ಬಳ್ಳಾರಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಸಣ ಕಾರ್ಮಿಕರು, ದೇವದಾಸಿಯರ ಪ್ರತಿಭಟನೆ

Date:

ರಾಜ್ಯದ ದೇವದಾಸಿ ಮಹಿಳೆಯರು ಹಾಗೂ ಮಸಣ ಕಾಯುವ ಕೂಲಿ ಕಾರ್ಮಿಕರ‌ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

“ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ/ಸಹಾಯಧನವನ್ನು 2025ರ ಈ ಬಜೆಟ್‌ನಲ್ಲಿ ಕನಿಷ್ಠ 3000 ರೂಗಳಿಗೆ ಹೆಚ್ಚಿಸಬೇಕು. ಸ್ವಯಂ ಉದ್ಯೋಗದಡಿ ನೀಡಲಾಗುವ ಸಹಾಯಧನವನ್ನು ಕನಿಷ್ಠ 1.50 ಲಕ್ಷ ರೂಗಳಿಗೆ ಹೆಚ್ಚಿಸಲು ಅಗತ್ಯ ಕ್ರಮ ವಹಿಸಬೇಕು. ಉಚಿತ ನಿವೇಶನದ ಜೊತೆ ರಾಜೀವ ಗಾಂಧಿ ವಸತಿ ಯೋಜನೆಯಡಿ ಅಳವಡಿಸಿ ಸುಸಜ್ಜಿತ ಮನೆಯನ್ನು ಕಟ್ಟಿಸಿಕೊಡಲು ಕ್ರಮ ವಹಿಸಬೇಕು. ಇದರಲ್ಲೂ ರಾಜೀವ್ ಗಾಂಧಿ ವಸತಿ ನಿಗಮವು ಈ ದುರ್ಬಲ ಮಹಿಳೆಯರಿಂದ ವಂತಿಗೆಯನ್ನು ತೆಗದುಕೊಳ್ಳುತ್ತಿದೆ. ವಂತಿಗೆ ತೆಗೆದುಕೊಳ್ಳುತ್ತಿರುವವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಬ್ಯಾಂಕಗಳು ಸಾಲ ಸೌಲಭ್ಯ ಒದಗಿಸಲು ನಿರಾಕರಿಸುತ್ತಿವೆ. ಇಂತ ಕೊರತೆಯನ್ನು ನಿವಾರಿಸಲು ಸರಕಾರವೇ ಈ ಮಹಿಳೆಯರ ಪರವಾಗಿ ವಂತಿಗೆ ನೀಡಲು ಅಗತ್ಯ ಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.

WhatsApp Image 2025 03 06 at 8.11.27 PM

ರಾಜ್ಯದ ಮಸಣ ಕಾರ್ಮಿಕರನ್ನು ಗುರುತಿಸಿ ಅವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರವರ್ಗದಡಿ ಶಿಕ್ಷಣದಲ್ಲಿ ಮೀಸಲಾತಿ ಹಾಗೂ ಅವರಿಗೆ ಇತರೆ ಸರ್ಕಾರಿ ಸೌಲಭ್ಯಗಳ ಒದಗಿಸಲು ಕ್ರಮವಹಿಸಿರುವುದು ಸ್ವಾಗತಾರ್ಹ ಹಾಗೂ ಅವರ ಗಣತಿ ಮಾಡಿ ಅವರಿಗೆ ಪೆನ್ನನ್ ಜಾರಿಗೊಳಿಸಬೇಕು. ತಮಗೆ ಸೌಲಭ್ಯಗಳನ್ನು ಒದಗಿಸಬೇಕಾದಲ್ಲಿ ನಮ್ಮ ಕುಟುಂಬದಿಂದ ಸರ್ಕಾರದ ವಿವಿಧ ಇಲಾಖೆಗಳು ನಮ್ಮಿಂದ ‘ನಾವು ಮಸಣ ಕಾರ್ಮಿಕರು’ ಎಂಬುದಕ್ಕೆ ಪ್ರಮಾಣಪತ್ರ ಕೇಳುತ್ತಿವೆ. ಆದ್ದರಿಂದ, ಗಣತಿಗೆ ಕ್ರಮ ವಹಿಸಬೇಕೆಂದು ಒತ್ತಾಯ ಮಾಡಿದರು. ಕನಿಷ್ಟ 45 ವಯೋಮಾನದವರಿಂದ ಮಾಸಿಕ 3000 ಪಿಂಚಣಿಯನ್ನು ಘೋಷಿಸಲು ಮತ್ತು ನಮ್ಮ ಕುಣಿ ತೆಗೆಯುವ ಹಾಗೂ ಶವ ಹೂಳುವ ಕೆಲಸವನ್ನು ಉದ್ಯೋಗ ಖಾತ್ರಿಯಡಿ ತಂದು ಅದನ್ನು ಉದ್ಯೋಗ ಖಾತ್ರಿ ಕೆಲಸವೆಂದು ಪರಿಗಣಿಸಿ, ಸುರಕ್ಷಿತ ಕ್ರಮಗಳನ್ನು ಮತ್ತು ಪರಿಕರಗಳನ್ನು ಒದಗಿಸಲು ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ದುರ್ಗಮ್ಮ,‌ ಯಂಕಮ್ಮ, ಈರಮ್ಮ, ನಾಗವ್ವ‌, ನಾಗರಾಜ್, ಸ್ವಾಮಿ‌ ವಿಕಾಸ, ಹುಲಗವ್ವ,‌ ಯಮನೂರಪ್ಪ, ದುರ್ಗಪ್ಪ ಹಾಗೂ ಹಲವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...