ಬಳ್ಳಾರಿ | ಬಿಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ಆರೋಪ; ಪಿಎಸಿ ಸದಸ್ಯರ ಆಕ್ರೋಶ

Date:

ಬಳ್ಳಾರಿಯ ಹೊಸಪೇಟೆ ಬಿಡಿಸಿಸಿ ಬ್ಯಾಂಕ್ ಮತ್ತು ಚಿಕ್ಕಜೋಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣಕಾಸು ಅವ್ಯವಹಾರದ ಆರೋಪ ಕೇಳಿಬಂದಿದೆ.

2019ರಲ್ಲಿ ಬ್ಯಾಂಕ್ ಕಟ್ಟಡ ನಿರ್ಮಾಣಕ್ಕಾಗಿ 15 ಲಕ್ಷ ರೂ. ಸಾಲವನ್ನು ಬಿಡಿಸಿಸಿ ಬ್ಯಾಂಕ್‌ನಿಂದ ಪಡೆದು, 15 ವರ್ಷಗಳಲ್ಲಿ ಕಂತು ಪಾವತಿಸುವಂತೆ ಒಪ್ಪಂದ ಮಾಡಿಕೊಂಡಿದ್ದರೂ, ಹೊಸ ಕಟ್ಟಡ ನಿರ್ಮಿಸದೆ ಹಳೆ ಕಟ್ಟಡವನ್ನೇ ಗಾರೆ ತೆಗೆದು ಸಿಮೆಂಟ್ ಪ್ಲಾಸ್ಟಿಂಗ್ ಮಾಡಿ ಸುಳ್ಳು ಲೆಕ್ಕ ನೀಡಿ ಹಣ ವಂಚನೆ ನಡೆದಿದೆ ಎನ್ನಲಾಗಿದೆ.

ಸಂಘದ ಸದಸ್ಯರು ಖರ್ಚು ವೆಚ್ಚದ ವಿವರ ನೀಡುವಂತೆ ಬ್ಯಾಂಕ್‌ಗೆ ಮನವಿ ಸಲ್ಲಿಸಿದರೂ, ಅಧಿಕಾರಿಗಳು ಲೆಕ್ಕ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಸದಸ್ಯರು ಆರೋಪಿಸಿದ್ದಾರೆ. ಕಟ್ಟಡ ಕಾಮಗಾರಿಯನ್ನು ಟೆಂಡರ್ ಕರೆಯದೆ ಸ್ವತಃ ನಡೆಸಿಕೊಂಡು, ನಿಯಮ ಉಲ್ಲಂಘನೆ ಮಾಡಿದ ವಿಚಾರವೂ ಬಯಲಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ, ಸಂಘದ ಸದಸ್ಯರು ಸಂಬಂಧಪಟ್ಟ ಇಲಾಖೆಗೆ ಹಾಗೂ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಲು ಸಿದ್ಧರಾಗಿದ್ದಾರೆ. ಇತ್ತ, ಹೊಸಪೇಟೆ ಕೇಂದ್ರ ಕಚೇರಿಯಲ್ಲಿಯೂ ಇತ್ತೀಚೆಗೆ ನೂರಾರು ಕೋಟಿ ಸೈಬರ್ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಳ್ಳಾರಿ | ಜೂಜು ಅಡ್ಡೆಗಳ ಮೇಲೆ ಪೊಲೀಸ್ ದಾಳಿ; 1136 ಮಂದಿ ವಿರುದ್ದ ಪ್ರಕರಣ ದಾಖಲು

ಅಖಂಡ ಬಳ್ಳಾರಿ ಜಿಲ್ಲಾ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ತಿಪ್ಪೇಸ್ವಾಮಿ ವಿರುದ್ಧ ಕುರಿಹಟ್ಟಿ ಓಬಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ರಾಜೀನಾಮೆ ಆಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.

ಕುರಿಹಟ್ಟಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಕನಡಕು ಸಣ್ಣ ಮಾರಣ್ಣ, ರೈತ ಮುಖಂಡ ಮಡಕಲಕಟ್ಟೆ ಕೃಷ್ಣಪ್ಪ, ಗುರುಲಿಂಗಣ್ಣ, ಕುರಿಹಟ್ಟಿ ವಿಶ್ವನಾಥ್ ಹಾಗೂ ಎಂ.ಬಿ. ಅಯ್ಯನಹಳ್ಳಿ ರಂಗಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...