ಬಳ್ಳಾರಿ | ಗುಗ್ಗರಹಟ್ಟಿ ಹತ್ಯೆ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ: ಎಸ್‌ಪಿ

Date:

ಬಳ್ಳಾರಿ ನಗರದ ಗುಗ್ಗರಹಟ್ಟಿ ಪದೇಶದಲ್ಲಿ ಬುಧವಾರ ರಾತ್ರಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ವಿಚಾರಗಳು ಕಂಡುಬಂದಿಲ್ಲ. ಬದಲಾಗಿ ವೈಯಕ್ತಿಕ ಮನಸ್ತಾಪಗಳಿಂದ ಮೆಹಬೂಬ್ ಬಾಷಾ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಎಸ್‌ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಳ್ಳಾರಿ ನಗರದ ಗುಗ್ಗರಹಟ್ಟಿ ಪದೇಶದಲ್ಲಿ ಜುಲೈ 19ರಂದು ಮನೆಯ ಹತ್ತಿರ ಸುಮಾರು ನೂರು ಮೀಟರ್ ಅಂತರದಲ್ಲಿ ಮೆಹಬೂಬ್ ಬಾಷಾ ಅಲಿಯಾಸ್ ಕಾರ್ಪೆಂಟರ್ ಬಾಷಾ ಎಂಬ ವ್ಯಕ್ತಿಯ ಹತ್ಯೆಯಾಗಿತ್ತು. ಕೋಳಿ ಅನ್ವ‌ರ್‌, ಅಲ್ತಾಫ್ ಮತ್ತು ಸಿರಾಜ್ ಎಂಬ ಮೂವರು ವ್ಯಕ್ತಿಗಳು ಸೇರಿ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದರು” ಎಂದು ತಿಳಿಸಿದರು.

“ಈ ಘಟನೆಯ ಹಿಂದೆ ಯಾವುದೇ ರಾಜಕೀಯದ ದುರುದ್ದೇಶವಿರುವುದು ಕಂಡು ಬಂದಿಲ್ಲ. ಈ ಹಿಂದೆ ನಾಲ್ವರು ಸೇರಿ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದರು. ವೈಯಕ್ತಿಕ ಮನಸ್ತಾಪಗಳಿಂದ ಎಲ್ಲರೂ ಬೇರೆಯಾಗಿ ವ್ಯವಹಾರ ಮಾಡುತ್ತಿದ್ದರು. ಮೆಹಬೂಬ್‌ ಬಾಷಾನ ವ್ಯವಹಾರ ಕ್ಷಿಪ್ರಗತಿಯಲ್ಲಿ ಏರುಮುಖವಾದದ್ದನ್ನು ಸಹಿಸದ ದುಷ್ಕರ್ಮಿಗಳು ದ್ವೇಷದಿಂದ ಹತ್ಯೆ ಮಾಡಿದ್ದಾರೆ. ಇವರ ನಡುವೆ ಯಾವುದೇ ರಾಜಕೀಯ ವಿಚಾರ ಕಂಡುಬಂದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶ್ರೀನಿವಾಸಪುರ l ದಲಿತ ವಿದ್ಯಾರ್ಥಿ ಕೊಲೆ; ಇಬ್ಬರ ಬಂಧನ

“ಮೆಹಬೂಬ್ ಬಾಷಾ ಎಂಬುವವರ ಮಗನ ಹುಟ್ಟುಹಬ್ಬ ಇದ್ದ ಕಾರಣ ಕೇಕ್ ತಂದು ಮನೆಯಲ್ಲಿಟ್ಟು ಹೊರಗಡೆ ಬಂದ ಸಯಮದಲ್ಲಿ ಹೊಂಚಿ ಹಾಕಿ ಕುಳಿತ್ತಿದ್ದ ದುಷ್ಕರ್ಮಿಗಳು ಏಕಾಏಕಿ ಮುಗಿಬಿದ್ದು ಮೊದಲು ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ಮೆಹಬೂಬ್ ಬಾಷಾ ನೆಲಕ್ಕೆ ಬೀಳುತ್ತಲೇ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾರೆ. ಸ್ಥಳೀಯರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಷಾನನ್ನು ಟಾಮಾ ಕೇರ್ ಸೆಂಟರ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೆಹಬೂಬ್ ಬಾಷಾ ಅಂದು ರಾತ್ರಿ 12ಕ್ಕೆ ಮೃತಪಟ್ಟಿದ್ದರು” ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...