ಬಳ್ಳಾರಿ | ಈಶ್ವರಚಂದ್ರ ವಿದ್ಯಾಸಾಗರರ ಜನ್ಮದಿನ ಆಚರಿಸಿದ ಎಐಡಿಎಸ್‌ಒ

Date:

ಊಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ ಭಾರತದ ನೆಲಕ್ಕೆ ಆಧುನಿಕ ಜ್ಞಾನದ ಬೆಳಕನ್ನು ತಂದ ಮಹಾನ್ ಧರ್ಮನಿರಪೇಕ್ಷ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಅವರ 134ನೇ ಸ್ಮರಣ ದಿನವನ್ನು ಎಐಡಿಎಸ್‌ಒ ಬಳ್ಳಾರಿ ಜಿಲ್ಲಾ ಘಟಕ ಆಚರಿಸಿತು.

ನಗರದ ವಿಮ್ಸ್ ಗ್ರೌಂಡ್‌ನಲ್ಲಿ ನಡೆದ ಸ್ಮರಣ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಐಡಿಎಸ್ಒ ಜಿಲ್ಲಾಧ್ಯಕ್ಷ ಕೆ ಈರಣ್ಣ, “ಶತಮಾನಗಳವರೆಗೂ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಕೆಳವರ್ಗದ ಸಮುದಾಯಗಳಿಗೆ ವಿದ್ಯೆ ನೀಡಲು ಹಾಗೂ ಬಾಲ್ಯದಲ್ಲೇ ವಿಧವೆಯರಾಗಿ ನರಕದ ಬದುಕು ಸವೆಸುತ್ತಿದ್ದ ಹೆಣ್ಣುಮಕ್ಕಳ ಮರುವಿವಾಹಕ್ಕಾಗಿ ಈಶ್ವರಚಂದ್ರ ಅವರು ಅವಿರತ ಶ್ರಮಿಸಿದರು. ಜೊತೆಗೆ, ಹಳೆಯ ಗೊಡ್ಡು ಸಂಪ್ರದಾಯಗಳ ಸಂಕುಚಿತ ಚಿಂತನೆಗಳ ವಿರುದ್ಧ ಹೋರಾಡಿದ ವಿದ್ಯಾಸಾಗರರು, ನವೋದಯ ಚಳುವಳಿಯ ಪತಾಕೆಯನ್ನು ಭಾರತದ ಆಗಸದಲ್ಲಿ ಹಾರಿಸಿದರು” ಎಂದರು.

“ನಿರುದ್ಯೋಗ, ಬಡತನ, ಹಸಿವು ದೇಶದಾದ್ಯಂತ ತಾಂಡವವಾಡುತ್ತಿದೆ. ಬಡ ರೈತ ಕಾರ್ಮಿಕರು, ಮಧ್ಯಮವರ್ಗದ‌ ಜನತೆ ತುಳಿತಕ್ಕೊಳಪಡುತ್ತಿದ್ದಾರೆ. ಕುಸಂಸ್ಕೃತಿ ತೀವ್ರವಾಗಿದ್ದು, ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಎಂಥದ್ದೇ ಅನ್ಯಾಯವನ್ನೂ ಪ್ರಶ್ನಿಸುತ್ತಿದ್ದ ವಿದ್ಯಾಸಾಗರರ ಆದರ್ಶಗಳನ್ನು ಮೈಗೂಡಿಸಿಕೊಂಡು ಇಂದಿನ ಸಾಮಾಜಿಕ ಪಿಡುಗುಗಳ ವಿರುದ್ಧ ಬಲಿಷ್ಠ ಚಳವಳಿ ಕಟ್ಟಲು ಮುನ್ನುಗ್ಗಬೇಕಿದೆ. ಆಗ ಮಾತ್ರ ನಾವು ವಿದ್ಯಾಸಾಗರರಿಗೆ ನೈಜ ಗೌರವವನ್ನು ಸಲ್ಲಿಸಿದಂತಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಸಂಜೀವನ ಕೋಟೆಯಲ್ಲಿ ಕರಡಿ ದಾಳಿ; ರೈತನಿಗೆ ಮಾರಣಾಂತಿಕ ಗಾಯ

ಜಿಲ್ಲಾ ಪದಾಧಿಕಾರಿ ಕಾಂತೇಶ್, ತಿಪ್ಪೇಸ್ವಾಮಿ ಸೇರಿದಂತೆ ಹಲವಾರು ಜನ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...