ಬಳ್ಳಾರಿ | ನೂತನ ಸಂಶೋಧನೆಗಳಿಗೆ ಶ್ರಮಿಸುತ್ತಿದೆ ಐಯುಎಸಿ ಕೇಂದ್ರ: ಪ್ರೊ. ಎಂ ಟಿ ಲಗಾರೆ

Date:

‘ಸುರಕ್ಷತೆ, ಭದ್ರತೆ ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಅತ್ಯುನ್ನತ ಮಾನದಂಡಗಳನ್ನು ಕಾಯ್ದುಕೊಂಡು ಕೌಶಲ್ಯಗಳನ್ನು ಹೆಚ್ಚಿಸಲು ಅಂತರ್ ವಿಶ್ವವಿದ್ಯಾಲಯ ವೇಗವರ್ಧಕ ಕೇಂದ್ರ(ಐಯುಎಸಿ)ವು ನಿರಂತರವಾಗಿ ವಿನೂತನ ಸಂಶೋಧನಾ ಮಾರ್ಗಗಳಿಗೆ ಶ್ರಮಿಸುತ್ತಿದೆ’ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ ಟಿ ಲಗಾರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಗುಲ್ಬರ್ಗಾ ವಿವಿಯ ಡಾ. ಬಿ ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗ ಹಾಗೂ ನವದೆಹಲಿಯ ಅಂತರ್ ವಿಶ್ವವಿದ್ಯಾಲಯ ವೇಗವರ್ಧಕ ಕೇಂದ್ರದ ಸಂಯುಕ್ತಾಶ್ರಯದೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಐಯುಎಸಿಯಲ್ಲಿರುವ ಪೆಲ್ಲೆಟ್ರಾನ್ ವೇಗವರ್ಧಕ ಪ್ರಯೋಗಾಲಯವು 1991ರಿಂದ ಕಾರ್ಯನಿರ್ವಹಿಸುತ್ತಿದೆ. ನಂತರದ ವರ್ಷಗಳಲ್ಲಿ ಇದು ಭಾರತ ಮತ್ತು ವಿದೇಶಗಳಿಂದ 400ಕ್ಕೂ ಹೆಚ್ಚು ಬಳಕೆದಾರರಿಗೆ ಅಯಾನು ಕಿರಣಗಳನ್ನು ಒದಗಿಸುತ್ತಿದೆ. ವೇಗವರ್ಧಕ ಭೌತಶಾಸ್ತ್ರವು ಕಣ ವೇಗವರ್ಧಕಗಳ ವಿನ್ಯಾಸ, ನಿರ್ಮಾಣ ಮತ್ತು ಕಾರ್ಯಾಚರಣೆಯ ಮೇಲೆ ಕೇಂದ್ರೀಕರಿಸಿದ ಭೌತಶಾಸ್ತ್ರದ ವಿಶೇಷ ಕ್ಷೇತ್ರವಾಗಿದ್ದು, ಇದರ ಜತೆಯಲ್ಲೇ ಪರಮಾಣು ಭೌತಶಾಸ್ತ್ರವೂ ಪರಮಾಣು ನ್ಯೂಕ್ಲಿಯರಸ್‌ಗಳ ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಮೂಲಭೂತ ಶಕ್ತಿಗಳು ಹಾಗೂ ಅವುಗಳಿಗೆ ಒಳಗಾಗುವ ಪ್ರತಿಕ್ರಿಯೆಗಳು, ವಿಕಿರಣಶೀಲ ಕೊಳೆತ, ವಿದಳನ ಮತ್ತು ಸಮ್ಮಿಳನಗಳನ್ನು ನೀಡುತ್ತವೆ. ಇವುಗಳ ಹೆಚ್ಚಿನ ಅಧ್ಯಯನಕ್ಕೆ ಹಾಗೂ ಸಂಶೋಧನೆಗೆ ಐಯುಎಸಿ ಕೇಂದ್ರವು ವೇದಿಕೆಯಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ ಪ್ರೊ. ಎಂ ಮುನಿರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ವಿಜ್ಞಾನದ ಎಲ್ಲ ಕ್ಷೇತ್ರವೂ ಭೌತಶಾಸ್ತ್ರದ ಮೇಲೆ ಅವಲಂಬನೆಯಾಗಿದೆ. ಕಲ್ಯಾಣ-ಕರ್ನಾಟಕ ಭಾಗದಲ್ಲಿ ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಸಂಶೋಧನಾ ಕೇಂದ್ರವನ್ನು ವಿವಿಯಲ್ಲಿ ನಿರ್ಮಿಸಲಾಗುವುದು. ಯುವ ಸಂಶೋಧಕರು ಐಯುಎಸಿ ಕೇಂದ್ರದ ಪ್ರಯೋಜನ ಪಡೆಯಬೇಕು” ಎಂದು ಹೇಳಿದರು.

ನವದೆಹಲಿಯ ಐಯುಎಸಿ ವಿಜ್ಞಾನಿ ಹಾಗೂ ಪ್ರೋಗ್ರಾಂ ಲೀಡರ್ ಡಾ. ಫೌರನ ಸಿಂಗ್ ಮಾತನಾಡಿ, “ವೇಗವರ್ಧಕ ಮಾಸ್ ಸ್ಪೆಕ್ಟ್ರೋಮೆಟ್ರಿ ಹಾಗೂ ಭೂಕಾಲಗಣನ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಮೊದಲನೇ ಕೇಂದ್ರವಾಗಿ ಐಯುಎಸಿ ಕಾರ್ಯನಿರ್ವವಹಿಸುತ್ತಿದೆ. ಈ ಕೇಂದ್ರದ ಪ್ರಯೋಜನ ಪಡೆಯಲು ಯುವ ಸಂಶೋಧಕರು ಹೊಸ ಸಂಶೋಧನೆಗಳೊಂದಿಗೆ ಬರಬೇಕು” ಎಂದು ಕರೆ ನೀಡಿದರು.

ಐಯುಎಸಿ ಕೇಂದ್ರದ ವಿಜ್ಞಾನಿ ಹಾಗೂ ಕೇಂದ್ರದ ಸಂಚಾಲಕ ರಾಜೀವ್ ಮೆಹ್ತಾ ಮಾತನಾಡಿ, “ಅಂತರ್-ವಿಶ್ವವಿದ್ಯಾಲಯ ವೇಗವರ್ಧಕ ಕೇಂದ್ರವು ಅತ್ಯಾಧುನಿಕ ಸಂಶೋಧನೆ ನಡೆಸಲು ಅಗತ್ಯವಿರುವ ಆಧುನಿಕ ಉಪಕರಣಗಳೊಂದಿಗೆ ವಿಜ್ಞಾನ ಸಮುದಾಯಕ್ಕೆ ಅನುಕೂಲವಾಗುವಂತೆ ನಿರ್ಮಿತವಾಗಿದೆ. ಅಲ್ಲದೇ, ಕೇಂದ್ರವು 400 ಅಂಗ ಸಂಸ್ಥೆಗಳನ್ನು, 1200 ಸಂಶೋಧನಾ ವಿದ್ಯಾರ್ಥಿಗಳನ್ನು ಹೊಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ದೂರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಕೊತ್ತೂರು ಮಂಜುನಾಥ್ ಎಚ್ಚರಿಕೆ

ಮೈಸೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎ ಪಿ ಜ್ಞಾನಪ್ರಕಾಶ ಮಾತನಾಡಿ, “ಉನ್ನತ ಮಟ್ಟದ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯನ್ನು ಐಯುಎಸಿ ಹೊಂದಿದೆ. ವಿಶ್ರೀಕೃ ವಿವಿಯಲ್ಲಿನ ಭೌತಶಾಸ್ತ್ರ ವಿಭಾಗವು ಹಲವು ವೈವಿಧ್ಯತೆಗಳೊಂದಿಗೆ ಕೂಡಿದ್ದು, ರಾಜ್ಯದಲ್ಲಿನ ಉಳಿದ ವಿವಿಗಳಿಗಿಂತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವಿವಿಧ ರಾಜ್ಯಗಳ 100ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ ಎನ್ ಎಂ ಸಾಲಿ, ವಿವಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ತೀಪ್ಪೆರುದ್ರಪ್ಪ ಜೆ, ಡಾ.ಕೊಟ್ರೇಶ್ ಎಂ ಜಿ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...