ಬಳ್ಳಾರಿ | ಜೋಳದ ರಾಶಿ ದೊಡ್ಡನಗೌಡರ ಕಲಾಸೇವೆ ಅಪಾರ: ಎನ್ ಬಸವರಾಜ್

Date:

ಕವಿಶ್ರೇಷ್ಠ ಜೋಳದರಾಶಿ ದೊಡ್ಡನಗೌಡರು ನಾಟಕ, ಗಮಕ, ಸಾಹಿತ್ಯ ಸೇರಿದಂತೆ ಕಲಾ ಕ್ಷೇತ್ರಕ್ಕೆ ನೀಡಿದ ಸೇವೆ ಅಪಾರ ಎಂದು ಎನ್ ಬಸವರಾಜ್ ಸ್ಮರಿಸಿದರು.

ಬಳ್ಳಾರಿ ನಗರದ ರಾಘವ ಕಲಾಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ದೊಡ್ಡನಗೌಡರ 30ನೇ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ತಾಯಿ ರುದ್ರಮ್ಮ ಹಾಗೂ ತಂದೆ ಪಂಪನಗೌಡರ ಮಗನಾಗಿ 27 ಜುಲೈ 1910ರಂದು ಜನಿಸಿದರು. ಜೋಳದರಾಶಿಯ ಗುಡಿಬಡಿಯಲ್ಲಿ 4ನೇ ತರಗತಿವರೆಗೆ ಓದಿದರು. ಆದರೆ ಮುಂದೆ ಅವರು ನಾಟಕ, ರಂಗಭೂಮಿಯ ಸೇವೆಯಲ್ಲಿ ತೊಡಗಿಕೊಂಡರು. ಗಡಿ ಭಾಗದಲ್ಲಿದ್ದುದರಿಂದ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ, ಸಾಹಿತ್ಯ ರಚನೆಯನ್ನೂ ಮಾಡಿದರು. ಸುಮಾರು 40 ಪುಸ್ತಕಗಳನ್ನು ಬರೆದಿದ್ದಾರೆ. ಗಮಕ ಕಲೆಗೆ ಅವರಿತ್ತ ಕೊಡುಗೆ ಅಪಾರವಾದುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಳ್ಳಾರಿ ರಾಘವರ ಶಿಷ್ಯರಾಗಿ ನಾಟಕ ರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಹೋಗಿ ಬರ್ತೀನಯ್ಯ ನಮ್ಮಊರಿಗೆ ಎಂಬ ಹಾಡನ್ನು ತೆಲುಗಿನಲ್ಲಿ ‘ಪೋಯಿ ವಸ್ತಾನಂಡಿ ಮಾ ಇಂಟಿಕಿ’ ಎಂದು ಬರೆದು ಅದರಂತೆ ಮರಳಿ ಬಾರದೂರಿಗೆ ತೆರಳಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು. ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಹಾಗೂ ಆಂಧ್ರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ” ಎಂದು ಗೌಡರ ಸಾಧನೆಗಳನ್ನು ಸ್ಮರಿಸಿದರು.

ಇದನ್ನೂ ಓದಿ: ಬಳ್ಳಾರಿ | ಮನರೇಗಾ ಕಾರ್ಮಿಕರಿಗೆ ಎರಡು ವರ್ಷಗಳಿಂದ ಕೂಲಿ ನೀಡಿಲ್ಲ: ಶಾಂತಮ್ಮ ಅರೋಪ

ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಕೆ ಚನ್ನಪ್ಪ, ಅಧ್ಯಕ್ಷ ಕೆ ಕೊಟೇಶ್ವರ ರಾವ್, ಗೌರವ ಕಾರ್ಯದರ್ಶಿ ಎನ್ ಪ್ರಕಾಶ್, ಕೆ ಕೃಷ್ಣ, ಸಿ ಎ ಚೌದರಿ, ಜಿ ಪ್ರಭಾಕರ, ಕೆ ಪೊಂಪನ ಗೌಡ, ಪಿ ಶ್ರೀನಿವಾಸಲು, ವಿ ರಾಮಚಂದ್ರ, ಶೇಷ ರೆಡ್ಡಿ, ಕಾಳಿದಾಸ, ಕಪ್ಪಗಲ್ಲು ಪ್ರಭುದೇವ, ರಮಣಪ್ಪ ಭಜಂತ್ರಿ ಗೌಡರ ಕುಟುಂಬದವರು ಹಾಗೂ ಕಲಾವಿದರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...