ಬಳ್ಳಾರಿ | ಜೋಳ ಖರೀದಿ ಕೇಂದ್ರ ತೆರೆಯಲು ಕನ್ನಡ ನಾಡು ರೈತ ಸಂಘ ಮನವಿ

Date:

ಕಳೆದ ವರ್ಷ ಕಟಾವು ಮಾಡಿರುವ ಜೋಳ ರೈತರ ಮನೆ ಮುಂದೆ ಒಣಗುತ್ತಿದೆ. ಕೂಡಲೇ ಹಿಂಗಾರು ಜೋಳ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕನ್ನಡ ನಾಡು ರೈತ ಸಂಘ ಬಳ್ಳಾರಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಸಂಘದ ಅಧ್ಯಕ್ಷ ಈಶ್ವರಪ್ಪ ಮೆಣಸಿನ ಮಾತನಾಡಿ, “ಜೋಳ, ಬಳ್ಳಾರಿ ಜಿಲ್ಲಾ ಹಾಗೂ ತಾಲೂಕಿನ ಪ್ರಮುಖ ಬೆಳೆಯಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಕಟಾವು ಮಾಡಿರುವ ಕ್ವಿಂಟಲ್‌ಗಟ್ಟಲೆ ಜೋಳವನ್ನು ರೈತರು ಮನೆ ಮುಂದೆ ಹಾಕಿಕೊಂಡಿದ್ದಾರೆ. ಅಲ್ಲದೇ, ಮುಂಗಾರು ಬೆಳೆ ಪ್ರಾರಂಭಗೊಂಡಲ್ಲಿ ಬೆಳೆಯು ಸಂಪೂರ್ಣ ನಾಶವಾಗುತ್ತದೆ. ಸಾಲ ಮಾಡಿ ಬೆಳೆದಿರುವ ಒಂದೇ ಬೇಳೆ ಹೀಗೆ ನೀರು ಪಾಲಾದರೆ ರೈತರ ನೋವು ಕೇಳುವವರಾರು? ಆದರೆ, ಇನ್ನೂ ಖರೀದಿ ಕೇಂದ್ರ ಸ್ಥಾಪಿಸಿಲ್ಲ. ಜೋಳದ ನೋಂದಣಿ ಮಾಡುವ ಕೆಲಸವೂ ನಡೆದಿಲ್ಲ. ಆದ್ದರಿಂದ, ಜೋಳವನ್ನು ಗೋದಾಮಿಗೆ ತೆಗೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

WhatsApp Image 2025 03 25 at 12.42.17 PM

ಸಂಘದ ಉಪಾಧ್ಯಕ್ಷ ಜಿ.ಭಾಸ್ಕರ್ ರೆಡ್ಡಿ, “ಮಾರ್ಚ್ 10ರಿಂದ 24ರವರೆಗೆ ಸುಮಾರು 150 ರೈತರು 10,000 ಕ್ವಿಂಟಲ್ ಜೋಳವನ್ನು ತೂಕ ಹಾಕಿರುತ್ತಾರೆ. ಇನ್ನುಳಿದ 935 ರೈತರು ಇನ್ನು 90,000 ಕ್ವಿಂಟಲ್ ಜೋಳವನ್ನು ತರಲಿದ್ದಾರೆ. ಆದ್ದರಿಂದ, ಆದಷ್ಟು ಬೇಗನೇ ಜೋಳವನ್ನು ತೂಕ ಮಾಡಿ ಲಾರಿಗಳಲ್ಲಿ ಲೋಡ್ ಮಾಡಿಸಬೇಕು. ಜಿ.ಪಿ.ಎಸ್. ಗಾಡಿಗಳು 3-4 ಲಾರಿಗಳು ಬಂದರೆ ಜೋಳವನ್ನು ಖರೀದಿ ಮಾಡಲು ವಿಳಂಬವಾಗುತ್ತದೆ. ಈಗಾಗಲೇ ಜೋಳ ಕಟಾವು ಆಗಿ 3 ತಿಂಗಳುಗಳು ಮೇಲೆ ಆಗಿದೆ. ಇನ್ನೂ ಬಿಟ್ಟರೆ ಜೋಳಕ್ಕೆ ಹುಳು ಬೀಳುವ ಸಾಧ್ಯತೆ ಇರುತ್ತದೆ. ನಂತರ ಸಂಕಷ್ಟಕ್ಕೀಡಾದ ರೈತ ಆತ್ಮಹತ್ಯೆ ಹಾದಿ ಹಿಡಿಯುತ್ತಾನೆ. ಅದರ ನೇರ ಹೊಣೆ ಸರ್ಕಾರದ್ದೇ ಆಗಿರುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಪಿ.ಮಂಜುನಾಥ, ಈರಣ್ಣ .ಬಿ, ಎಸ್,. ಚಂದ್ರಣ್ಣ, ಎನ್.ನಾಗೇಂದ್ರ, ಗಡಿಗೆ ರುದ್ರಗೌಡ, ಶಿವಮೂರ್ತಿ ಕಣ್ಣಿ, ಎಲ್.ಮಂಜುನಾಥಗೌಡ, ಆರ್.ಪ್ರದೀಪ್, ರುದ್ರಪ್ಪ, ಶಿವಶಂಕರಪ್ಪ, ಎನ್.ವಿಶ್ವನಾಥ, ಎಂ.ಎರ್ರಿಸ್ವಾಮಿ, ಚಂದ್ರಾರೆಡ್ಡಿ, ಗೋವಿಂದಪ್ಪ, ಪಿ.ಮನೋಜ್ ಕುಮಾರ್ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...