ಬಳ್ಳಾರಿ | ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಿ; ಸೋಮಶೇಖರ್ ಆಗ್ರಹ

Date:

ಬಳ್ಳಾರಿ ನಗರವು ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳಿಂದ‌ ವಂಚಿತವಾಗಿದೆ. ಆದ್ದರಿಂದ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸಿಪಿಐಎಂನ ಸೋಮಶೇಖರ ಒತ್ತಾಯಿಸಿದರು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿ ವತಿಯಿಂದ ನಗರದ ಮರ್ಚೆಟ್ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಕಳೆದ ಎರಡೂವರೆ ದಶಕಗಳಲ್ಲಿ ಬಳ್ಳಾರಿ ನಗರವು ನಾಲ್ಕು ದಿಕ್ಕುಗಳಲ್ಲಿ ಅತ್ಯಧಿಕವಾಗಿ ವಿಸ್ತರಿಸಿದೆ. ಜನಸಂಖ್ಯೆ ಹೆಚ್ಚಿ ವಾಹನಗಳ ಸಂಖ್ಯೆ ಅನೇಕ ಪಟ್ಟು ಹೆಚ್ಚಿದೆ. ನಗರದ ಸುತ್ತಲೂ ಅನೇಕ ಸಣ್ಣ ಕೈಗಾರಿಕಾ ಘಟಕಗಳು ಹಾಗೂ ಹತ್ತಿರದ ತೋರಣಗಲ್ಲು ಗ್ರಾಮದಲ್ಲಿ ಬೃಹತ್ ಜಿಂದಾಲ್ ಉಕ್ಕಿನ ಕಾರ್ಖಾನೆ, ಹಾಗೂ ಕುಡತಿನಿ ಹತ್ತಿರ ಬೃಹತ್ ಕೆಪಿಟಿಸಿಎಲ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಗೊಂಡಿದೆ. ಬಳ್ಳಾರಿ ಮತ್ತು ಸಂಡೂರು ತಾಲೂಕುಗಳಲ್ಲಿ ಗಣಿಗಾರಿಕೆ ಚಟುವಟಿಕೆ ಮೊದಲಿಗಿಂತ ಹೆಚ್ಚಾಗಿದೆ” ಎಂದು ತಿಳಿಸಿದರು.

ಇವುಗಳ ಪರಿಣಾಮವಾಗಿ ಸರ್ಕಾರದ ಹಾಗೂ ಮಹಾನಗರ ಪಾಲಿಕೆಯ ಆದಾಯವು ಗಣನೀಯವಾಗಿ ಹೆಚ್ಚಿದೆ. ಆದರೆ ಈಗಾಗಲೇ ಆಗಬೇಕಾಗಿದ್ದ ವರ್ತುಲ ರಸ್ತೆ ಇಲ್ಲಿಯವರೆಗೂ ಆಗಿಲ್ಲ. ನಗರದಲ್ಲಿ ಕಾರುಗಳ ಹಾಗೂ ದ್ವಿಚಕ್ರ ವಾಹನಗಳ ಮತ್ತು ಇತರೇ ವಾಹನಗಳ ಸಂಖ್ಯೆ ಅನೇಕ ಪಟ್ಟು ಹೆಚ್ಚಿದ್ದು, ದಿನಂಪ್ರತಿ ಸಾವಿರಾರು ಭಾರಿ ವಾಹನಗಳು ನಗರದ ಮುಖಾಂತರ ಚಲಿಸುವುದರಿಂದ ಸಾರ್ವಜನಿಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಜಿಲ್ಲಾಡಳಿತ ಕೂಡಲೇ ಹೊರ ವರ್ತುಲ ರಸ್ತೆಯನ್ನು ನಿರ್ಮಿಸಿ ಬಳ್ಳಾರಿ ನಗರದ ಸಾರ್ವಜನಿಕರಿಗೆ ಟ್ರಾಫಿಕ್ ತೊಂದರೆಯಿಂದ ಮುಕ್ತಗೊಳಿಸಬೇಕು” ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಮುಖ್ಯ ಹಾಗೂ ಅಡ್ಡ ರಸ್ತೆಗಳು ಕಳಪೆ ಮಟ್ಟದ ಕಾಮಗಾರಿಯಿಂದ ಹಾಳಾಗಿವೆ. ಅನೇಕ ರಸ್ತೆಗಳ ತುಂಬಾ ಕುಣಿಗಳು ಅವೈಜ್ಞಾನಿಕ ವೇಗ ತಡೆಗಳ ಪರಿಣಾಮವಾಗಿ, ವಾಹನ ಚಾಲಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ಅನೇಕ ಸ್ಥಳಗಳಲ್ಲಿ ಆಗಾಗ್ಗೆ ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಿತವಾಗಿ ಬರುತ್ತದೆ. ಸಂಪುಗಳಲ್ಲಿ ಚರಂಡಿ ನೀರು ತುಂಬಿಕೊಂಡು ಸಾರ್ವಜನಿಕರು ಕಳವಳಪಡುವಂತಾಗಿದೆ. ನಗರದಲ್ಲಿ ಅನವಶ್ಯಕವಾಗಿ ರಾಯಲ್ ಸರ್ಕಲ್ ಹೊಡೆದು ಹಾಕಿ ಅವೈಜ್ಞಾನಿಕವಾಗಿ 7 ಕೋಟಿ ರೂಪಾಯಿ ಖರ್ಚು ಮಾಡಿ ಟ್ರಾಫಿಕ್ ಸುಗಮ ಸಂಚಾರಕ್ಕೆ ಬದಲಾಗಿ ಸಮಸ್ಯೆ ಉಂಟು ಮಾಡಲಾಗಿದೆ ಎಂದು ದೂರಿದರು.

WhatsApp Image 2025 05 24 at 6.40.05 PM 1

ಎಸ್.ಪಿ ಸರ್ಕಲ್‌ನಲ್ಲಿಯೂ ಇದೇ ರೀತಿಯಾಗಿ ಮೊದಲಿದ್ದ ಸರ್ಕಲ್‌ಗಳನ್ನು ಹೊಡೆದುಹಾಕಿ ಅನವಶ್ಯಕವಾಗಿ ದುಂದುವೆಚ್ಚ ಮಾಡಿ ಸರ್ಕಲ್ ಮಾಡಲಾಗುತ್ತಿದೆ. ಈ ಎರಡೂ ಸರ್ಕಲ್‌ಗಳ ಅವಶ್ಯಕತೆ ಇತ್ತೇ? ಇಂತಹ ಅವೈಜ್ಞಾನಿಕ ಸರ್ಕಲ್‌ಗಳು ಯಾಕೆ? ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆಗೆ 160 ಕೋಟಿಗಿಂತಲೂ ಅಧಿಕ ಹಣ ವೆಚ್ಚ ಮಾಡಲಾಗಿದೆ. ಈ ಯೋಜನೆ ಕೈಗೊಂಡು ದಶಕ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಈ ಯೋಜನೆ ಸಂಪೂರ್ಣ ವಿಫಲವೆನ್ನುವುದೇ ನಗರದ ಸಾರ್ವಜನಿಕರು ಇದರಿಂದ ತುಂಬಾ ತೊಂದರೆಗೆ ಒಳಗಾಗಿದ್ದಾರೆ ಆದಷ್ಟು ಶೀಘ್ರದಲ್ಲಿ ಸ್ಥಳೀಯ ಮತ್ತು ಜಿಲ್ಲಾಡಳಿತ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ; ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಸಂಚಾಲಕರಾದ ಆರ್.ಸೋಮಶೇಖರ್ ಗೌಡ, ನಿವೃತ್ತ ಉಪನ್ಯಾಸಕರು ನರಸಣ್ಣ, ನಿವೃತ್ತ ಪಿಡಬ್ಲ್ಯೂಡಿ ಇಂಜಿನೀಯರ್ ಮುರ್ತುಜಾಸಾಬ್, ನಿವೃತ್ತ ಶಿಕ್ಷಕರು ನಾಗರತ್ನಾ, ಶಾಂತ, ಅಂತೋಣಿ, ಸುರೇಶ್, ಶಾಂತಿ ಹಾಗೂ ಇತರರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...