ಬಳ್ಳಾರಿ | ಜಿಲ್ಲೆಯನ್ನು ಕ್ಷಯಮುಕ್ತ ಮಾಡಲು ಕೈಜೋಡಿಸಿ: ಶಾಸಕಿ ಅನ್ನಪೂರ್ಣ

Date:

ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಲು ಸಂಡೂರು ಶಾಸಕಿ ಈ. ಅನ್ನಪೂರ್ಣ ಕರೆ ನೀಡಿದರು.

‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ವತಿಯಿಂದ ನಗರದ ಬಿಮ್ಸ್ ನ ವೈದ್ಯ ಭವನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕ್ಷಯವು ಚಿಕ್ಕ ಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಸಹ ಬರಬಹುದಾಗಿದೆ. ಗ್ರಾಮೀಣ ಪ್ರದೇಶದ ಜನತೆ ಕ್ಷಯರೋಗದ ಕುರಿತು ಹೆಚ್ಚು ಕಾಳಜಿ ತೆಗೆದುಕೊಳ್ಳದೇ ಇರುವುದು ಕಂಡುಬರುತ್ತಿದ್ದು, ಈ ದಿಸೆಯಲ್ಲಿ ಸೂಕ್ತ ಜಾಗೃತಿ ನೀಡಬೇಕು. ಜೊತೆಗೆ ಕ್ಷಯರೋಗವನ್ನು ಸಕಾಲದಲ್ಲಿ ಗುರುತಿಸುವ ಕಾರ್ಯದಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಆಶಾಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 25 at 10.13.30 AM

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿ, “ಕ್ಷಯರೋಗವು ಹಿಂದಿನ ಕಾಲದಲ್ಲಿ ಸಾಕಷ್ಟು ಪರಿಣಾಮ ಬೀರಿತ್ತು. ಪ್ರಸ್ತುತದಲ್ಲಿ ಆಧುನಿಕ ತಂತ್ರಜ್ಞಾನವುಳ್ಳ ಯಂತ್ರಗಳು ಲಭ್ಯವಿದ್ದು, ಸಕಾಲದಲ್ಲಿ ಗುರುತಿಸಿ ತ್ವರಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ” ಎಂದು ಹೇಳಿದರು.

“ಜಿಲ್ಲೆಯಲ್ಲಿ ಕ್ಷಯ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿವೆ. ಸಂಪೂರ್ಣವಾಗಿ ಕಡಿಮೆ ಮಾಡಲು ಸಾರ್ವಜನಿಕರು ಆರೋಗ್ಯ ಇಲಾಖೆ ಜತೆ ಕೈಜೋಡಿಸಬೇಕು. ಕ್ಷಯ ಲಕ್ಷಣ ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು. ಬಳಿಕ ಶೀಘ್ರವಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಹೇಳಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಮಾತನಾಡಿ, “ಜಿಲ್ಲೆಯಲ್ಲಿ ಈಗಾಗಲೇ ಕ್ಷಯವನ್ನು ತ್ವರಿತವಾಗಿ ಪತ್ತೆಹಚ್ಚಲು ಸಿಬಿನ್ಯಾಟ್ ಯಂತ್ರಗಳನ್ನು ಬಿಮ್ಸ್, ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹಾಗೂ ಟ್ರುನ್ಯಾಟ್ ಮಿಷನ್ ಗಳನ್ನು ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅನುಷ್ಠಾನ ಮಾಡಲಾಗಿದ್ದು, ರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಕಾರಿಯಾಗಿದ್ದು, ಚಿಕಿತ್ಸೆ ಪೂರ್ಣಗೊಂಡು ಗುಣಮುಖರಾಗುವ ಪ್ರಮಾಣ ಶೇ.85 ರಷ್ಟಿದ್ದು ರಾಜ್ಯಮಟ್ಟದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆಯು ಒಂದಾಗಿದೆ ಎಂದು ತಿಳಿಸಿದರು.

WhatsApp Image 2025 03 25 at 10.13.29 AM

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2024 ಸಾಲಿಗೆ ಕ್ಷಯಮುಕ್ತ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಆ ವ್ಯಾಪ್ತಿಯ ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಜಾಥಾವು ಗಮನ ಸೆಳೆಯಿತು. ವಿವಿಧ ಸಾಂಸ್ಕೃತಿ ಕಲಾತಂಡಗಳನ್ನೊಳಗೊಂಡ ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿ ಘೋಷಣೆ ಕೂಗುವ ಮೂಲಕ ಜಾಗೃತಿ ಮೂಡಿಸಿದರು. ಕ್ಷಯರೋಗ ಜಾಗೃತಿ ಮೂಡಿಸುವ ಮಾಹಿತಿ ಫಲಕಗಳು ರಾರಾಜಿಸಿದವು.

ಜಾಗೃತಿ ಜಾಥಾವು ನಗರದ ಕನಕದಾಸರ ವೃತ್ತದ ಕೆಎಂಎಫ್ ಮುಂಭಾಗದಿಂದ ಆರಂಭಗೊಂಡು ಇನ್ ಫ್ಯಾಂಟರಿ ರಸ್ತೆಯ ಮೂಲಕ ಬಳ್ಳಾರಿ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ದ ವೈದ್ಯ ಭವನದ ಸಭಾಂಗಣದವರೆಗೆ ಸಾಗಿ ಸಮಾರೋಪಗೊಂಡಿತು.

WhatsApp Image 2025 03 25 at 10.13.30 AM 1

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್ ಸೇರಿದಂತೆ ವಿವಿಧ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಟಿಬಿ ವಿಭಾಗದ ಸಿಬ್ಬಂದಿ, ಟಿಬಿ ಚಾಂಪಿಯನ್ಸ್ ಹಾಗೂ ಬಿಮ್ಸ್ ನ ತರಬೇತುದಾರ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...