ಬಳ್ಳಾರಿ | ಅಲೆಮಾರಿ ಚನ್ನದಾಸ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಲು ಡಿ.ರಂಗಯ್ಯ ಆಗ್ರಹ

Date:

ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ, ಹೊಲೆಯ ಮತ್ತು ಮಾಲದಾಸರ ಸಮುದಾಯಕ್ಕೆ ಶೇ.3ರಷ್ಟು ಮೀಸಲಾತಿ ಕಲ್ಪಿಸಿಕೊಡಲು ಚನ್ನದಾಸ ಸಮುದಾಯ ಸಂಘದ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ ರಂಗಯ್ಯ ಆಗ್ರಹಿಸಿದರು.

“ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ವರದಿಯ ಪ್ರಕಾರ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿರುವ ಚನ್ನದಾಸರ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಮೀಸಲು ನೀಡಬೇಕೆಂದು” ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರಿಗೆ ಮನವಿ ಮಾಡಿದರು.

ನಗರದಲ್ಲಿ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿ ಮಾಧ್ಯಮದ ಜತೆ ಮಾತನಾಡಿ, “ಪರಿಶಿಷ್ಟ ಜಾತಿಯಲ್ಲಿ ಬರುವ ಅಲೆಮಾರಿ ಸಮುದಾಯದ ಚನ್ನದಾಸರ, ವಲಯದಾಸರ, ಮಾಲದಾಸರ ಜಾತಿಗಳಿಗೆ ಕಲ್ಪಿಸಿರುವ ಮೀಸಲಾತಿ ಯಾವುದಕ್ಕೂ ಸಾಲುವುದಿಲ್ಲ. ಚನ್ನದಾಸರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಳ ಮೀಸಲಾತಿಯಲ್ಲಿ ಅವಕಾಶ ನೀಡಬೇಕು. ಕಡ್ಡಾಯವಾಗಿ ಮೀಸಲಾತಿ ನಿಗದಿಪಡಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಮುತ್ತೂಟ್ ಫಿನ್‌ಕಾರ್ಪ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಈ ವೇಳೆ ಚನ್ನದಾಸರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಹದೇವಪ್ಪ, ಅಧ್ಯಕ್ಷ ಡಿ ಮಂಜುನಾಥ್, ಉಪಾಧ್ಯಕ್ಷ ಏರಿಸ್ವಾಮಿ, ಡಿ ರಾಮಯ್ಯ, ಡಿ ರಂಗಣ್ಣ, ಡಿ ರಾಮಣ್ಣ, ಡಿ ಲಕ್ಷ್ಮಣ ಸೋಮಶೇಖರ್ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...