ಬಳ್ಳಾರಿ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಆಗ್ರಹ

Date:

ಕೂಲಿ ಮಾಡಿ ಜೀವನ ಸಾಗಿಸುವ ಬಡವರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ವರದಾನವಾಗಿದೆ. ಆದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಎನ್‌ಎಂಆರ್‌ ನೀಡದೇ ಇರುವುದರಿಂದ ಬದುಕು ಅತಂತ್ರವಾಗಿದೆ ಎಂದು ಮನರೇಗಾ ತಾಲೂಕು ಸಂಚಾಲಕಿ ಪವಿತ್ರ ಅಸಮಾಧಾನ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನಲ್ಲಿ ಮನರೇಗಾ ಸಮಸ್ಯೆ ಪರಿಹಾಕ್ಕೆ ಒತ್ತಾಯಿಸಿ ಗ್ರಾಮೀಣ ಕಾರ್ಮಿಕರ ಸಂಘಟನೆ ವತಿಯಿಂದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಸ್ ಮಲ್ಲನಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

“ಕಾನೂನಿನಲ್ಲಿ ಕಷ್ಟಪಟ್ಟು ಮಣ್ಣಿನ ಕೆಲಸ ಮಾಡಲು ಕಾರ್ಮಿಕರು ಅಳತೆ ಕೆಲಸ ನಿರ್ವಹಣೆ ಮಾಡಲಾಗುತ್ತಿದೆ. ಆದರೆ, ಅಧಿಕಾರಿಗಳು ಒಂದು ವಾರ ಕೆಲಸ ಕೊಟ್ಟರೆ, ಎರಡು ವಾರ ಮನೆಯಲ್ಲೇ ಇರಬೇಕು” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಎರಡು ವರ್ಷದಿಂದಲೂ ಸಾವಿರಾರು ಕಾರ್ಮಿಕ ಕುಟುಂಬಗಳಿಗೆ ನೂರು ದಿನಗಳ ಕೆಲಸ ಸಿಕ್ಕಿಲ್ಲ. ನಮಗೆ ಅನವಶ್ಯಕತೆ ಇದ್ದಾಗ ಅರ್ಜಿ ಸಲ್ಲಿಸಿದರೂ, ಕೆಲಸ ಕೊಡುವುದಿಲ್ಲ. ನೆಪ ಹೇಳುತ್ತಾ ಪಿಡಿಒ ಮತ್ತು ಎಂಜಿನಿಯ‌ರ್ ಕಣ್ತಪ್ಪಿಸಿ ಹೋಗುತ್ತಿದ್ದಾರೆ” ಎಂದು ಆರೋಪಿಸಿದರು.

“ಒಂದು ಕಡೆ ಇಂತಹ ಸಮಸ್ಯೆಗಳಿದ್ದು, ಇನ್ನೊಂದು ಕಡೆ ನಿಯತ್ತಾಗಿ ಅಳೆತ ಕೆಲಸವನ್ನು ಈ ಬಿರು ಬಿಸಿಲಿನಲ್ಲಿ ಮಾಡಿದರೂ ತಾಂತ್ರಿಕ ಸಹಾಯಕ(ಟಿಎ) ಸ್ಥಳ ಪರಿಶೀಲನೆ ಮಾಡದೇ, ಡಿಎಫ್‌ಟಿ, ಎಂಟಿಇ, ಅವೈಜ್ಞಾನಿಕವಾಗಿ ಮಾಡಿ, ಗಟ್ಟಿ ಮಣ್ಣು ಇದ್ದರೂ ಕೆಲಸ ಹಂಚಿ, ಕೊನೆಗೆ ಕಡಿಮೆ ಕೆಲಸ ಎಂಬುದಾಗಿ ಬರೆದು ಕೈತೊಳೆದುಕೊಳ್ಳುತ್ತಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಕಷ್ಟಪಟ್ಟು ದುಡಿಯುತ್ತಿರುವ ಕಾರ್ಮಿಕರಿಗೆ ಗೌರವಯುತ ಕೂಲಿ ಸಿಗದಂತಾಗಿದೆ” ಎಂದು ಅವಲತ್ತುಕೊಂಡಿದ್ದಾರೆ.

“ಪ್ರತಿ ಕಾರ್ಮಿಕರಿಗೂ 316 ರೂ.ಗಳ ನಿಗದಿ ಇದ್ದು, ತಾಂತ್ರಿಕ ಸಹಾಯಕರಿಂದ ಅತಿ ಕಡಿಮೆ ಕೂಲಿ ಸಿಗುತ್ತಿದೆ. ಇಂತಹ ಟಿಎಗಳನ್ನು ಕೆಲಸದಿಂದ ತೆಗೆದು ಹಾಕಬೇಕು. ಸ್ಥಳ ಪರಿಶೀಲಿಸಿ ಕೆಲಸ ಮಾಡುವ ಮಧ್ಯದಲ್ಲಿ ಕಾರ್ಮಿಕರ ಅಳತೆ ಪಡೆದು, ಹೆಚ್ಚು ಕಡಿಮೆ ಇರುವ ಬಗ್ಗೆ ಲೆಕ್ಕ ಮಾಡಿ ತಿಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸೀತನೂರು ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ

“ಮನರೇಗಾ ಕಾರ್ಮಿಕರಿಗೆ ನಿಗದಿತ ಕೂಲಿಯನ್ನು ಹಾಕದೆ ₹240, ₹250 ಮತ್ತು ₹260 ಹಾಕುತ್ತಿದ್ದು, ನಮ್ಮ ಕೂಲಿ ಗ್ಯಾರಂಟಿ ಇಲ್ಲದಂತಾಗಿದೆ. ಈ ಕುರಿತು ಎರಡು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕಿನ ಕಾರ್ಮಿಕರ ನಮಗೆ ನಿಗದಿತ ಸಮಯಕ್ಕೆ ಕೆಲಸ ಪಾವತಿಸಲು ವ್ಯವಸ್ಥೆ ಮಾಡಿ, ಎಲ್ಲ ಕಾಯಕ ಕೂಲಿ ಬಂಧುಗಳಿಗೆ ಮೇಟ್ ಜಾರ್ಜ್‌(ಗೌರವಧನ) ಕೊಡಿಸಿ ಹಾಗೂ ಈ ಹಿಂದೆ ಕೆಲಸದ ಸ್ಥಳದಲ್ಲಿ ಎಮ್ಮಿಗನೂರು ಗ್ರಾಮದ ಕೂಲಿ ಕಾರ್ಮಿಕರ ಮರಣ(ಮುದ್ದಾಪುರ ಸಣ್ಣ ಜಡೆಪ್ಪ ಎಮ್ಮಿಗನೂರು)ಹೊಂದಿದ್ದು, ಆ ಕುಟುಂಬಕ್ಕೆ ಕೂಡಲೇ ಪರಿಹಾರ ಪಾವತಿಸಬೇಕು. ಕೆಲಸದ ಸ್ಥಳದಲ್ಲಿ ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡಿ, ಗೌರವಯುತ ಕೂಲಿ ಕೊಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಭಾಗ್ಯ, ಅಶ್ವಿನಿ, ಹುಲಿಗೆಮ್ಮ, ಸುನೀತಾ, ಹನುಮಂತ, ಅಂಜಿನಿ ಶಿವಶಂಕಪ್ಪ, ವಿರೇಶ, ಜಡಿಯಪ್ಪ, ಶಾಂತಮ್ಮ, ಅಕ್ಕಮ್ಮ ಸೇರಿದಂತೆ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...