುಮಾರು ರೂ 13,66,699/- ಅಕ್ರಮ ವ್ಯವಹಾರ ನಡೆದಿದೆ. ಈ ಬಗ್ಗೆ ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆದು ಅದನ್ನು ಎ ರಾಮಕೃಷ್ಣ ಅವರಿಂದ ಸಂಘದ ನಷ್ಟ ಭರಿಸುವಂತೆ ನ್ಯಾಯಾಲಯ ಆದೇಶಿಸಿದ್ದರೂ ಇಲ್ಲಿಯ ತನಕ ಸಂಘಕ್ಕೆ ನಷ್ಟ ಪಾವತಿಸಿಲ್ಲ. ಎರಡನೇ ಅವಧಿಗೂ ಅಧ್ಯಕ್ಷ ಸ್ಥಾನಕ್ಕೇರಿದ್ದು, ಸಂಘದ ಅಧಿನಿಯಮದ ಪ್ರಕಾರ ಕಾನೂನು ಬಾಹಿರವಾಗಿರುತ್ತದೆ. ಸರಕಾರಕ್ಕೆ ಪಾವತಿಸಬೇಕಾದ ಸೊಸೈಟಿಯ ರೂ.24 ಲಕ್ಷ ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದ್ದಾರೆ” ಎಂದು ಆರೋಪಿದರು.

ಇದನ್ನೂ ಓದಿ: ಬಳ್ಳಾರಿ | ದಲಿತರಿಗೆ ಸೇರಿದ ಜಾಗ, ಬಾವಿ ಅತಿಕ್ರಮಣ; ತೆರವಿಗೆ ಪಿ ಶೇಖರ್ ಆಗ್ರಹ

ಈ ಸಂದರ್ಭದಲ್ಲಿ ರಾಟಾಲ ಮಂಜುನಾಥ, ಓಬುಳಾಪತಿ, ಎಸ್ ನಾಗರಾಜ್, ಜಕ್ಕ ಲಕ್ಷ್ಮಿ ನಾರಾಯಣ, ಶೇಷಾದ್ರಿ, ಜಿ ಮುರುಳಿ, ಕೆ.ಎನ್ ನಾಗರಾಜ್, ಕೋನಯ್ಯ, ಎಸ್ ಲಕ್ಷ್ಮಿದೇವಿ, ಎನ್ ಪದ್ಮಾವತಿ, ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...