ಬಳ್ಳಾರಿ | ಅಂಗವಿಕಲರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸಿ ಅ.ನಲ್ಲಿ ಬೆಂಗಳೂರು ಚಲೋಗೆ ನಿರ್ಧಾರ: ಜಿ ಎನ್ ನಾಗರಾಜ್

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗವಿಕಲರ ಮಾಸಿಕ ಪಿಂಚಣಿಯನ್ನು ಎರಡೂ ಸರ್ಕಾರ ₹10,000‌ಕ್ಕೆ ಹೆಚ್ಚಿಸಬೇಕು ಎಂದು ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷ ಜಿ ಎನ್ ನಾಗರಾಜ್ ಸರ್ಕಾರಗಳನ್ನು ಒತ್ತಾಯಿಸಿದರು.

ಬಳ್ಳಾರಿ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಕಳೆದ ಹಲವು ದಶಕಗಳಿಂದ ಕೇಂದ್ರ ಸರ್ಕಾರ ಇಂದಿರಾಗಾಂಧಿ ಡಿಸಬಿಲಿಟಿ ಪೆನ್ಷನ್‌ ಸ್ಕೀಮ್ ಅಡಿಯಲ್ಲಿ ಕೇವಲ 30 ರೂಪಾಯಿಗಳಿಂದ ಆರಂಭವಾದ ಯೋಜನೆಯು ಕೇವಲ 100-200 ರೂಪಾಯಿಗಳಷ್ಟು ಮಾತ್ರ ಹೆಚ್ಚಳ ಮಾಡುತ್ತ ಬರುತ್ತಿದೆ” ಎಂದು ಹೇಳಿದರು.

“ದೈಹಿಕವಾಗಿ ದುರ್ಬಲಗೊಂಡಿರುವ ಅಂಗವಿಕಲ ಹಾಗೂ ವಿಶೇಷವಿಕಲಚೇತನರಿಗೆ ಬರುವ ಇಂದಿನ ಪಿಂಚಣಿ ಅವರ ಆರ್ಥಿಕ ಹೊರೆಯನ್ನು ನೀಗಿಸಲಾರದು. ಆದ್ದರಿಂದ, ಕೇಂದ್ರ ಸರ್ಕಾರ 5000ದಂತೆ ಹಾಗೂ ರಾಜ್ಯ ಸರ್ಕಾರ 5000ದಂತೆ ಒಟ್ಟು 10,000 ರೂಪಾಯಿಗಳಿಗೆ ಪಿಂಚಣಿ ಹೆಚ್ಚಿಸಬೇಕು” ಎಂದು ಸರ್ಕಾರಗಳನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೆರೆಯ ಆಂಧ್ರಪ್ರದೇಶದಲ್ಲಿ 6000 ರೂಪಾಯಿಗಳನ್ನು ನೀಡುತ್ತಿದೆ. ಶೇ.80ರಷ್ಟು ವಿಕಲತೆ ಹೊಂದಿರುವವರಿಗೆ ಹತ್ತು ಸಾವಿರ, ನೂರರಷ್ಟು ವಿಕಲತೆ ಹೊಂದಿರುವವರಿಗೆ 15 ಸಾವಿರ ರೂಪಾಯಿಗಳನ್ನು ನೀಡುತ್ತಿದೆ. ಅದೇ ರೀತಿ ರಾಜಸ್ಥಾನದಲ್ಲಿ ಬೆಲೆ ಏರಿಕೆಯ ಸೂಚ್ಯಂಕಕ್ಕೆ ಅನುಗುಣವಾಗಿ ತುಟ್ಟಿ ಭತ್ಯೆಯ ರೂಪದಲ್ಲಿ ವಾರ್ಷಿಕ ಶೇ.15ರಷ್ಟು ಪಿಂಚಣಿಯನ್ನು ಹೆಚ್ಚಳ ಮಾಡಲು ಶಾಸನ ಸಭೆಯಲ್ಲಿ ಅಂಗೀಕರಿಸಲಾಗಿದೆ. ಅದೇ ಪ್ರಕಾರವಾಗಿ ನಮ್ಮ ರಾಜ್ಯದಲ್ಲೂ 10 ಸಾವಿರ ರೂಪಾಯಿಗಳ ಪಿಂಚಣಿಯನ್ನು ನೀಡಬೇಕೆಂದು ಒತ್ತಾಯಿಸಿ ಅಕ್ಟೋಬರ್‌ನಲ್ಲಿ ರಾಜಭವನ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಅಂಗವಿಕಲರ ರೈತ ಸಂಘ ಕಟ್ಟಲು ನಿರ್ಧಾರ

“ವಿಕಲಚೇತನರು ಕೃಷಿ ಕೆಸಲವನ್ನು ಮಾಡಲು ತೊಂದರೆಯಾಗುತ್ತಿದೆ. ತುಂಡು ಭೂಮಿಯಿರುವ ವಿಕಲಚೇತನರಿಗೆ ವಿಶೇಷವಾಗಿ ವಾತವರಣಗಳನ್ನು ಸೃಷ್ಟಿಸುವ ಸಲುವಾಗಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆಗಳು ವಿಕಲಚೇತನ ಸ್ನೇಹಿಯಾದ ಯಂತ್ರೋಪಕರಣಗಳನ್ನು ಅಭಿವೃದ್ಧಿಪಡಿಸಬೇಕು ಅಥವಾ ಅವುಗಳನ್ನು ಹೊಂದಲು ಹೆಚ್ಚಿನ ಧನಸಹಾಯವನ್ನು ಒದಗಿಸಬೇಕು” ಎಂದು ಸರ್ಕಾರವನ್ನು ಅಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ, ಆರ್‌ ಯಶಸ್ವಿ ಗುರುಸಿದ್ಧಮೂರ್ತಿ ಸತ್ಯಬಾಬು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...