ಬಳ್ಳಾರಿ | ಅಭಿವೃದ್ಧಿ ಹೆಸರಿನಲ್ಲಿ ಮರಗಳಿಗೆ ಕೊಡಲಿ; ವಿರೋಧ

Date:

ಬಳ್ಳಾರಿ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ನಗರದ 425 ಮರಗಳನ್ನು ಕಟಾವು ಮಾಡುವ ಕ್ರಮವನ್ನು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮುಖಂಡರು ವಿರೋಧಿಸಿದ್ದಾರೆ. ಕಂಪ್ಲಿ ಶಿರಸ್ತೇದಾರ್ ಪಂಪಾಪತಿ ಮೂಲಕ ಬಳ್ಳಾರಿ ವಿಭಾಗದ ಅರಣ್ಯ ಉಪಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ತಾಲೂಕು ಅಧ್ಯಕ್ಷ ಸೈಯ್ಯದ್ ವಾರೀಶ್, “ಬಳ್ಳಾರಿ ಜಿಲ್ಲೆಯು ರಾಜ್ಯದಲ್ಲಿ ಬಿಸಿಲನಾಡು ಎಂದು ಖ್ಯಾತಿ ಪಡೆದಿದೆ. ವರ್ಷದಿಂದ ವರ್ಷಕ್ಕೆ ವಾತಾವರಣದಲ್ಲಿನ ಏರುಪೇರಿನಿಂದಾಗಿ ಬಿಸಿಲಿನ ತಾಪಮಾನವು ಹೆಚ್ಚುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಗರದ ಮರಗಳನ್ನು ಕಟಾವು ಮಾಡುತ್ತಿರುವುದು ಶೋಚನೀಯ” ಎಂದರು.

“ಬಳ್ಳಾರಿಯ ಅರಣ್ಯ ಇಲಾಖೆಯ ಅಧಿಕಾರಿಗಳ ಶ್ರಮದಿಂದ ಸಮಾರು 425 ಜಾತಿಯ ಮರಗಳನ್ನು ಬೆಳೆಸಿ ಅವುಗಳನ್ನು ಜೋಪನ ಮಾಡಿ, ಈಗ ಅಭಿವೃದ್ಧಿ ಹೆಸರಿನಲ್ಲಿ ಎಲ್ಲ ಮರಗಳನ್ನು ಕಟಾವು ಮಾಡುತ್ತಿರುವುದರಿಂದ ಇಲಾಖೆಯ ಶ್ರಮ ವ್ಯರ್ಥವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಪಂಚ ಮುಂದುವರೆದಂತೆ ಹೊಸ ಹೊಸ ಆವಿಷ್ಕಾರಗಳೂ ಹೊರಹೊಮ್ಮುತ್ತಿವೆ. ಅವುಗಳನ್ನೂ ಸಹ ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕಾಗಿದೆ. ಈಗೀನ ಹೊಸ ಯುಗದಲ್ಲಿ ಎಲ್ಲವೂ ಸಾಧ್ಯ. ಮರಗಳನ್ನು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸ್ಥಳಾಂತರಿಸುವ ಕ್ರಮವೂ ಈಗ ಸಾಧ್ಯವಾಗಿದೆ” ಎಂದು ತಿಳಿಸಿದರು.

“ಬಿಎಂಆರ್‌ಸಿಎಲ್‌ ಅಭಿವೃದ್ಧಿ ಕಾಮಗಾರಿಗಾಗಿ 2017-18ರಲ್ಲಿ ಸಮಾರು 300 ಮರಗಳನ್ನು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಾಯದೊಂದಿಗೆ ಬೇರೆಡೆ ಸ್ಥಳಾಂತರಿಸಿ, ಮರುಕಸಿ ಮಾಡಲಾಯಿತು. ಅವುಗಳಲ್ಲಿ ಶೇ.75 ರಿಂದ 85ರಷ್ಟು ಮರಗಳು ಮರು ಜೀವ ಪಡೆದುಕೊಂಡು ಹೆಮ್ಮರಗಳಾಗಿ ಬೆಳೆಯುತ್ತಿವೆ” ಎಂದರು.

“ಬಳ್ಳಾರಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ರಸ್ತೆ ಅಗಲೀಕರಣ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಯ ವಿವಿಧ ಜಾತಿಯ ಸಮಾರು 425 ಮರಗಳನ್ನು  ತೆರವುಗೊಳಿಸಲು ಕೋರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸಲ್ಲಿಸಿರುವ ಅರ್ಜಿಯನ್ನು ಕೂಲಂಕುಶವಾಗಿ ಪರಿಶೀಲಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭಾರೀ ಮಳೆ; ನೆಲಕ್ಕುರುಳಿದ 400ಕ್ಕೂ ಅಧಿಕ ವಿದ್ಯುತ್‌ ಕಂಬ, ಮರಗಳು

“ಬಳ್ಳಾರಿ ಅರಣ್ಯಾಧಿಕಾರಿಗಳು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಾಯದೊಂದಿಗೆ  ಒಂದೂ ಮರವನ್ನು ಕಟಾವು ಮಾಡದೆ ಎಲ್ಲ ಮರಗಳನ್ನು ಬೇರೆಡೆಗೆ ಸಾಗಿಸುವ ಮೂಲಕ ಅವುಗಳ ರಕ್ಷಣೆ ಕಾರ್ಯ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿ ಸಂಘಟನಾ ಕಾರ್ಯದರ್ಶಿ ಹೆಚ್. ವೆಂಕಟೇಶ್, ಖಜಾಂಚಿ ರೋಶನ್, ಬಿ. ಹೆಚ್.ಎಂ. ಗುರು ಶಾಂತ ಶಾಸ್ತ್ರಿ, ಬಿ ಹೆಚ್ ಎಂ ಯಶ್ವಂತ್‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...