ಬಳ್ಳಾರಿ | ಸುಳ್ಳು ಹೆಸರಿನಲ್ಲಿ ತಲೆಮರೆಸಿಕೊಂಡಿದ್ದ ಪಿಎಫ್‌ಐ ಮುಖಂಡ ಬಂಧನ

Date:

ಪಿಎಫ್‌ಐ ಕಾರ್ಯಕರ್ತರಿಗೆ ಸಶಸ್ತ್ರ ತರಬೇತಿ ನೀಡುತ್ತಿದ್ದ ಆರೋಪದ ಮೇಲೆ ಪಿಎಫ್‌ಐ ಮುಖಂಡ ನೊಸಂ ಮಹಮದ್ ಯೂನುಸ್ (33)ನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬಳ್ಳಾರಿಯ ಕೌಲ್‌ಬಜಾರ್‌ ಪ್ರದೇಶದಲ್ಲಿ ಸುಳ್ಳು ಹೆಸರಿನಲ್ಲಿ ಹಲವು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಆಂಧ್ರಪ್ರದೇಶದ ನಂದ್ಯಾಲದವರಾದ ನೊಸಂ ಮಹಮದ್ ಯೂನುಸ್ ನಿಜಾಮಾಬಾದ್ ಭಯೋತ್ಪಾದನೆ ಪಿತೂರಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನೂ ಎದುರಿಸುತ್ತಿದ್ದಾರೆ. ಆ ಪ್ರಕರಣ ಸಂಬಂಧ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆತನ ನಿವಾಸದ ಮೇಲೆ ಎನ್ಐಎ ದಾಳಿ ನಡೆಸಿತ್ತು. ಆಗ, ಆತ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದರು.

ಬಳಿಕ ತನ್ನ ಕುಟುಂಬದೊಂದಿಗೆ ಬಳ್ಳಾರಿಗೆ ಬಂದು ಕೌಲ್‌ಬಜಾರ್ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದರು. ತನ್ನ ಹೆಸರನ್ನು ಬಷೀರ್‌ ಎಂದು ಬದಲಿಸಿಕೊಂಡು ಪ್ಲಂಬರ್ ಕೆಲಸ ಮಾಡುತ್ತಿದ್ದರು. ಪಿಎಫ್‌ಐ ಸಂಘಟನೆಗೆ ಸೇರಿಕೊಂಡಿರುವ ಅಮಾಯಕ ಯುವಕರಿಗೆ ಸಶಸ್ತ್ರ ತರಬೇತಿ ನೀಡುತ್ತಿದ್ದರೆಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ಸಮಯದಲ್ಲಿ ಬಂಧಿತ ಯೂನುಸ್‌, ಇದೇ ಪ್ರಕರಣದ ಮತ್ತೊಬ್ಬ ಆರೋಪಿ ಇಲಿಯಾಸ್ ಎಂಬಾತನ ಬಗ್ಗೆ ಸುಳಿವು ನೀಡಿದ್ದಾರೆ. ಇಲಿಯಾಸ್‌ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಪ್ರಕರಣದ ಸಂಬಂಧ ತೆಲಂಗಾಣ ಪೊಲೀಸರು 2022ರ ಜುಲೈ 4ರಂದು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿತ್ತು. ಎನ್ಐಎ ಮರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈವರಗೆ 16 ಆರೋಪಿಗಳ ವಿರುದ್ಧ 2 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಂಡತಿಯನ್ನು ಮನೆಗೆ ಕಳುಹಿಸದಿದ್ದಕ್ಕೆ ಅತ್ತೆಗೆ ಚೂರಿ ಇರಿದ ಅಳಿಯ

ನಿಜಾಮಾಬಾದ್‌ ಪ್ರಕರಣದಕ್ಕೆ ಸಂಬಂಧಿಸಿ ಈಗಾಗಲೇ ಶೇಕ್ ಶಾದುಲ್ಲಾ (40), ಮೊಹಮ್ಮದ್ ಇಮ್ರಾನ್ (22) ಮತ್ತು ಮೊಹಮ್ಮದ್ ಅಬ್ದುಲ್ ಮೊಬಿನ್ (27) ಎಂಬ ಮೂವರನ್ನು ಬಂಧಿಸಲಾಗಿದೆ. ಇವರು ಸ್ಥಳೀಯ ಮುಸ್ಲಿಂ ಯುವಕರನ್ನು ಗುರುತಿಸಿ, ಅವರನ್ನು ದುರ್ಬೋಧನೆಯ ಮೂಲಕ ಪ್ರೇರೇಪಿಸಿ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದ್ದುದು ಗೊತ್ತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...