ಬಳ್ಳಾರಿ | ಸಿಜೆಐಗೆ ಅವಮಾನಿಸಿದ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮಕ್ಕೆ ಮುಂಡರಗಿ ನಾಗರಾಜ್ ಆಗ್ರಹ

Date:

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿರವರ ಮೇಲೆ ರಾಕೇಶ್ ಕಿಶೋರ್ ಎಂಬ ಸನಾತನಿ ವಕೀಲ ಶೂ ಎಸೆದು ತನ್ನ ವಿಕೃತಿ ಮೆರೆದಿದ್ದಾನೆ. ಅವನನ್ನು ಯಾವುದೇ ಕಾರಣಕ್ಕೆ ಕ್ಷಮಿಸದೆ ಆತನ ಮೇಲೆ ಸುವೋ ಮೋಟೋ ಕೇಸ್ ದಾಖಲಿಸಿಕೊಂಡು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಳ್ಳಾರಿಯ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್ ಆಗ್ರಹಿಸಿದರು.

‌ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರಗತಿಪರ ಮತ್ತು ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇದು ಕೇವಲ ಬಿ ಆರ್ ಗವಾಯಿಗಳ ಮೇಲೆ ನಡೆದ ದಾಳಿಯಲ್ಲ; ನಮ್ಮ ಸಂವಿಧಾನದ ಮೇಲೆ ನಡೆಸಿದ ದಾಳಿಯಾಗಿದೆ. ದಲಿತ ನ್ಯಾಯಮೂರ್ತಿ ಒಬ್ಬ ಸರ್ವೋಚ್ಚ ನ್ಯಾಯಾಲಯದಲ್ಲಿ ಕುಳಿತುಕೊಳ್ಳುವುದನ್ನು ಸಹಿಸದ ಸನಾತನವಾದಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಅವರ ಮೇಲೆ ಕಠಿಣವಾದ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಗುರಿಪಡಿಸಬೇಕು” ಎಂದರು.

“ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ಹಾಕುವ ಪರಸ್ಪರ ದ್ವೇಷ ಹಾಗೂ ಅಸಹನೆಯನ್ನು ಹುಟ್ಟು ಹಾಕುವಂತಹ ಸನಾತನಿ ರಾಕೇಶ್ ಕಿಶೋರ್ ಎಂಬ ಮನುವಾದಿಯನ್ನು ನಾವು ಯಾವುದೇ ಕಾರಣಕ್ಕೂ ಕ್ಷಮಿಸಬಾರದು. ನಾತುರಾಮ್ ಗೋಡ್ಸೆ ಅಂತ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಬಿಂಬಿಸಲು ಹೊರಟಿರುವ ರೀತಿಯಲ್ಲಿಯೇ ಈ ಪುಂಡ ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿದ್ದಾರೆ. ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರಗಿಸಬೇಕಾದ ಅವಶ್ಯಕತೆ ಇದೆ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಮಾನಸಿಕ ಒತ್ತಡ ನಿವಾರಿಸಲು ಸಾಮಾಜಿಕ ಸಂವಹನ ಬೆಳಿಸಿಕೊಳ್ಳಿ: ನ್ಯಾ. ರಾಜೇಶ್ ಹೊಸಮನೆ

ಈ ವೇಳೆ ದಲಿತ ನಾಯಕ ಗೋವರ್ಧನ್, ವಿಕೆ ಬಸಪ್ಪ, ಸಂಗನಕಲ್ಲು ವಿಜಯಕುಮಾರ್, ಕಲ್ಲುಕಂಬ ಪಂಪಾಪತಿ, ಎಲ್ ಮಾರಣ್ಣ, ರಾಜಶೇಖರ್, ಜಗನ್, ವಿಜ್ಞೇಶ್, ಸೋಮು ಕೊಳಗಲ್, ಮಾರೇಶ್ ಉಮೇಶ್ ಗೌಡ, ಗಾದೆಪ್ಪ, ಹುಮಾಯುನ್ ಖಾನ್, ಹರಿವಾಣ ಮಲ್ಲಿ, ಶ್ರೀನಿವಾಸ್ ಭಂಡಾರಿ, ಕೊಡ್ಲೆ ಮಲ್ಲಿಕಾರ್ಜುನ, ಅರುಣ್ ಕುಮಾರ್, ಸಣ್ಣ ನಾಗರಾಜ್, ಕೊಳಗಲ್ಲು ಎರ್ರಿಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...