ಬಳ್ಳಾರಿ | ಒಳಮೀಸಲಾತಿಯಲ್ಲಿ ಅನ್ಯಾಯ; ಅ.2ರಂದು ಅಲೆಮಾರಿಗಳಿಂದ ‘ಬುತ್ತಿ ಕಟ್ಟಿ ದೆಹಲಿಗೆ ಹತ್ತಿ’ ಆಂದೋಲನ

Date:

ಅಲೆಮಾರಿ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ರಾಜ್ಯ ಹಾಗೂ ದೇಶದಿಂದ ಸಾವಿರಾರು ಅಲೆಮಾರಿ ಸಮುದಾಯದವರಿಂದ ಅಕ್ಟೋಬರ್ 2ರಂದು ‘ಬುತ್ತಿ ಕಟ್ಟಿ ದೆಹಲಿಗೆ ಹತ್ತಿ’ ಎಂಬ ದೆಹಲಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಲೆಮಾರಿ ಸಮುದಾಯಗಳ ಒಕ್ಕೂಟದ ಮುಖಂಡ ಶಿವಕುಮಾರ್ ತಿಳಿಸಿದರು.

ಬಳ್ಳಾರಿ ನಗರದ ಬಾಲ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಲೆಮಾರಿ ಸಮುದಾಯಗಳು ಅಂತಿಮ ಭರವಸೆಯೊಂದಿಗೆ ಗಾಂಧಿ ಜಯಂತಿಯಂದು, ‘ದೆಹಲಿ ಚಲೋʼ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ಈ ಕಾರ್ಯಕ್ರಮದ ಸ್ಥಳಕ್ಕೆ ಕೇಂದ್ರ ಸರ್ಕಾರದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗುವುದು. ರಾಹುಲ್ ಗಾಂಧಿಯವರು ಸಂವಿಧಾನವನ್ನು ಯಾವಾಗಲೂ ಕೈಯಲ್ಲಿ ಹಿಡಿದುಕೊಂಡು ತಿರುಗುತ್ತಾರೆ. ಸಂವಿಧಾನದ ಪ್ರಕಾರ ಮತ್ತು ನಾಗಮೋಹನ್ ದಾಸ್ ವರದಿಯ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇಕಡ ಒಂದರಷ್ಟು ಮೀಸಲಾತಿಯನ್ನು ಜಾರಿಗೊಳಿಸಬೇಕು. ಅಲೆಮಾರಿಗಳು ಬೋವಿ, ಲಂಬಾಣಿ, ಹಾಗೂ ಕೊರಚ ಕೊರಮ ಮುಂದುವರೆದ ಜಾತಿಗಳ ಜೊತೆ ಸ್ಪರ್ಧಿಸಲು ಆಗುವುದಿಲ್ಲ. ಪ್ರತ್ಯೇಕವಾಗಿ ನಮಗೆ ಶೇಕಡ ಒಂದರಷ್ಟು ಮೀಸಲಾತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಲಾಗುವುದು” ಎಂದರು.

“ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಧೀಶರಾದ ಡಾ. ನಾಗಮೋಹನ್ ದಾಸ್ ಏಕಸದಸ್ಯ ಸಮಿತಿಯನ್ನು ನೇಮಿಸಿತು. ಈ ಆಯೋಗವು ಬಹಳ ವೈಜ್ಞಾನಿಕವಾಗಿ ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ದತ್ತಾಂಶಗಳನ್ನು ಸಂಗ್ರಹಿಸಿ. ಒಂದು ವಸ್ತುನಿಷ್ಟವಾದ ವರದಿಯನ್ನು ಸರಕಾರಕ್ಕೆ ನೀಡಿತು. ಸಾಮಾಜಿಕ ನ್ಯಾಯ ಮತ್ತು ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಶಯಗಳನ್ನು ಇಟ್ಟುಕೊಂಡು ವೈಜ್ಞಾನಿಕವಾದ ವರದಿಯನ್ನು ಸಿದ್ಧಪಡಿಸಿದ್ದರು. ಅದನ್ನಾಧರಿಸಿ 2025ರ ಆಗಸ್ಟ್ 19 ರಂದು ನಡೆದ ಮಂತ್ರಿಮಂಡಲದ ಸಭೆಯಲ್ಲಿ ಈ ವರದಿಯನ್ನು ಕರ್ನಾಟಕ ಸರಕಾರ ಅಂಗೀಕರಿಸಿತು. 49 ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳನ್ನು ಒಳಗೊಂಡಂತೆ 59 ಸಮುದಾಯಗಳಿಗೆ ಶೇ 1 ರಷ್ಟು ಮೀಸಲಾತಿ ಪ್ರಮಾಣವನ್ನು ನಿಗದಿ ಮಾಡಿದೆ. 59 ಸಮುದಾಯಗಳನ್ನು ಸಿ ಗುಂಪಿನ ಬಲಾಡ್ಯ ಸ್ಪ್ರಶ್ಯ ಸಮುದಾಯಗಳ ಜೊತೆಗೆ ಸೇರಿಸಿದೆ. ಈ ಬಲಾಡ್ಯ ಜಾತಿಗಳ ಜೊತೆಗೆ ಈ ಚಿಕ್ಕಚಿಕ್ಕ ಸಮುದಾಯಗಳನ್ನು ಸೇರಿಸಿರುವುದು ಭಾರತದ ಸರ್ವೋಚ್ಚ ನ್ಯಾಯಾಲಯವು ಒಳ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿದ ತೀರ್ಪಿಗೆ ವಿರುದ್ಧವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಸರ್ಕಾರ ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್

“ಅಲೆಮಾರಿ/ಅರೆಅಲೆಮಾರಿ ಪರವಾಗಿ ಯಾವ ರಾಜಕೀಯ ಲಾಬಿಯೂ ಇಲ್ಲ. ನಮಗೆ ನ್ಯಾಯ ದೊರಕಿಸಿ ಕೊಡುವಂತೆ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಧರಣಿ ಕೈಗೊಳ್ಳುತ್ತಿದ್ದೇವೆ. ಜೊತೆಗೆ, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಉದ್ದೇಶಿಸಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ನಮ್ಮ ನೋವನ್ನು ಆಲಿಸಿ ನ್ಯಾಯವನ್ನು ಕೊಡಬೇಕೆಂದು ಕಾಂಗ್ರೆಸ್‌ನ ಈ ಮುಖಂಡರಲ್ಲಿ ನಾವು ಮನವಿ ಮಾಡಿಕೊಳ್ಳಲಿದ್ದೇವೆ. ಬೀದಿಯಲ್ಲಿ ಮತ್ತು ಬೆಂಗಳೂರಿನಲ್ಲಿ ಸಿಗದ ನ್ಯಾಯವನ್ನು ಅರಸುತ್ತಾ ದೆಹಲಿಗೆ ಬರುತ್ತಿದ್ದೇವೆ. ನಿರಾಶೆಗೊಳಿಸುವುದಿಲ್ಲ ಎಂಬ ಭರವಸೆಯೂ ಇದೆ ನಿರಾಶಗೊಳಿಸಬೇಡಿ” ಎಂದು ಮನವಿ ಮಾಡಿದರು.

ಪ್ರಜಾ ಪರಿವರ್ತನೆ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ್ ಕುಮಾರ್. ಸಿಳ್ಳೆಕ್ಯಾತ ಸಮುದಾಯದ ಸುಬ್ಬಣ್ಣ, ಗಂಗಾಧರ, ಜಂಬಣ್ಣ, ರಾಮಾಂಜಿನಿ, ಸಂಪತ್ ಕುಮಾರ್, ಸೇರಿದಂತೆ ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...