ಬಳ್ಳಾರಿ | ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು

Date:

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 4550.74 ಕ್ವಿಂಟಾಲ್ ಅಕ್ಕಿ ಮತ್ತು 63.20 ಕ್ವಿಂಟಾಲ್ ಗೋಧಿಯನ್ನು ಜೂ.16 ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಸಗಟು ಗೋದಾಮುನಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಆಸಕ್ತಿಯುಳ್ಳ ಬಿಡ್ಡುದಾರರು ಷರತ್ತುಗಳೊಂದಿಗೆ ಪಾಲ್ಗೊಳ್ಳಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಷರತ್ತುಗಳು:

1.ಪ್ರತಿಯೊಬ್ಬ ಬಿಡ್ಡುದಾರರು ರೂ.15,00,000/- ಮುಂಗಡ ಭದ್ರತಾ ಠೇವಣಿ ಮೊತ್ತವನ್ನು ಸಹಾಯಕ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶ, ಬಳ್ಳಾರಿ ಇವರ ಹೆಸರಲ್ಲಿ ಡಿಡಿಯನ್ನು ಜೂ.13 ರಂದು ಸಂಜೆ 05.30 ರೊಳಗೆ ಪಾವತಿಸಿ, ಹರಾಜಿನಲ್ಲಿ ಭಾಗವಹಿಸಬೇಕು. ನಂತರ ಬಂದ ಡಿಡಿ ಗಳನ್ನು ಸ್ವೀಕರಿಸುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

      2.ಈ ಹರಾಜಿನಲ್ಲಿ ಸರ್ಕಾರ ಖರೀದಿ ಮಾಡುವ ಓ.ಎಂ.ಎಸ್(ಡಿ) ದರ ನಿಗಧಿಪಡಿಸಲಾಗಿದೆ. ಈ ಮೊತ್ತಕ್ಕಿಂತ ಕಡಿಮೆ ಮೊತ್ತ ಕೂಗಿದಲ್ಲಿ ಹಾಗೂ ಹರಾಜು ಸಮಯದಲ್ಲಿ ಬಿಡ್ಡುದಾರರ ಸಂಖ್ಯೆ ಕಡಿಮೆ ಇದ್ದಲ್ಲಿ ಹರಾಜು ಮಾಡುವ ಅಥವಾ ಹರಾಜು ಮಾಡುವ ಪ್ರಕ್ರಿಯೆಯನ್ನು ಮುಂದೂಡುವ ಅಧಿಕಾರ ಹೊಂದಿರುತ್ತದೆ. ಎಂದು ತಿಳಿಸಲಾಗಿದೆ.

      3.ಸವಾಲುದಾರರು ಹರಾಜಿನಲ್ಲಿ ಗೊತ್ತುಪಡಿಸಿದ ಸಮಯಕ್ಕಿಂತ ಅರ್ಧಗಂಟೆ ಮುಂಚಿತವಾಗಿ ಭಾಗವಹಿಸಬೇಕು. ಅಗತ್ಯ ವಸ್ತುಗಳು ಸಗಟು, ಚಿಲ್ಲರೆ ವ್ಯಾಪಾರಸ್ಥರು, ಕಮಿಷನ್ ಏಜೆಂಟರು, ಅಕ್ಕಿ ಗಿರಣಿ ಮಾಲಿಕರು ಹಾಗೂ ದೊಡ್ಡ ಪ್ರಮಾಣದ ಬಳಿಕೆದಾರರ ಸಂಸ್ಥೆಗಳು ಹರಾಜಿನಲ್ಲಿ ಭಾಗವಹಿಸಬಹುದು.

      4.ಪಧಾರ್ಥಗಳನ್ನು ಎಲ್ಲಿದಿಯೋ ಅಲ್ಲೆ ಹಾಗೂ ಹೇಗಿವೆಯೋ ಹಾಗೇ ಷರತ್ತಿನಡಿ ಹರಾಜು ಮಾಡಲಾಗುತ್ತಿರುವುದರಿಂದ ಹರಾಜಿನಲ್ಲಿ ಭಾಗವಹಿಸುವವರು ಅದಕ್ಕೂ ಮುನ್ನ ಜೂ.16ರಂದು 10 ಗಂಟೆಗೆ ಕೆಎಫ್‌ಸಿಎಸ್‌ಸಿ ಸಗಟು ಕೇಂದ್ರ, ಬಳ್ಳಾರಿಗೆ ಭೇಟಿ ನೀಡಿ ಅಕ್ಕಿಯ ಪರಿಶೀಲನೆ ಮಾಡಿಕೊಳ್ಳಬಹುದು. ಹರಾಜಿನಲ್ಲಿ ಭಾಗವಹಿಸುವವರು ತಮ್ಮ ವ್ಯಾಪಾರ ನೋಂದಣಿ ಪತ್ರ,‌ ಸಂಸ್ಥೆಯ ನೋಂದಣಿ ಪತ್ರ, ಆಧಾರ್ ಹಾಗೂ ಜಿಎಸ್‌ಟಿ ದಾಖಲೆಗಳನ್ನು ನೋಂದಣಿ ಸಮಯದಲ್ಲಿ ಹಾಜರುಪಡಿಸತಕ್ಕದ್ದು ಹಾಗೂ ಇಲಾಖೆಯ ಕಾನೂನಿಗೆ ಒಳಪಟ್ಟಿರಬೇಕು.

      5.ಹರಾಜಿನಲ್ಲಿ ಹೆಚ್ಚಿನ ದರದಲ್ಲಿ ಕೂಗಿದ ಬಿಡ್ಡುದಾರರ ದರಗಳನ್ನು ಜಿಲ್ಲಾಧಿಕಾರಿಯವರು ಅನುಮೋದಿಸಿದ ನಂತರ ಬಿಡ್ ಒಟ್ಟು ಮೌಲ್ಯವನ್ನು ಸರ್ಕಾರದ ಲೆಕ್ಕ ಶಿರ್ಷಿಕೆಗೆ ನಿಗಧಿತ ಅವಧಿ ಒಳಗಾಗಿ ಜಮಾ ಮಾಡಿ ಚಲನ್ ನ್ನು ಹಾಜರು ಪಡಿಸಿದ ನಂತರ ಹರಾಜಾದ ಅಕ್ಕಿಯನ್ನು ಎತ್ತುವಳಿಗೆ ಅವಕಾಶ ನೀಡಲಾಗುವುದು.

      6.ಅಂತಿಮ ಹರಾಜನ್ನು ಒಪ್ಪಿಕೊಳ್ಳುವುದು ಅಥವಾ ತಿರಸ್ಕರಿಸುವ ಹಕ್ಕನ್ನು ಅಧಿಕಾರಿಗಳು ಹೊಂದಿರುತ್ತಾರೆ. ಬಹಿರಂಗ ಹರಾಜು ಆದ ಅಕ್ಕಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಆದೇಶ ನೀಡಿದ ಮೂರು ದಿನಗಳಲ್ಲಿ ಕೆಎಫ್‌ಸಿಎಸ್‌ಸಿ, ಬಳ್ಳಾರಿ ಇವರರಿಂದ ಎತ್ತುವಳಿ ಮಾಡಬೇಕು. ಎತ್ತುವಳಿ ಮಾಡಲು ವಿಳಂಬವಾದಲ್ಲಿ ತಮ್ಮ ಇಎಂಡಿ ಮೊತ್ತವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಲಾಗುವುದು ಎಂದು ತಿಳಿಸಲಾಗಿದೆ.

      ಇದನ್ನೂ ಓದಿ: ಬಳ್ಳಾರಿ | ಪಾಲಿಕೆ ಅವ್ಯವಸ್ಥೆ ವಿರುದ್ಧ ನಾಗರಿಕ ಸಮಿತಿ ಪ್ರತಿಭಟನೆ

      ವಿಶೇಷ ಸೂಚನೆ:

      ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3, 6(ಎ) ಮತ್ತು 7 ರಡಿ ಯಾವುದೇ ಬಿಡ್ಡುದಾರರ ಹೆಸರಿನಲ್ಲಿ ಪೊಲೀಸ್ ಪ್ರಕರಣ ದಾಖಲಾಗಿರಬಾರದು. ಒಂದು ವೇಳೆ ಪೊಲೀಸ್ ಪ್ರಕರಣ ದಾಖಲಾಗಿದ್ದಲ್ಲಿ ಅಂತಹ ಬಿಡ್ಡುದಾರರು (ವ್ಯಕ್ತಿ)/ಸಂಸ್ಥೆ ಹಾಗೂ ಸಾರ್ವಜನಿಕ ವಿತರಣ ವ್ಯವಸ್ಥೆಯಡಿ ಕೆಲಸ ನಿರ್ವಹಿಸುತ್ತಿರುವವರು ಹರಾಜಿನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಒಂದು ವೇಳೆ ಅಂತಹ ವ್ಯಕ್ತಿಗಳು/ಟ್ರೇಡ್‌ಗಳ ಭಾಗವಹಿಸಿದ್ದು ಕಂಡು ಬಂದಲ್ಲಿ ಅಂತವರ ಇಎಂಡಿ ಮೊತ್ತವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

      ಹೆಚ್ಚಿನ ಮಾಹಿತಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂರ್ಪಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

      eedina
      ಈ ದಿನ ಡೆಸ್ಕ್‌
      Website |  + posts

      ಪೋಸ್ಟ್ ಹಂಚಿಕೊಳ್ಳಿ:

      ಪೋಸ್ಟ್ ಹಂಚಿಕೊಳ್ಳಿ:

      ಈ ಹೊತ್ತಿನ ಪ್ರಮುಖ ಸುದ್ದಿ

      ವಿಡಿಯೋ

      ಇದೇ ರೀತಿಯ ಇನ್ನಷ್ಟು ಲೇಖನಗಳು
      Related

      ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

      ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

      ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

      "ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

      ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

      ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

      ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

      ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...