ಬಳ್ಳಾರಿ | ಪಾಲಿಕೆ ಅವ್ಯವಸ್ಥೆ ವಿರುದ್ಧ ನಾಗರಿಕ ಸಮಿತಿ ಪ್ರತಿಭಟನೆ

Date:

ನಗರದ ಜನತೆ ಈಗಾಗಲೇ ಮೂಲಸೌಕರ್ಯಗಳ ಕೊರತೆಯಿಂದ ರೋಸಿ ಹೋಗಿದ್ದಾರೆ, ಅಲಂಕಾರಿಕ ಮತ್ತು ವೃತ್ತ ನಿರ್ಮಾಣದಂತ ಅನವಶ್ಯಕ ಖರ್ಚುಗಳ ಕಾಮಗಾರಿಗಳನ್ನು ನಿಲ್ಲಿಸಿ ಸಾರ್ವಜನಿಕರ ಹಣ ಪೋಲು ಮಾಡುವುದನ್ನು ತಡೆಯಬೇಕು ಎಂದು ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ್ ನಗರಪಾಲಿಕೆ ಹಾಗೂ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ ಮಹಾನಗರಪಾಲಿಕೆಯ ನಿರ್ಲಕ್ಷ್ಯವನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಾಲಿಕೆಯ ಅವ್ಯವಸ್ಥೆಯ ಪಟ್ಟಿಯ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ನಗರದಲ್ಲಿ, ವಿದ್ಯುತ್, ಚರಂಡಿ, ಕುಡಿಯುವ ನೀರು, ರಸ್ತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳು ಹದಗೆಟ್ಟು ಹೋಗಿವೆ. ನಗರದ ಅತ್ಯಂತ ಮುಖ್ಯ ಪ್ರದೇಶಗಳಲ್ಲಿ ರಸ್ತೆಗಳನ್ನು ಅಗೆದು ವೃತ್ತಗಳನ್ನು ನಿರ್ಮಿಸುವುದು ಅಲಂಕಾರ ಮಾಡುವುದು ಸೇರಿದಂತೆ ಇತರೆ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಇಂಥ ಸೌಂದರೀಕರಣ ಕೆಲಸವನ್ನು ಬಿಟ್ಟು ನಾಗರಿಕರಿಗೆ ಉತ್ತಮವಾದ ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 27 at 11.13.45 AM 1

ಡಾ. ಪ್ರಮೋದ್ ಎನ್ ಮಾತನಾಡಿ, “ನಗರದಲ್ಲಿ ಭಾರೀ ವಾಹನಗಳ ಸಂಚಾರದಿಂದ ಸುರಕ್ಷತೆ ಇಲ್ಲದಂತಾಗಿದೆ. ಇದನ್ನು ತಡೆಯಲು ನಗರಕ್ಕೆ ಅವಶ್ಯಕವಾದ ವರ್ತುಲ ರಸ್ತೆಯನ್ನು ತುರ್ತಾಗಿ ನಿರ್ಮಿಸಬೇಕು. ನಗರದಲ್ಲಿ ಬೀದಿನಾಯಿಗಳ ಹಾವಳಿಯನ್ನು ತಡೆಯಲು ತುರ್ತುಕ್ರಮ ಕೈಗೊಳ್ಳಬೇಕು” ಎಂದರು.

ಇದನ್ನೂ ಓದಿ: ಬಳ್ಳಾರಿ | ಚೀಲದಲ್ಲೇ ಮೊಳಕೆಯೊಡೆದ ಜೋಳ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಪಾಲಿಕೆಯ ಆಯುಕ್ತ ಜಿ. ಖಲೀಲ್ ಸಾಬ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, “ರಸ್ತೆಗಳ ಗುಂಡಿಗಳನ್ನು ಮುಚ್ಚಲು ಹಾಗೂ ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಲು ಕ್ರಮಕೈಗೊಳ್ಳುವುದಾಗಿ ಹಾಗೂ ಇತರೆ ಬೇಡಿಕೆಗಳಿಗೆ ಸಂಬಂಧಿಸಿದಂತೆ 10 ದಿನಗಳ ಒಳಗಾಗಿ ಪಾಲಿಕೆ ಅಧಿಕಾರಿಗಳು ಹಾಗೂ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಜನತೆಯ ಕುಂದುಕೊರತೆ ಸಭೆ ಕರೆಯುತ್ತೇವೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಶಾಂತಾ, ನಾಗರತ್ನ, ಶರ್ಮಾಸ್, ಸುರೇಶ್ ಜಿ, ವಿದ್ಯಾ, ಶಾಂತಿ, ಜಾಫರ್, ಬಾಬು, ಚಂದ್ರಶೇಖರ್, ಅಬ್ಬಾಸ್, ರಮೇಶ್, ಉಮಾಮಹೇಶ್, ಶಚೀರ್, ಆಂಥೋನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...