ಬಳ್ಳಾರಿ | ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹ; ಪಂಜಿನ ಮೆರವಣಿಗೆ

Date:

ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ಹಳೆ ತರಕಾರಿ ಮಾರುಕಟ್ಟೆಯಿಂದ ಪ್ರಾರಂಭವಾಗಿ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಗಳ ಮೂಲಕ ಶಾಸಕರ ಕಚೇರಿವರೆಗೆ ಪಂಜಿನ ಮೆರವಣಿಗೆ ನಡೆಸಿದರು.

ಭೂಮಿ ವಸತಿ ಹೋರಾಟಗಾರ ಕರಿಯಪ್ಪ ಗುಡಿಮನಿ ಮಾತನಾಡಿ, “ಭೂಮಿ, ವಸತಿ ಇಲ್ಲದೆ ಬೀದಿಗಳಲ್ಲಿ ಜೀವನ ಸಾಗುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಶಾಸಕರನ್ನು ಭೇಟಿ ಮಾಡಿದಾಗ, ʼಈ ಬಾರಿ ನಮ್ಮನ್ನು ವಿಧಾನಸಭೆಗೆ ಕಳುಹಿಸಿದರೆ ಭೂಮಿ ವಸತಿ ಹಕ್ಕು ವಂಚಿತರಿಗೆ ಹಕ್ಕುಪತ್ರ ನೀಡಲಾಗುವುದುʼ ಎಂದು ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ರೀತಿಯ ಸಮಸ್ಯೆ ಬಗೆಹರಿಸಿಲ್ಲ. ನಮಗೆ ನ್ಯಾಯ ದೊಕಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮುವಾದಿ ಪಕ್ಷ ಬಿಜೆಪಿಯಿಂದ ಮನನೊಂದ ಕಾರಣ ಆ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರಲಾಗಿದೆ. ನಮ್ಮ ಸಮಸ್ಯೆಗೆ ನೆರವಾಗಬಹುದೆಂದು ಬೇಡಿಕೆ ಮಂಡಿಸಿದರೆ, ʼಬಜೆಟ್ ಇಲ್ಲ, ಗ್ಯಾರಂಟಿ ಯೋಜನೆಗೆ ದುಡ್ಡು ಹಾಕಬೇಕುʼ ಎಂಬ ನೆಪ ಹೇಳುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಆಚರಣೆ ಅದ್ದೂರಿ: ಸಚಿವ ಡಾ ಎಚ್ ಸಿ ಮಹದೇವಪ್ಪ

“ದಶಕಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ಹಾಗೂ ಅರ್ಜಿ ಸಲ್ಲಿಸಿದ ಫಾರಂ 53, 50, 57 ಭೂಮಿ ಪಂಚನಾಮೆ ಜಿಪಿಎಸ್ ಸರ್ವೇ ಮಾಡಿಸಬೇಕು ಮತ್ತು ಭೂ ಮಂಜೂರಾತಿ ಹೆಸರಲ್ಲಿ ಭ್ರಷ್ಟಾಚಾರ ನಡೆಸುವವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ ದುರುಗೆಶ್, ಭೂಮಿ ವಸತಿ ಮುಖಂಡ ವಸಂತರಾಜ್ ಕಹಳೆ, ನೀಲಪ್ಪ ಪೇಂಟರ್, ಪ್ರಗತಿ, ಶರಣು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...