ಬಳ್ಳಾರಿ | ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಾರ್ವತ್ರಿಕ ಮುಷ್ಕರ; ಆಶಾ ಕಾರ್ಯಕರ್ತೆಯರ ಸಂಘ ಬೆಂಬಲ

Date:

ದೇಶದ ಅಸಂಘಟಿತ ಕಾರ್ಮಿಕರು ಹಾಗೂ ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ
ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಮತ್ತು ಮುಷ್ಕರದಲ್ಲಿ ಭಾಗವಹಿಸುತ್ತದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷೆ ಎ.ಶಾಂತ ತಿಳಿಸಿದರು.

ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, “ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಗೌರವಧನ ಪ್ರೋತ್ಸಾಹಧನಗಳನ್ನು ಹೆಚ್ಚಿಸಬೇಕು. ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.10,000 ಪಾವತಿಯಾಗುವಂತೆ ಶೀಘ್ರವಾಗಿ ಆದೇಶ ಮಾಡಬೇಕು ಹಾಗೂ ರಾಜ್ಯದಲ್ಲಿ ಕಳೆದ ಅನಿರ್ದಿಷ್ಟ ಆಶಾ ಕಾರ್ಯಕರ್ತರ ಹೋರಾಟದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ ಮಾಸಿಕ ರೂ.10,000 ನೀಡುವ ಆದೇಶವಾಗಬೇಕು. ಕೇಂದ್ರದಲ್ಲಿ ಇತ್ತೀಚಿನ ಪಾರ್ಲಿಮೆಂಟ್ ಅಧಿವೇಶನದ ಸಮಯದಲ್ಲಿ ಮಾನ್ಯ ಕೇಂದ್ರ ಆರೋಗ್ಯ ಮಂತ್ರಿಗಳು ಆಶಾ ಕಾರ್ಯಕರ್ತೆಯರಿಗೆ
ನೀಡಿದ್ದ ಪ್ರೋತ್ಸಾಹಧನ ಹೆಚ್ಚಳ ಭರವಸೆಯನ್ನು ಕೂಡಲೇ ಕಾರ್ಯಗತಗೊಳಿಸಬೇಕು” ಎಂದು ಆಗ್ರಹಿಸಿದರು.

ಆಶಾ, ಆಂಗನವಾಡಿ, ಬಿಸಿಯೂಟ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಿ, ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ರೂ. 36,000 ನಿಗದಿ ಮಾಡಬೇಕು ಎಂಬ ಬೇಡಿಕೆಯು ಸೇರಿದಂತೆ ಕೆಲಸದ ಅವಧಿಯನ್ನು ಪ್ರಸ್ತುತದಲ್ಲಿರುವ ದಿನಕ್ಕೆ 8 ಗಂಟೆ ಮತ್ತು ವಾರಕ್ಕೆ 48 ಗಂಟೆ ಮಿತಿಯನ್ನು ಖಾತ್ರಿಗೊಳಿಸಬೇಕು. ಮಹಿಳೆಯರಿಗೆ ರಾತ್ರಿ ಪಾಳಿ ಅವಕಾಶ ನೀಡುವ ಆದೇಶವನ್ನು ಹಿಂಪಡೆಯಬೇಕು. ಕಾರ್ಮಿಕ ವಿರೋಧಿ ಬಂಡವಾಳಶಾಹಿ ಪರ ಇರುವ 4 ಲೇಬರ್ ಕೋಡ್‌ಗಳನ್ನು ರದ್ದುಗೊಳಿಸಬೇಕು. ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ ಸಾಮಾಜಿಕ ಭದ್ರತೆ ಸವಲತ್ತುಗಳನ್ನು ಖಾತ್ರಿಪಡಿಸಿ, ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

ಈ ವೇಳೆ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷೆ ಗೀತಾ, ನಗರಧ್ಯಕ್ಷೆ ರೇಷ್ಮಾ, ಉಮಾದೇವಿ, ಭಾಗ್ಯಮ್ಮ, ಶಶಿಕಲಾ, ಶಾಂತಕುಮಾರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...