ಬಳ್ಳಾರಿ | ದಲಿತರಿಗೆ ಸೇರಿದ ಜಾಗ, ಬಾವಿ ಅತಿಕ್ರಮಣ; ತೆರವಿಗೆ ಪಿ ಶೇಖರ್ ಆಗ್ರಹ

Date:

ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆಯ ವಾರ್ಡ್ ನಂ.32ರ ಬಂಡಿಹಟ್ಟಿಯಲ್ಲಿ ಶತಮಾನದ ದಲಿತರ ಪುರಾತನ ಬಾವಿ ಮತ್ತು ಸುತ್ತಮುತ್ತಲಿನ ಸ್ಥಳವನ್ನು ಭೂಗಳ್ಳರು ಅಕ್ರಮವಾಗಿ ಅಕ್ರಮಿಸಿಕೊಂಡಿರುವುದನ್ನು ತೆರುವುಗೊಳಿಸಬೇಕು ಎಂದು ಒತ್ತಾಯಿಸಿದರು.

ಬಂಡಿಹಟ್ಟಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಪಿ ಶೇಖರ್ ಮುಂದಾಳತ್ವದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆ ನಡೆಸಿದ್ದು, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ವಿಧಾನಸಭಾ ಕ್ಷೇತ್ರ ವಾರ್ಡ್ ನಂ.32, ಬಂಡಿಹಟ್ಟಿಯಲ್ಲಿ ಶತಮಾನದ ಪುರಾತನ ಬಾವಿಯಿದ್ದು, ಈ ಬಾವಿಯ ನೀರನ್ನು ದಲಿತರ ದೇವಸ್ಥಾನಗಳಿಗೆ ಮತ್ತು ದಲಿತರ ಕುಟುಂಬದ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸುತ್ತಿದ್ದರು. ಈ ನಡುವೆ ಬಡಾವಣೆಯಲ್ಲಿ ಕೊಳಾಯಿ ಮತ್ತು ಬೋರ್‌ವೆಲ್‌ ನೀರು ಬಳಸುತ್ತಿದ್ದಾರೆ. ಹಾಗಾಗಿ ಈ ಬಾವಿಯ ನೀರು ಕಲುಷಿತಗೊಂಡು ಸುತ್ತಮುತ್ತಲೂ ಗಿಡಗಂಟಿಗಳು ಬೆಳೆದಿದ್ದು, ಬಾವಿಯ ನೀರು ಬಳಕೆಗೆ ಯೋಗ್ಯವಿಲ್ಲದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಗಳ್ಳರು ಬಾವಿ ಹಾಗೂ ಅದರ ಸುತ್ತಮುತ್ತಲಿನ ಸ್ಥಳವನ್ನು ಅಕ್ರಮವಾಗಿ ಕಬಳಿಸಿದ್ದು, ನಕಲಿ ದಾಖಲು ಪತ್ರಗಳನ್ನು ಸೃಷ್ಟಿಸಿದ್ದಾರೆ. ಬಳಿಕ ಬಾವಿಯನ್ನು ಮುಚ್ಚಿ ಸುತ್ತಲಿರುವ ಜಾಗವನ್ನು ಅಕ್ರಮಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಆರೋಪಿಸಿದರು.

“ಬಂಡಿಹಟ್ಟಿ ದಲಿತರು ಭೂ ಆಕ್ರಮಣಾಕಾರಿಗಳನ್ನು ವಿಚಾರಿಸಿದಾಗ ಸುಳ್ಳು ದಾಖಲೆಗಳನ್ನು ತೋರಿಸಿದ್ದಾರೆ. ಬಾವಿ ಹಾಗೂ ಜಾಗದ ನಕಲಿ ದಾಖಲೆಗಳನ್ನು ಇಲಾಖೆಯ ಅಧಿಕಾರಿಗಳು ಸೃಷ್ಟಿಸಿರುವ ಅನುಮಾನಗಳು ದಟ್ಟವಾಗಿವೆ” ಎಂದು ಅನುಮಾನ ವ್ಯಕ್ತಪಡಿಸಿದರು.

“ಸ್ವಾತಂತ್ರ್ಯ ಬಂದು 10 ದಶಕಗಳು ಕಂಡಿದ್ದರೂ ಇಲ್ಲಿನ ನೂರಾರು ದಲಿತ ಕುಟುಂಬಗಳಿಗೆ ನಿವೇಶನ ಹಾಗೂ ಹಕ್ಕುಪತ್ರಗಳನ್ನು ನೀಡದೆ ದಲಿತ ಕುಟುಂಬಗಳ ಹಕ್ಕುಗಳನ್ನು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡದೆ, ಭೂಗಳ್ಳರು ಉದ್ಯಾನವನ, ದಲಿತರ ಸ್ಮಶಾನ ಮತ್ತು ಶಾಲೆಯ ಆವರಣಗಳು, ಗುಡಿ ಜಾಗಗಳು ಹಾಗೂ ದಲಿತರಿಗೆ ಮೀಸಲಿದ್ದ ಬಾವಿಯನ್ನು ಕಾನೂನು ಬಾಹಿರವಾಗಿ ಅತಿಕ್ರಮಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? 25 ಸಾವಿರ ಶಿಕ್ಷಕರ ವಜಾಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ, ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆಘಾತ

‘ಶೋಷಿತರಿಗೆ ಮೀಸಲಿದ್ದ ಬಾವಿ ಹಾಗೂ ಜಾಗವನ್ನು ಅತಿಕ್ರಮಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮೀತಿ ಹಾಗೂ ವಿವಿಧ ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿಯ ಪದಾಧಿಕಾರಿ ಜಿಲ್ಲಾ ಉಪಾಧ್ಯಕ್ಷೆ ರೋಹಿಣಿ, ಈರಮ್ಮ, 32ನೇವಾರ್ಡ್ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ, ಉಪಾಧ್ಯಕ್ಷ ರಮೇಶ್, ಕೃಷ್ಣ ವಾಲ್ಮೀಕಿ, ಲಕ್ಷ್ಮೀದೇವಿ, ರೈತ ಘಟಕ ಅಧ್ಯಕ್ಷ ಬಸವರಾಜ್, ಹೆಚ್. ನೀಲಪ್ಪ, ಗಂಗಾಧರ, ತಿಮ್ಮಣ್ಣ, ರುದ್ರಪ್ಪ, ಗಿಡ್ಡ ನಾಗರಾಜ್, ವಿರುಪಾಕ್ಷಿ, ರೆಡ್ಡಿ, ಗೋವಿಂದ ಹಾಗೂ ಇತರರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...