ಬಳ್ಳಾರಿ | ಐಪಿಎಸ್ ದಯಾನಂದ್ ಅಮಾನತು ರದ್ದು ಮಾಡಲು ಕಾಂಗ್ರೆಸ್‌ ಮುಖಂಡ ಬಸಪ್ಪ ಆಗ್ರಹ

Date:

ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಅವರ ಅಮಾನತನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ತಕ್ಷಣ ಮೊದಲಿನ ಹುದ್ದೆಗೆ ಮರು ನೇಮಕ ಮಾಡಬೇಕು ಎಂದು ವಾಲ್ಮೀಕಿ ಮುಖಂಡ ಕಾಂಗ್ರೆಸ್ ಮುಖಂಡ ವಿ ಕೆ ಬಸಪ್ಪ ಅಗ್ರಹಿಸಿದರು.

ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಪ್ರತಿಭಟನಾ ಮನವಿ ಪತ್ರ ಸಲ್ಲಿಸಲಾಯಿತು.

“ತಮ್ಮ ಪ್ರಾಮಾಣಿಕ ಸೇವೆಯಿಂದ ಸಾರ್ವಜನಿಕರ ಮನೆ ಮಾತಾಗಿ ಉತ್ತಮ ಅಧಿಕಾರಿ ಎನಿಸಿಕೊಂಡಿರುವ ದಯಾನಂದ ಅವರನ್ನು ಆರ್ ಸಿ ಬಿ ವಿಜಯೋತ್ಸವ ವೇಳೆ ನಡೆದ ಅವಘಡಕ್ಕೆ ಹೊಣೆ ಮಾಡಿ ಅಮಾನತು ಮಾಡಿರುವ ಸರ್ಕಾರದ ನಡೆ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕೂಟ ಅಧ್ಯಕ್ಷ ಗಾದಿಲಿಂಗನಗೌಡ ಮಾತನಾಡಿ, “ಅಹಿಂದ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ನಾವು ಗೌರವಿಸುತ್ತೇವೆ. ಆದರೆ, ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ಸಂಭ್ರಮ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯೇ ಆಗಿಲ್ಲ. ತಪ್ಪಿತಸ್ಥರು ಯಾರೆಂದು ಗೊತ್ತಾಗಿಲ್ಲ. ಹೀಗೆ ಏಕಾಏಕಿ ಶೋಷಿತ ಸಮುದಾಯದ ಅದರಲ್ಲೂ ಅಖಂಡ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯವರಾದ ದಯಾನಂದ ಅವರನ್ನು ಅಮಾನತು ಮಾಡಲಾಗಿದೆ. ತಕ್ಷಣ ಈ ಆದೇಶ ಹಿಂಪಡೆದು, ಪೊಲೀಸ್ ಆಯುಕ್ತರನ್ನಾಗಿ ಮರು ನೇಮಕ ಮಾಡಬೇಕು” ಎಂದು ಒತ್ತಾಯಿಸಿದರು.‌

WhatsApp Image 2025 06 09 at 7.20.03 PM 1

ಇದನ್ನೂ ಓದಿ: ಬಳ್ಳಾರಿ | ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು

ಜಿಲ್ಲಾ ಒಕ್ಕೂಟದ ಗೌರವಾಧ್ಯಕ್ಷ ಎ.ಮಾನಯ್ಯ ಮಾತನಾಡಿ, “ಈವರೆಗಿನ ಸೇವಾ ಅವಧಿಯಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿರುವ ದಯಾನಂದ ಅವರ ಮರುನೇಮಕ ಆಗಬೇಕು. ಅವರ ಅಮಾನತು ರದ್ದು ಮಾಡಿ ಸರ್ಕಾರ ಈ ಹಿಂದಿನ ಹುದ್ದೆ ನೀಡಬೇಕೆಂದು” ಆಗ್ರಹಿಸಿದರು.

ಈ ವೇಳೆ ಶೋಷಿತ ಸಮುದಾಯ ಒಕ್ಕೂಟದ ಕಾರ್ಯಾಧ್ಯಕ್ಷ ವಿ ಎಸ್ ಶಿವಶಂಕರ್, ಕೆ ಹನುಮಂತಪ್ಪ, ಇಮಾಮ್ ಗೋಡೆಕಾರ, ಸಂಗನಕಲ್ಲು ವಿಜಯ್, ಎನ್ ಕೆ ಸದಾಶಿವಪ್ಪ, ಬಿ ಶ್ರೀನಿವಾಸ್ ಮೂರ್ತಿ, ಧನಂಜಯ ಹಮಾಲ್, ಯರಗುಡಿ ಮುದಿ ಮಲ್ಲಯ್ಯ, ಕೆ ಕೆ ಹಾಳ್ ಸತ್ಯನಾರಾಯಣ, ಹಗರಿ ಜನಾರ್ಧನ, ಪುಷ್ಪ, ಕಲಾವತಿ, ಮಲ್ಲೇಶ್ವರಿ, ಗಡ್ಡಂ ತಿಮ್ಮಪ್ಪ, ಕುರಿಹಟ್ಟಿ ಬಿ.ಮಲ್ಲಿಕಾರ್ಜುನ, ಅಸುಂಡಿ ಹನುಮೇಶ್, ಅತಾವುಲ್ಲಾ, ಸಂಗನಕಲ್ ಲಿಂಗರಾಜ್, ಸಂಗನಕಲ್ ಜೋಗಿನ ವಿಜಯಕುಮಾರ್, ಹವಂಭಾವಿ ಗಂಗಾಧರ, ಟಿ.ಗಂಗಪ್ಪ, ಶಂಕರ್, ಅಂಜಿನಪ್ಪ ಎಚ್.ಕೆ, ರಮೇಶ್, ಎರಿಸ್ವಾಮಿ, ವೈ ರವೀಂದ್ರ ನೆಟ್ಟೆಕಲ್ಲಪ್ಪ, ಕುಸುಮ, ರವಿಕುಮಾರ್ ಸಂಗನಕಲ್, ದೇವಿನಗರ ಭೀಮಲಿಂಗ, ಉಮೇಶ್, ಕೆ.ಎರ್ರಿಸ್ವಾಮಿ, ರಾಮು ನಾಯಕ್, ಬೆಳಗಲ್ ಹುಲುಗಪ್ಪ, ಬೆಳಗಲ್ ಜಂಬುನಾಥ, ಮರಿಸ್ವಾಮಿಮಠ ವಸಂತ್ ಕುಮಾರ್, ಎಚ್.ಹಳ್ಳಪ್ಪ, ಸಂಗನಕಲ್ಲು ದಿವಾಕರ್ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...