ಬಳ್ಳಾರಿ | ಸರಕು ಸಾಗಾಟ ದರ ಹೆಚ್ಚಳಕ್ಕೆ ಒತ್ತಾಯಿಸಿ ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

Date:

ಸರಕು ಸಾಗಾಟದ ದರ ಹೆಚ್ಚಿಸಬೇಕು, ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿ ಲಾರಿ ಮಾಲೀಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಬಳ್ಳಾರಿ ನಗರದ ಶಿಡಿಗಿನ ಮೊಳ ಬಳಿಯ ಹಲಕುಂದಿ ಬಳಿಯ ಜಾನಕಿ, ಬಸಾಯಿ ಸ್ಪಾಂಜ್ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ.

ಲಾರಿ ಸಂಘದ ಮುಖಂಡ ಅಧ್ಯಕ್ಷ ವಿ ಶ್ರೀನಿವಾಸ್ ಮಾತನಾಡಿ, “ಲಾರಿ ಸರಕು ಸಾಗಾಟದ ದರ ಹೆಚ್ಚಿಸಬೇಕು. ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡಬೇಕು. ಓವರ್ ಲೋಡ್ ಲಾರಿಗಳನ್ನು ನಿಷೇಧಿಸಬೇಕು. ಕ್ರಮಸಂಖ್ಯೆಯ ಪ್ರಕಾರವಾಗಿ ಸ್ಥಳೀಯ ಲಾರಿಗಳಿಗೆ ಸರಕು ಸಾಗಣೆಗೆ ಅವಕಾಶ ನೀಡಬೇಕೆಂಬುದು ಎಂದು ಪ್ರತಿಭಟಿಸುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯವಾಗಿ ಅಂದಾಜು ಸಾವಿರದ ಐದುನೂರು ಲಾರಿಗಳು ಇದ್ದು, ನೂರಾರು ಲಾರಿಗಳಿಗೆ ಸರಕು ಸಾಗಣೆ ಸಿಗದೇ ಲಾರಿ ಮಾಲೀಕರು ಭಾರೀ ಪ್ರಮಾಣದ ನಷ್ಟ ಎದುರಿಸುತ್ತಿದ್ದಾರೆ. ಲಾರಿಗಳ ಮಾಸಿಕ ಕಂತು ಕಟ್ಟಲಾಗದೇ, ಆರ್ಥಿಕ ಸಂಕಷ್ಟದಿಂದಾಗಿ ಈಗಾಗಲೇ ಹಲವು ಜನ ಮಾಲೀಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ಕಳೆದ ತಿಂಗಳು ಸಂಘದ ವತಿಯಿಂದ ಐದು ದಿನಗಳ ಕಾಲ ಹಗಲು ರಾತ್ರಿ ಶಾಂತಿಯುತ ಮುಷ್ಕರ ನಡೆಸಿ, ಸ್ಪಾಂಜ್ ಕಾರ್ಖಾನೆಗಳಿಗೆ ಒಳಹೊರ ಹೋಗುವ ಲಾರಿಗಳನ್ನು ನಿಲ್ಲಿಸಲಾಗಿತ್ತು. ಆಗ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ, ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷರ ಮಧ್ಯಸ್ಥಿಕೆಯಲ್ಲಿ ಮಾತುಕತೆಯಲ್ಲಿ ನಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದು ಹೇಳಿದ್ದರು. ತದನಂತರ ಮಾತು ಬದಲಿಸಿ, ಈಗ ಏನಾದರೂ ಮಾಡಿಕೊಳ್ಳಿ ಎನ್ನುತ್ತಿದ್ದಾರೆ. ಹೀಗಾಗಿ ನಮಗೆ ಅನ್ಯಾಯವಾಗಿದ್ದು, ಹೋರಾಟ ಮುಂದುವರೆಸಿದ್ದೇವೆ. ಬೇಡಿಕೆಗಳು ಈಡೇರದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಿಂಚು ಶ್ರೀನಿವಾಸ್, ನೂರ್ ಮೊಹಮ್ಮದ್, ಮೆಹಬೂಬ ಬಾಷ, ಪ್ರವೀಣಕುಮಾರ್, ಎಂ.ಡಿ. ಫಯಾಜ್, ನಾಗರಾಜ, ಪೂಜಾದೇವಿ ಶ್ರೀನಿವಾಸುಲು, ರಾಮ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ವರದಿ : ರಾಧಾಕೃಷ್ಣ, ಸಿಟಿಝನ್ ಜರ್ನಲಿಸ್ಟ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...