ಬಳ್ಳಾರಿ | ಬೇಸಿಗೆಯಲ್ಲಿ ಮನರೇಗಾ ಕಾರ್ಮಿಕರಿಗೆ ನಿರಂತರ ಕೆಲಸ, ಕೂಲಿ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆಸ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ಏಪ್ರಿಲ್‌ 01 ರಿಂದ ₹370ಕ್ಕೆ ಕೂಲಿ ಹೆಚ್ಚಳವಾಗಿದ್ದು, ಬೇಸಿಗೆಯಲ್ಲಿಯೂ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್‌ ತಿಳಿಸಿದ್ದಾರೆ.

“ಮಹಾತ್ಮಗಾಂಧಿ ಮನರೇಗಾ ಯೋಜನೆಯಡಿ ಕೂಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ ₹349ರಿಂದ ₹370ಕ್ಕೆ ಪರಿಷ್ಕರಿಸಿ ಆರ್ಥಿಕ ವರ್ಷ 2025-26ನೇ ಸಾಲಿಗೆ ಅನ್ವಯವಾಗುವಂತೆ ಏಪ್ರಿಲ್‌ 01ರಿಂದ ₹370 ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ” ಎಂದು ಹೇಳಿದರು.

“ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6ರ ಅರ್ಜಿಯನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ, ಮನರೇಗಾ ಯೋಹನೆಯಡಿ ಪ್ರತಿ ಕುಟುಂಬವು ತಮ್ಮ ಗ್ರಾಮದಲ್ಲೇ 100 ದಿನಗಳವರೆಗೆ ಕೂಲಿ ಕೆಲಸದಲ್ಲಿ ಭಾಗವಹಿಸಬೇಕು” ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ಚೇತನರು ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು:

ಮಹಾತ್ಮಗಾಂಧಿ ಮನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ. ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10ರಷ್ಟು ರಿಯಾಯತಿ ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ: ರೆಡ್ಡಿ ಶ್ರೀನಿವಾಸ

ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್‌ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.

ನಮೂನೆ-1 ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜತೆಗೆ ಪಾಸ್ ಪೋಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯಿತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...