ಬಳ್ಳಾರಿ | ಕೊಲೆ ಪ್ರಕರಣ; ಮೃತನ ಪತ್ನಿ, ಆಕೆಯ ಪ್ರಿಯಕರ ಸೇರಿ 11 ಮಂದಿ ಬಂಧನ

Date:

ಬಳ್ಳಾರಿ ನಗರದ ರಾಣಿತೋಟ ಪ್ರದೇಶದಲ್ಲಿ ವೆಂಕಟೇಶ್​ ಎಂಬುವವರ ಕೊಲೆ ಪ್ರಕರಣ ಸಂಬಂಧ ಆತನ ಪತ್ನಿ ಹಾಗೂ ಪತ್ನಿಯ ಪ್ರಿಯಕರ ಸೇರಿದಂತೆ 11 ಮಂದಿಯನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬಳ್ಳಾರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ವಿ ಜೆ ಶೋಭಾರಾಣಿ ಮಾತನಾಡಿ, “ಏಪ್ರಿಲ್‌ 4ರಂದು ವೆಂಕಟೇಶ್​ ಪತ್ನಿ ನೀಲವೇಣಿ, ʼದುಷ್ಕರ್ಮಿಗಳು ನನ್ನ ಪತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆʼ ಎಂದು ದೂರು ಕೊಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ಕೈಗೊಂಡಾಗ ವೆಂಕಟೇಶ್​ ಕೊಲೆಯಲ್ಲಿ ಪತ್ನಿ ನೀಲವೇಣಿಯ ಕೈವಾಡ ಇರುವುದೂ ತಿಳಿದುಬಂದಿದೆ” ಎಂದರು.

“ನೀಲವೇಣಿ ಮತ್ತು ಈ ಪ್ರಕರಣದ ಎರಡನೇ ಆರೋಪಿ ಆನಂದ್​ ಸೇರಿ ಶಾಮಿಯಾನದ ವ್ಯವಹಾರ ನಡೆಸುತ್ತಿದ್ದರು. ಇಬ್ಬರ ನಡುವೆ ಆಪ್ತ ಸಂಬಂಧ ಇತ್ತು. ಹೀಗಾಗಿ ಇಬ್ಬರ ಮೇಲೆ ವೆಂಕಟೇಶ್​ಗೆ ಅನುಮಾನವಿದ್ದು, ಪದೇ ಪದೆ ಈ ವಿಚಾರವಾಗಿ ಜಗಳ ನಡೆಯುತ್ತಿತ್ತೆಂದು ಮಾಹಿತಿ ಬಂದಿದೆ. ಏಪ್ರಿಲ್‌ 3ರಂದು ವೆಂಕಟೇಶ್​ ಮನೆಯಲ್ಲಿ ಕಾರ್ಯಕ್ರಮವಿತ್ತು. ಅಂದು ಅವರು ಸಂಬಂಧಿಕರ ಮುಂದೆ ಈ ವಿಚಾರವಾಗಿ ಗಲಾಟೆ ಮಾಡಿದ್ದರು. ನಂತರ ನೀಲವೇಣಿ ಮತ್ತು ಆನಂದ್​ ಸೇರಿ ಕೃತ್ಯ ಎಸಗಿರುವುದಾಗಿ ತನಿಖೆಯಲ್ಲಿ ಗೊತ್ತಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾನೂನು ಬಾಹಿರ ಚಟುವಟಿಕೆ : ಮಾರ್ಚ್ ತಿಂಗಳಲ್ಲಿ 189 ಪ್ರಕರಣ; 431 ಆರೋಪಿಗಳ ಬಂಧನ

“ಈ ಪ್ರಕರಣದಲ್ಲಿ ನೀಲವೇಣಿ, ಆನಂದ್, ಮೊಹಮ್ಮದ್​ ಗೌಸ್​, ಶಿವಶಂಕರ್​ ಅಲಿಯಾಸ್​ ಚಿರು, ಮೊಹಮ್ಮದ್​ ಶಾಯಿದ್​ ಅಲಿಯಾಸ್​ ಜಂಗ್ಲಿ, ದೂದ್ದ, ಮೊಹಮ್ಮದ್​ ಶರೀಫ್​, ಮೊಹಮ್ಮದ್​ ಆಸೀಫ್​ ಮತ್ತು ಮೊಹಮ್ಮದ್​ ಸೊಹೇಲ್​ ಎಂಬುವರನ್ನು ಬಂಧಿಸಲಾಗಿದ್ದು, ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ ಎರಡು ಬೈಕ್​, ಒಂದು ಸ್ಕೂಟರ್​, ಐದು ಮೊಬೈಲ್​, ಎರಡು ಮಚ್ಚು ಸೇರಿದಂತೆ ಕೃತ್ಯಕ್ಕೆ ಬಳಸಿದ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...