ಬಳ್ಳಾರಿ | ನೀರಿನ ಮೂಲಗಳ ಸಂರಕ್ಷಣೆ ಸಾರ್ವಜನಿಕರ ಆದ್ಯತೆಯಾಗಬೇಕು: ಡಾ. ಯಲ್ಲಾ ರಮೇಶ್‌ಬಾಬು

Date:

ಕುಡಿಯುವ ನೀರಿನ ಮೂಲಗಳ ಸಂರಕ್ಷಣೆಯು ಸಾರ್ವಜನಿಕರ ಆದ್ಯತೆಯೂ ಆಗಿದ್ದು, ಅವುಗಳನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯುವ ಮೂಲಕ ಸಂಭಾವ್ಯ ವಾಂತಿ-ಭೇದಿ ಪ್ರಕರಣಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ಹೇಳಿದರು.

ನಗರದ ಗೌತಮ್ ನಗರ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, “ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಭೇದಿ ಸೇರಿದಂತೆ ಟೈಫಾಯಿಡ್, ಕಾಲರಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತವೆ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಕುಡಿಯುವ ನೀರಿನ ಮೂಲಗಳು ಕಲುಷಿತವಾಗುವ ಸಾಧ್ಯತೆ ಇರುತ್ತವೆ. ಮನೆಯ ಮುಂದೆ ನಳದ ಪೈಪ್‌ಗಳು ತಗ್ಗಿನಲ್ಲಿ ಕಂಡುಬರುತ್ತಿದ್ದು, ಇದರಿಂದ ಅನಗತ್ಯ ನೀರು ಸಂಗ್ರಹವಾಗಿ ಪುನಃ ನೀರಿನ ಪೈಪ್‌ಗಳಲ್ಲಿ ವಾಪಸ್ಸು ಹೋಗುವ ಮೂಲಕ ನೀರು ಕಲುಷಿತವಾಗುವ ಸಾಧ್ಯತೆಯಿದೆ. ಈ ಹಿನ್ನಲೆ ನಳದ ಪೈಪ್‌ಗಳು ಮನೆಯ ಮುಂದೆ ನೆಲದ ಮೇಲ್ಮಟ್ಟದಲ್ಲಿ ಇರುವಂತೆ ಜಾಗೃತವಹಿಸಬೇಕು” ಎಂದು ತಿಳಿಸಿದರು.

“ಸಂಭಾವ್ಯ ವಾಂತಿ-ಭೇದಿ ಕಂಡುಬರದಂತೆ ಜಾಗ್ರತೆ ವಹಿಸಲು ಮಲ-ಮೂತ್ರ ವಿಸರ್ಜನೆಗಾಗಿ ಶೌಚಾಲಯಗಳನ್ನು ಬಳಸಬೇಕು. ಸಾಧ್ಯವಾದಷ್ಟು ಬಿಸಿ ಆಹಾರ ಸೇವೆನೆಗೆ ಆದ್ಯತೆ ನೀಡಬೇಕು. ರಸ್ತೆ ಬದಿ ತೆರೆದಿಟ್ಟ ಅಥವಾ ಕತ್ತರಿಸಿದ ಹಣ್ಣು ತಿನ್ನಬಾರದು. ಊಟದ ಮೊದಲು ಹಾಗೂ ಶೌಚದ ನಂತರ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತಪ್ಪದೇ ತೊಳೆಯಬೇಕು. ಮನೆಯಲ್ಲಿ ವಾಂತಿ-ಭೇದಿ ಅಥವಾ ಕಾಲರಾ ಸೋಂಕಿತರಿದ್ದಲ್ಲಿ ಮನೆಯಲ್ಲೇ ತಯಾರಿಸಿದ ಗಂಜಿ, ಬೇಳೆ ತಿಳಿಸಾರು, ನಿಂಬು ಪಾನಕ ಹಾಗೂ ಸಾಧ್ಯವಾದರೆ ಎಳೆನೀರು ಕೊಡಬೇಕು. ಜಿಲ್ಲೆಯಲ್ಲಿ ಜಿಲ್ಲಾ ಕಾಲರಾ ನಿಯಂತ್ರಣ ತಂಡ ಈಗಾಗಲೇ ನಿರಂತರವಾಗಿ ನೀರಿನ ಮೂಲಗಳ ಪರೀಕ್ಷೆ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಂದ ಜಾಗೃತರಾಗಿರಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು

“ವಾಂತಿಭೇದಿ ಉಂಟಾದ ಸಂದರ್ಭದಲ್ಲಿ ದೇಹದ ನಿರ್ಜಲೀಕರಣ ತಡೆಯಲು ಓಆರ್‌ಎಸ್ ಜೀವಜಲ ದ್ರಾವಣವು ಅತ್ಯಂತ ಪರಿಣಾಕಾರಿಯಾಗಿದ್ದು, ಒಂದು ಲೀಟರ್ ನೀರಿಗೆ ಸಂಪೂರ್ಣ ಒಂದು ಪೊಟ್ಟಣದ ಪುಡಿಯನ್ನು ಸ್ವಚ್ಚವಾದ ಪಾತ್ರೆಯಲ್ಲಿ ಹಾಕುವ ಮೂಲಕ ದ್ರಾವಣ ತಯಾರಿಸಿ ಒಂದು ದಿನದ ಒಳಗಡೆ ಜೀವಜಲ ದ್ರಾವಣ ಕುಡಿಯುವ ಮೂಲಕ ಖಾಲಿ ಮಾಡಬೇಕು. 24 ಗಂಟೆಗಳ ನಂತರ ಪುನಃ ಬಳಸಬಾರದು” ಎಂದು ತಿಳಿಸಿದರು.

ಗೌತಮ್ ನಗರ ಬಡಾವಣೆಯ ʼನಮ್ಮ ಕ್ಲಿನಿಕ್ʼ ವೈದ್ಯ ಡಾ.ಸ್ಯಾಮ್ಯುಯೆಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಹೆಚ್‌ಐಒ ದುರ್ಗಾಪ್ರಸಾದ್, ಯೋಗಾನಂದ, ಆಶಾಕಾರ್ಯಕರ್ತೆ ಸಾಜಿಯಾ, ಗೀತಾ, ಸುಮಿತ್ರ, ವೀರಭದ್ರ ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...