ಬಳ್ಳಾರಿ | ಒಣಮೆಣಸಿನಕಾಯಿ ಮಾರಾಟ: ರೈತರು ನೋಂದಾಯಿಸಿಕೊಳ್ಳಲು ಆಹ್ವಾನ

Date:

ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣಮೆಣಸಿನಕಾಯಿ ಮಾರಾಟ ಮಾಡಲು ಜಿಲ್ಲೆಯ ರೈತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

2024-25ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ ಒಣಮೆಣಸಿನಕಾಯಿ ಮಾರುಕಟ್ಟೆ ಮಧ್ಯಪ್ರವೇಶ ದರ ₹10,589.20 ಪ್ರತಿ ಕ್ವಿಂಟಲ್‌‌‌ಗೆ ನಿಗದಿಪಡಿಸಿದೆ. ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಾರ್ಯಾಲಯವು ನೋಂದಣಿ ಸ್ಥಳವಾಗಿದೆ. ರೈತರು ಒಣಮೆಣಸಿನಕಾಯಿ ಉತ್ಪನ್ನವನ್ನು ಕಡ್ಡಾಯವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇ-ಟೆಂಡರ್ ಮೂಲಕ ಮಾರಾಟ ಮಾಡಿದಾಗ ಮಾತ್ರ ಈ ಯೋಜನೆ ಅನ್ವಯವಾಗಲಿದೆ ಎಂದು ತಿಳಿಸಿದರು.

ನೋಂದಣಿ ಮಾಡಿಕೊಳ್ಳಲು ಪ್ರಕಟಗೊಂಡ ದಿನದಿಂದ 15 ದಿನಗಳವರೆಗೆ ಕಾಲಾವಕಾಶ ಇರುತ್ತದೆ. ಇ-ಆಡಳಿತ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೀಡಿರುವ ವಿವರಗಳನ್ನು ಭೂಮಿ, ಯುಐಡಿಎಐ ಹಾಗೂ ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ಹೊಂದಾಣಿಕೆ ಮಾಡಿ, ಅರ್ಹ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಯುಎಂಪಿ ತಂತ್ರಾಂಶದ ಇ-ಟೆಂಡರ್ ಮೂಲಕ ಮಾರಾಟ ಪ್ರಕ್ರಿಯೆ ಕೈಗೊಳ್ಳಲಾಗುವುದು. ಈ ಯೋಜನೆಯಡಿ ಪ್ರತಿ ಎಕರೆಗೆ 15 ಕ್ವಿಂಟಲ್ ಇಳುವರಿಯಂತೆ ಪ್ರತಿ ರೈತರಿಂದ ಗರಿಷ್ಠ 30 ಕ್ವಿಂಟಲ್‌ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳ್ಳಾರಿ ಜಿಲ್ಲೆಯಲ್ಲಿ ಯಾವ ಮಾರುಕಟ್ಟೆಯಲ್ಲಿಯೂ ಒಣಮೆಣಸಿನಕಾಯಿ ಹುಟ್ಟುವಳಿಗೆ ಇ-ಟೆಂಡರ್ ಪದ್ಧತಿ ಜಾರಿಯಲ್ಲಿಲ್ಲದಿರುವುದರಿಂದ ಜಿಲ್ಲೆಯ ರೈತರು ಎನ್‌ಇಎಂಎಲ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ರಾಜ್ಯದ ಯಾವುದೇ ಇ-ಟೆಂಡರ್ ಪದ್ಧತಿ ಜಾರಿಯಲ್ಲಿರುವ ವಿವಿಧ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಒಣಮೆಣಸಿನಕಾಯಿ ಮಾರಾಟ ಮಾಡುವ ಸಂದರ್ಭದಲ್ಲಿ ಆನ್ ಲೈನ್‌ನಲ್ಲಿ ನೋಂದಣಿ ಮಾಡಿದ ರಶೀದಿ ಪಡೆದಿದ್ದಲ್ಲಿ ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ. ಹಾಗಾಗಿ ರೈತರು ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್, ಪಹಣಿಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡು ಒಣಮೆಣಸಿನಕಾಯಿ ಮಾರಾಟ ಮಾಡಿ ಸರ್ಕಾರದ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ದಲಿತ ಸಂಘರ್ಷ ಸಮಿತಿ ಧರಣಿ

ಹೆಚ್ಚಿನ ಮಾಹಿತಿಗಾಗಿ ದೂ.08392-250435ಕ್ಕೆ ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...