ಬಳ್ಳಾರಿ | ಸರ್ಕಾರಿ ಶಾಲೆಗಳ ನಿರ್ವಹಣೆ; ಕಾರ್ಪೊರೇಟ್‌ ದಾನಿಗಳಿಗೆ ನೀಡದಂತೆ ಆಗ್ರಹ

Date:

ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು, ಸರ್ಕಾರ ಕಾರ್ಪೊರೇಟ್ ದಾನಿಗಳಿಗೆ ನೀಡಿರುವುದು ಖಂಡನೀಯ ಎಂದು ಎಐಡಿಎಸ್‌ಒ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.

“ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಖಾಸಗಿ ಕಂಪನಿಗಳು ನೀಡುವ ಸಿಎಸ್ಆ‌ರ್ ಅನುದಾನ ಹೆಚ್ಚಿಸಲು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಉನ್ನತೀಕರಿಸಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸುವುದಕ್ಕೆ ಸಮಿತಿ ರಚಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವವುದು ಖಂಡನೀಯ” ಎಂದರು.‌

“ಕಾರ್ಪೊರೇಟ್ ದಾನಿಗಳ ಮೇಲೆ ಅವಲಂಬಿತರಾಗಿ ಸರ್ಕಾರಿ ಶಾಲೆಗಳಿಗೆ ಹಣಕಾಸು ನೀಡುವ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ಸರ್ಕಾರದ ಈ ಧೋರಣೆ ಒಳ್ಳೆಯ ಬೆಳವಣಿಗೆಯಂತೆ ಕಾಣುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಮಕ್ಕಳಿಗೆ ಶಿಕ್ಷಣ ಒದಗಿಸುವುದು ಸರ್ಕಾರದ ಮೂಲ ಜವಾಬ್ದಾರಿ. ಶಿಕ್ಷಣಕ್ಕೆ ಹಣಕಾಸು ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ಕಳೆದ ತಿಂಗಳು ಮಳೆಯ ಪ್ರಭಾವಕ್ಕೆ ಮತ್ತಷ್ಟು ದಯನೀಯ ಸ್ಥಿತಿ ತಲುಪಿದೆ. ಶಾಲೆಗಳ ದುರಸ್ತಿಗೆ ಹಣ ಬೇಕು. ಆದರೆ ಕಾರ್ಪೋರೇಟ್ ಕಂಪನಿಗಳು ಕೊಡುವ ದಾನದ ಹಣವಲ್ಲ. ಈ ರಾಜ್ಯದ ಜನಸಾಮಾನ್ಯರು ಕಟ್ಟುವ ತೆರಿಗೆ ಹಣದಿಂದ ಸರ್ಕಾರಿ ಶಾಲೆಗಳ ನಿರ್ವಹಣೆ ನಡೆಯಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ಅಕ್ರಮ ಆಸ್ತಿ ವಶಕ್ಕೆ

“ಕಾರ್ಪೋರೇಟ್ ಕಂಪನಿಗಳು ಹಣ ನೀಡಿ ಸರ್ಕಾರಿ ಶಾಲೆಗಳ ಮೇಲೆ ಹಕ್ಕು ಸಾಧಿಸುವ ಕನಿಷ್ಠ ಅವಕಾಶವನ್ನೂ ರಾಜ್ಯ ಸರ್ಕಾರ ನೀಡಬಾರದು. ಸರ್ಕಾರಿ ಸಂಸ್ಥೆಗಳಿಗೆ ನೀಡುವ ಹಣಕಾಸನ್ನು ಕ್ರಮೇಣವಾಗಿ ಕಡಿತಗೊಳಿಸಿ ಸ್ವಯಂ-ಹಣಕಾಸು ಸಂಸ್ಥೆಗಳನ್ನಾಗಿ ಮಾಡುವುದು ಎನ್‌ಇಪಿ-2020ರ ಮುಖ್ಯ ಶಿಫಾರಸುಗಳಲ್ಲೊಂದು. ಎನ್‌ಇಪಿ 2020ನ್ನು ರಾಜ್ಯದಲ್ಲಿ ತಿರಸ್ಕರಿಸುತ್ತಿರುವ ಸರ್ಕಾರ ಈ ನೀತಿಯನ್ನೂ ಕೈಬಿಡಬೇಕು” ಎಂದು ಎಐಡಿಎಸ್ಒ ರಾಜ್ಯ ಸಮಿತಿ ಪರವಾಗಿ ಆಗ್ರಹಿಸಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಪ್ರಕಟಣೆಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...