ಬಳ್ಳಾರಿ | ಜೆಎಸ್‌ಡಬ್ಲ್ಯೂ ಕಾರ್ಖಾನೆ ದುರಂತ; ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯ

Date:

ಬಳ್ಳಾರಿಯ ಜೆಎಸ್‌ಡಬ್ಲ್ಯೂ ಉಕ್ಕಿನ ಕಾರ್ಖಾನೆ ಸಾವಿನ ಕಂಪನಿಯಾಗಿದ್ದು, ಎರಡು ವರ್ಷಗಳ ಹಿಂದೆ ವೇಸ್ಟ್ ಡಂಪಿಂಗ್ ಯಾರ್ಡ್‌ನಲ್ಲಿ ದುರಂತದಲ್ಲಿ ಸಾವಿಗೀಡಾದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡಬೇಕು ಎಂದು ಜಿಂದಾಲ್ ಕಾರ್ಖಾನೆಯ ಆಡಳಿತ ಅಧಿಕಾರಿಗಳನ್ನು ವಕೀಲ ಬಾದಾಮಿ ಶಿವಲಿಂಗ ನಾಯಕ ಒತ್ತಾಯಿಸಿದರು.

ಜಿಲ್ಲೆಯ ಸಂಡೂರು ತಾಲೂಕಿನ ತುಮಟಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ರಾಮಾಂಜನಿ ಹಾಗೂ ಹೊನ್ನೂರಪ್ಪ ಅವರು ಜಿಂದಾಲ್ ಉಕ್ಕಿನ ಕಾರ್ಖಾನೆಯ ವೇಸ್ಟ್ ಡಂಪಿಂಗ್ ಯಾರ್ಡ್ ನಲ್ಲಿ ನಡೆದ ಅವಘಡದಲ್ಲಿ ಮರಣ ಹೊಂದಿದ್ದರು. ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕೆಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.

“ಬಡತನ ಹಾಗೂ ಹಸಿವು ಮನುಷ್ಯನಿಗೆ ಯಾವ ಕೆಲಸವನ್ನಾದರೂ ಮಾಡಲು ಪ್ರೇರೇಪಿಸುತ್ತದೆ. ಅದೇ ರೀತಿ ತನ್ನ ಕುಟುಂಬದ ಆರ್ಥಿಕ ಸಂಕಷ್ಟ ನೀಗಿಸಿಕೊಳ್ಳಲು ಸಂಡೂರು ತಾಲೂಕಿನ ತುಮಟಿ ಗ್ರಾಮದ ಹೊನ್ನೂರಪ್ಪ ಹಾಗೂ ರಾಮಾಂಜನಿ ಇವರುಗಳು ಹೊಟ್ಟೆಪಾಡಿಗಾಗಿ ಜಿಂದಾಲ್ ಕಾರ್ಖಾನೆಯ ಡಂಪಿಂಗ್ ಯಾರ್ಡ್ ನಲ್ಲಿ ಕಬ್ಬಿಣದ ತುಂಡುಗಳನ್ನು ಸಂಗ್ರಹಿಸಲು ಹೋಗಿ ಜೀವ ಕಳೆದುಕೊಂಡಿದ್ದು, ಕುಟುಂಬಕ್ಕೆ ಸೌಜನ್ಯಕ್ಕಾದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ಕನಿಷ್ಠ ಸೌಲಭ್ಯವನ್ನು ಕಲ್ಪಿಸಿ ಕೊಡಬೇಕು. ಘಟನೆ ನಡೆದು ಎರಡುವರೆ ವರ್ಷ ಕಳೆದರೂ ಜಿಲ್ಲಾಧಿಕಾರಿಗಳು, ತಾಲೂಕಿನ ಶಾಸಕರು ಹಾಗೂ ಅವಳಿ ಜಿಲ್ಲೆಯ ಸಂಸದರಾಗಲಿ ಕುಟುಂಬದ ನೆರವಿಗೆ ಬಂದಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಆ ಕುಟುಂಬದ ನೆರವಿಗೆ ಬರಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಖರೀದಿ ಕೇಂದ್ರದ ಜೋಳವನ್ನು ಶೀಘ್ರ ಸಾಗಾಣಿಕೆ ಮಾಡಿ: ಮೆಣಸಿನ ಈಶ್ವರಪ್ಪ

ಇಷ್ಟಾದರೂ ಜಿಲ್ಲಾಧಿಕಾರಿಗಳು ಮತ್ತು ಜಿಂದಾಲ್ ಕಾರ್ಖಾನೆಯ ಅಧಿಕಾರಿಗಳು ನಿರ್ಲಕ್ಷ ವಹಿಸಿದಲ್ಲಿ ಇದೇ ಜೂನ್ 27ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ವಿ ಎಸ್ ಶಿವಶಂಕರ್, ಮಾನವ ಬಂಧುತ್ವ ವೇದಿಕೆಯ ಸಂಗನಕಲ್ಲು ವಿಜಯಕುಮಾರ್, ಎ ಸ್ವಾಮಿ, ರತ್ನಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...