ಬಳ್ಳಾರಿ | ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ನೀಡಲು ಜಿಲ್ಲಾಧಿಕಾರಿಗೆ ಎಐಕೆಕೆಎಂಎಸ್ ಮನವಿ

Date:

ಪ್ರಸ್ತುತ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿ ಜಲ್ಲಾಧಿಕಾರಿಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್)‌ ಮನವಿ ಸಲ್ಲಿಸಿತು.

ಸದ್ಯ ಒಂದು ಕ್ವಿಂಟಲ್ ಮೆಣಸಿನಕಾಯಿ ₹8,000 ದಿಂದ ₹10,000 ವರೆಗೆ ಖರೀದಿಯಾಗುತ್ತಿದೆ. ಇಷ್ಟು ಕಡಿಮೆ ಬೆಲೆಯಿಂದ ರೈತರಿಗೆ ಲಾಭವಿರಲಿ, ಹಾಕಿದ ಬಂಡವಾಳವೂ ಬರುತ್ತಿಲ್ಲ. ಇದನ್ನು ಪರಿಗಣಿಸಿ ಕೂಡಲೇ ಮೆಣಸಿನಕಾಯಿ ಕ್ವಿಂಟಲ್‌ಗೆ ₹25,000 ಹಾಗೂ ಬ್ಯಾಡಗಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹50,000 ಬೆಂಬಲ ಬೆಲೆ ನೀಡಬೇಕು ಎಂದು ನಗರದ ಗಾಂಧಿ ಭವನದಿಂದ ಪ್ರತಿಭಟನೆ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಮಾತನಾಡಿ, “ಕೇಂದ್ರ ಸರ್ಕಾರವು ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ ನೀಡಲು ಮುಂದಾಗುತ್ತಿಲ್ಲ. ವಾಣಿಜ್ಯ ಬೆಳೆಯಾದ ಕಾರಣ ಇದು ಎಂಎಸ್‌ಪಿ ಅಡಿಯಲ್ಲಿ ಸೇರುವುದಿಲ್ಲವೆಂದು ಕಾರಣ ನೀಡಿ ಬೆಂಬಲ ಬೆಲೆ ನೀಡದೆ, ನಿರಾಕರಿಸುತ್ತಿದೆ. ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಬಹುತೇಕ ರೈತರು ಮೆಣಸಿನಕಾಯಿ ಬೆಳೆದಿದ್ದಾರೆ. ಬಳ್ಳಾರಿಯ ಭಾಗಶಃ ಮೆಣಸಿನಕಾಯಿ ಬೆಳೆಯು ಬ್ಯಾಡಗಿಯ ಮಾರುಕಟ್ಟೆಗೆ ಹೋಗಿ ಮಾರಾಟವಾಗುತ್ತಿದೆ. ಇದರಿಂದ ಪ್ರಯಾಣದ ವೆಚ್ಚವೂ ಸಹ ಹೆಚ್ಚಾಗುತ್ತಿದೆ. ಅದ್ದರಿಂದ, ಕೇಂದ್ರ, ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ಘೋಷಿಸಬೇಕು” ಎಂದು‌ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, ‘ಮೆಣಸಿನಕಾಯಿ ಬೆಳೆಗೆ ತಗುಲುವ ಕಪ್ಪು ಮಚ್ಚೆ ರೋಗಕ್ಕೆ ಔಷಧ ಕಂಡುಹಿಯಬೇಕು. ಬೀಜ, ರಸಗೊಬ್ಬರ ಮತ್ತು ಕೀಟನಾಶಕದ ಬೆಲೆ ನಿಯಂತ್ರಿಸಬೇಕು. ಸರ್ಕಾರವೇ ಔಷಧ ವಿತರಣಾ ಕೇಂದ್ರ ತೆರೆಯಬೇಕು. ಇಲ್ಲದಿದ್ದರೆ ಮಾ. 4 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ’ ಎಂದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ನಾನು ಪ್ರಾಮಾಣಿಕ, ಪಕ್ಷ ಬಿಡುವ ಮಾತೇ ಇಲ್ಲ: ಮಾಜಿ ಸಚಿವ ಶ್ರೀರಾಮುಲು

ಈ ವೇಳೆ ಕೂಳೂರು ಬಸಣ್ಣ, ಸೋಮಸಮುದ್ರ ಹೊನ್ನೂರಪ್ಪ, ಜಿಲ್ಲಾ ಸಮಿತಿ ಸದಸ್ಯ ಮಂಗಪ್ಪ, ಧನರಾಜ್, ಗೋಪಾಲ್, ಕಾಸಿಂ ಸಾಬ್, ಮಲ್ಲಪ್ಪ, ರೈತ ಮುಖಂಡ ಕಲ್ಲುಕಂಬ ಪಂಪಾಪತಿ, ರೈತರಾದ ರಾಮಕೃಷ್ಣ, ವೀರೇಶ್ ಗೌಡ, ತಿಮ್ಮಪ್ಪ, ಮೋವಿಂದ್, ಗಂಗಾಧರ, ಎಂಕಾತ್, ಗಾದಿಲಿಂಗಪ್ಪ, ಮಂಜುನಾಥ ಗೌಡ, ರಾಮನ ಗೌಡ, ರಾಜಶೇಖರ್ ರೆಡ್ಡಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...