ಬಳ್ಳಾರಿ | ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಒತ್ತಾಯ

Date:

ರಾಜ್ಯದಲ್ಲಿ ಅಂದಿನಿಂದ ಇಂದಿನವರೆಗೆ ಆಳಿ ಹೋದ ಎಲ್ಲಾ ಪಕ್ಷಗಳು ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿವೆ. ವಿದ್ಯೆ, ಉದ್ಯೋಗ, ಅನುದಾನ ಸೇರಿದಂತೆ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸಬೇಕು ಎಂದು ಅಖಿಲ ಭಾರತ ಜನಗಣ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಎನ್ ಗಂಗಿರೆಡ್ಡಿ ಒತ್ತಾಯಿಸಿದರು.

ನಗರದ ಮುಂಡೂರು ರಾಮಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೈದ್ರಾಬಾದ್ ಕರ್ನಾಟಕದ 6 ಜಿಲ್ಲೆಗಳು ಮತ್ತು ಬಾಂಬೇ ಕರ್ನಾಟಕ 7 ಜಿಲ್ಲೆಗಳು ಸೇರಿ ಒಟ್ಟು 13 ಜಿಲ್ಲೆಗಳನ್ನು ಈ ಹಿಂದೆ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಪಕ್ಷಗಳು ನಿರ್ಲಕ್ಷಿಸಿವೆ. ಇದರಿಂದ ಉತ್ತರ ಕರ್ನಾಟಕ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಪಟ್ಟು ಯಾವುದೇ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರಾದೇಶಿಕ ಅಸಮಾತೋಲನ ಮತ್ತು ತಾರಾತಮ್ಯವನ್ನು ಖಂಡಿಸಿ 13 ಜಿಲ್ಲೆಗಳಿಗೆ ಪ್ರತ್ಯೇಕ ರಾಜ್ಯ ಬೇಕೆಂದು” ಆಗ್ರಹಿಸಿದರು.

“ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದಲ್ಲಿ 13 ಜಿಲ್ಲೆಗಳಲ್ಲಿ ವಿದ್ಯೆ ಉದ್ಯೋಗ ಆರ್ಥಿಕ ರಾಜಕೀಯ ಸೇರಿದಂತೆ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನಗಣ ಒಕ್ಕೂಟದಿಂದ 2010ನೇ ಇಸವಿಯಿಂದ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಾ ಬರಲಾಗುತ್ತಿದೆ. 13 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
2010 ರಿಂದ 2024ರ ವರೆಗೆ ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರಗಳನ್ನೂ ಬರೆಯಲಾಗಿದೆ. ಅಲ್ಲದೆ 4 ಜಿಲ್ಲೆಗಳನ್ನು ಒಳಗೊಂಡ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಮೊದಲಿನಿಂದಲೂ ಬಳ್ಳಾರಿಯಲ್ಲಿ ಇದೆ. ಈಗ ಕೆಲವು ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ವಿಜಯನಗರ ಜಿಲ್ಲೆಗೆ ವರ್ಗಾವಣೆ ಮಾಡುವ ಹುನ್ನಾರ ನಡೆಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಳ್ಳಾರಿ | ದಲಿತರಿಗೆ ಸೇರಿದ ಜಾಗ, ಬಾವಿ ಅತಿಕ್ರಮಣ; ತೆರವಿಗೆ ಪಿ ಶೇಖರ್ ಆಗ್ರಹ

“ಈ ಹಿಂದೆ ಬಿ.ನಾಗೇಂದ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕೊಳಗಲ್ಲು ಗ್ರಾಮದ ಹತ್ತಿರ ಮೆಗಾ ಡೈರಿ ಮಾಡಬೇಕೆಂದು ಜಮೀನು ಮಂಜೂರು ಮಾಡಿಸಿದ್ದರು. ಆದರೆ ಇಲ್ಲಿಯವರೆಗೆ ಆ ಜಮೀನಿನಲ್ಲಿ ಮೆಗಾ ಡೈರಿ ವಿಷಯವಾಗಿ ಯಾವುದೇ ಚಟುವಟಿಕೆ ನಡೆದಿಲ್ಲ. ಕೊಳಗಲ್ಲು ಪ್ರದೇಶದಲ್ಲಿ ಗುರುತಿಸಿದ 25 ಎಕರೆ ಜಮೀನಿನಲ್ಲಿ ಕೂಡಲೇ ಮೆಗಾ ಡೈರಿಯನ್ನು ಆರಂಭಿಸಬೇಕು” ಎಮದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...