ಬಳ್ಳಾರಿ | ಅತಿಥಿ ಉಪನ್ಯಾಸಕರ ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹ

Date:

ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಠ ₹30,000ಕ್ಕೆ ಹೆಚ್ಚಳ ಮಾಡುವಂತೆ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸುವ ಸಲುವಾಗಿ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲೆಯ ಸಂಡೂರು ಶಾಸಕಿ ಅನ್ನಪೂರ್ಣ ತುಕರಾಂ ಅವರಿಗೆ ಮನವಿ ಸಲ್ಲಿಸಿದರು.

“ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರು ವಿದ್ಯಾರ್ಥಿಗಳ ದಾಖಲಾತಿಯಿಂದ ಹಿಡಿದು ಉತ್ತಮ ಫಲಿತಾಂಶ ಬರುವವರೆಗೂ ಶ್ರಮವಹಿಸಿ ದುಡಿಯುತ್ತಿದ್ದಾರೆ. ಆದರೆ ಈಗ ಬರುವ ವೇತನದಿಂದ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವೇತನ ಹೆಚ್ಚಳ ಮಾಡಬೇಕು” ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದರು.

“ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸರಿಸುಮಾರು 4,659ಕ್ಕೂ ಅಧಿಕ ಮಂದಿ ಅತಿಥಿ ಉಪನ್ಯಾಸಕರು ಮಾಸಿಕ ₹12,000ಕ್ಕೆ ಕಾರ್ಯವನ್ನು ನಿರ್ವಹಿಸುತ್ತಿದ್ದು, ಇಂದಿನ ದಿನಮಾನಗಳಲ್ಲಿ ನಗರ ಪ್ರದೇಶಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ನಿತ್ಯ ಬಳಸುವ ಪದಾರ್ಥಗಳ ದರ ಹೆಚ್ಚಾಗುತ್ತಿದೆ. ಹಲವಾರು ಆರ್ಥಿಕ ಸಮಸ್ಯೆಗಳು ಇದ್ದೇ ಇರುತ್ತವೆ. ಮಕ್ಕಳ ಶಾಲೆ ಶುಲ್ಕ, ವಯಸ್ಸಾದ ಅಪ್ಪ-ಅಮ್ಮನ ಆನಾರೋಗ್ಯದ ಸ್ಥಿತಿ, ಮನೆ ಬಾಡಿಗೆ, ಅಂಗಡಿ ಸಾಮಾನು, ಹೀಗೆ ಸಾಕಷ್ಟು ಸಮಸ್ಯೆಗಳನ್ನು ನಿಭಾಯಿಸುವುದರಲ್ಲಿ ಅತಿಥಿ ಉಪನ್ಯಾಸಕರ ನಿತ್ಯ ಜೀವನದ ಎತ್ತಿನ ಬಂಡಿಯ ಹಗ್ಗ-ಜಗ್ಗಾಟ ಹಳ್ಳ ಹಿಡಿಯುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆಯುತ್ತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ. ಆದರೆ ಯಾವುದೇ ಸೇವಾ ಭದ್ರತೆ ಇಲ್ಲದಂತಾಗಿದೆ. ಹಲವು ವರ್ಷಗಳಿಂದ ಅನೇಕ ಹೋರಾಟಗಳ ಮೂಲಕ ಸಮಸ್ಯೆಗಳನ್ನು ಗಮನಕ್ಕೆ ತರಲಾಗಿದೆ. ಆದರೂ ಸರ್ಕಾರ ಮಾತ್ರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿದ್ದ ನಗದು ನೋಟುಗಳಿಗೆ ಗೆದ್ದಲು; ಗ್ರಾಹಕನ ₹8 ಲಕ್ಷ ನಷ್ಟ

“ಬಹುತೇಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅನೇಕ ಬೋಧನಾ ಹುದ್ದೆಗಳಿಗೆ ಖಾಯಂ ಉಪನ್ಯಾಸಕರು ಇಲ್ಲದೆ ಅತಿಥಿ ಉಪನ್ಯಾಸಕರಿಂದಲೇ ಕಾಲೇಜು ಹಾಗೂ ಬೋಧನಾ ತರಗತಿಗಳು ಮುನ್ನಡೆಯುತ್ತಿವೆ. ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸುವುದು ನ್ಯಾಯಸಮ್ಮತವಾಗಿದೆ. ಹಾಗಾಗಿ ಮುಂಬರುವ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಕನಿಷ್ಠ ವೇತನವನ್ನು ₹30,000ಕ್ಕೆ ಹೆಚ್ಚಳ ಮಾಡುವುದಕ್ಕಾಗಿ ಅನುದಾನ ಒದಗಿಸಬೇಕು” ಎಂದು ಮನವಿ ಮಾಡಿದರು.

ಅತಿಥಿ ಉಪನ್ಯಾಸಕಕರು ಜಯಮ್ಮ, ಪ್ರಿಯಾ ಬಣಾಕಾರ್, ಗೀತಾ, ದಿವ್ಯ, ಸಂಪತ್ ಕುಮಾರ್, ಸಿದ್ದೇಶ್, ರೇಣುಕಾ, ತರುಣ್ ಕುಮಾರ್, ನಾಗರಾಜ್ ಹಲವಾರು ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...