ಬಳ್ಳಾರಿ | ಹೆಣ್ಣಿಗೆ ನೈಸರ್ಗಿಕ ಕೊಡುಗೆ ತಾಯ್ತನ: ಡಾ. ಶೋಭಾರಾಣಿ

Date:

ತಾಯ್ತನ ಎಂಬುದು ಹೆಣ್ಣು ಮಕ್ಕಳಿಗೆ ನೈಸರ್ಗಿಕವಾಗಿ ಸಿಕ್ಕಿರುವ ಕೊಡುಗೆಯಾಗಿದೆ. ಹೆಣ್ಣಿನ ಜೀವನದಲ್ಲಿ ತಾಯಿಯಾಗುವುದು ಅತ್ಯಂತ ಪ್ರಮುಖ ಘಟ್ಟ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ ಜೆ ಶೋಭಾರಾಣಿ ಅಭಿಪ್ರಾಯಪಟ್ಟರು.

ಸುಬ್ಬರಾವ್ ಆಸ್ಪತ್ರೆಯಲ್ಲಿ ನಡೆದ ಬಂಜೆತನ ನಿವಾರಣಾ ಸಮಾರಂಭದಲ್ಲಿ ಮಾತನಾಡಿದ ಅವರು, “ಬಂಜೆತನ ವಿವಾಹಿತ ಮಹಿಳೆಯರಲ್ಲಿ ಕೀಳರಮೆಯನ್ನು ಉಂಟುಮಾಡುತ್ತದೆ. ಹೆಣ್ಣು ಮಕ್ಕಳು ದೈಹಿಕವಾಗಿ ಸಬಲರಾಗಿದ್ದರೂ ಆರೋಗ್ಯ ಮತ್ತು ಸಂತಾನ ವಿಷಯದಲ್ಲಿ ಅನಾರೋಗ್ಯವಾಗಿದ್ದರೆ ಅಂಥವರಲ್ಲಿ ಸಂತಾನ ಆಗುವುದು ಕಷ್ಟ. ಇದು ಕೇವಲ ಹೆಣ್ಣಿನ ದೌರ್ಬಲ್ಯವಲ್ಲ, ಅದು ಗಂಡಿನದೂ ಸಮಸ್ಯೆ ಇರಬಹುದು. ಆದ್ದರಿಂದ ದಂಪತಿಗಳು ಇಬ್ಬರು ಚಿಕಿತ್ಸೆಗೆ ಮತ್ತು ತಪಾಸಣೆಗೆ ಒಳಪಟ್ಟಲ್ಲಿ ಅಂಥವರಿಗೆ ಬಂಜೆತನ ನಿವಾರಿಸಿ ಮಕ್ಕಳ ಸಂತಾನವನ್ನು ಹೊಂದಲು ಅನುಕೂಲವಾಗುತ್ತದೆ” ಎಂದು ತಿಳಿಸಿದರು.

“ಕೆಲ ಮಹಿಳೆಯರು ಹೆಣ್ಣು ಮಗುವಾದಲ್ಲಿ ಕೀಳರಿಮೆಗೆ ಒಳಗಾಗುತ್ತಾರೆ ಅಥವಾ ಅವರ ಕೌಟುಂಬಿಕ ಸದಸ್ಯರಿಂದ ಹೀಯಾಳಿಕೆಗೆ ಒಳಪಟ್ಟು ಹೆಣ್ಣು ಮಗು ಹೆರುವುದೇ ಒಂದು ಅಪರಾಧ ಎಂಬಂತೆ ಭಾವಿಸಿರುತ್ತಾರೆ. ಇದು ಸಮಾಜದಲ್ಲಿ ಅತ್ಯಂತ ತಪ್ಪು ಕಲ್ಪನೆಯಾಗಿದೆ. ಹೆಣ್ಣಾಗಲಿ ಗಂಡಾಗಲಿ ಇಬ್ಬರಿಗೂ ಸಮಾನವಾದ ಪ್ರಾಶಸ್ತ್ಯವನ್ನು ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ ಆರ್ ಆಸ್ಪತ್ರೆಯ ಮುಖ್ಯ ವೈದ್ಯರಾದ ಡಾ ಲಕ್ಷ್ಮಿ ಪಾವನಿ ಮಾತನಾಡಿ, “ಇಷ್ಟು ವರ್ಷಗಳಲ್ಲಿ ಸುಮಾರು 10 ಸಾವಿರ ಮಹಿಳೆಯರಿಗೆ ತಪಾಸಣೆ ಮಾಡಿ ಅವರ ಬಂಜೆತನದ ದೌರ್ಬಲ್ಯವನ್ನು ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಿ, ಅವರು ಸಂತಾನ ಫಲವನ್ನು ಪಡೆಯುವಲ್ಲಿ ಯಶಸ್ವಿಯಾಗಿರುತ್ತೇವೆ. ನಮ್ಮ ಆಸ್ಪತ್ರೆಯಲ್ಲಿ ಪ್ರತಿ ಗುರುವಾರದಂದು ಬಂಜೆತನದ ತಪಾಸಣೆಯನ್ನು ಉಚಿತವಾಗಿ ಮಾಡಲಾಗುವುದು. ನಂತರದ ಚಿಕಿತ್ಸೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮಹಿಳೆಯರಿಗೆ ಚಿಕಿತ್ಸೆಯನ್ನು ನೀಡಲಾಗುವುದು ಮತ್ತು ರೈತರಿಗೆ ರೈತ ಮಹಿಳೆಯರಿಗೆ ಅವರ ಪಹಣಿ ಪತ್ರಿಕೆ ದಾಖಲೆಯನ್ನು ತಂದಲ್ಲಿ ಚಿಕಿತ್ಸೆಯ ವೆಚ್ಚದಲ್ಲಿ ಇನ್ನಷ್ಟು ರಿಯಾಯಿತಿಯನ್ನು ನೀಡುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಬಳ್ಳಾರಿ | ಮಹನೀಯರ ಜಯಂತಿ ಅದ್ದೂರಿ ಆಚರಣೆ: ಡಿಸಿ ಪ್ರಶಾಂತ್‌ ಮಿಶ್ರಾ

ಈ ವೇಳೆ ಆಸ್ಪತ್ರೆಯ ವೈದ್ಯೆ ಡಾ. ಅಂಜಲಿ, ಡಾ. ಸತೀಶ್ ಕುಮಾರ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...