ಬಳ್ಳಾರಿ | 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

Date:

  • ಬಳ್ಳಾರಿಯ 4ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ
  • ರಾಜ್ಯದಲ್ಲಿಯೇ ಅತೀ ಕಡಿಮೆ ವಯಸ್ಸಿನ ಮೇಯರ್

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದ ಹೊತ್ತಲ್ಲಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯೂ ಮತ್ತಷ್ಟು ಕಾವು ಹೆಚ್ಚಿಸಿತ್ತು. ಇದೀಗ ರಾಜ್ಯದಲ್ಲಿಯೇ ಅತೀ ಕಿರಿಯ ವಯಸ್ಸಿನ ಮೇಯರ್‌ ಆಯ್ಕೆಯಾಗುವುದರ ಮೂಲಕ ಕೂತೂಹಲಕ್ಕೆ ತೆರೆ ಬಿದ್ದಿದೆ.

ತಮ್ಮ ತಂದೆ ಹಾಗೂ ತಾಯಿಯ ಪ್ರಭಾವದಿಂದ 21ನೇ ವಯಸ್ಸಿಗೆ 4ನೇ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೆಲ್ತ್ ಇನ್ಸ್ಪೆಕ್ಟರ್ ಕೋರ್ಸ್ ಪೂರೈಸಿದ್ದ ಇವರು ಕೇವಲ 23 ವರ್ಷಕ್ಕೆ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ ಸೂರಿ ಎಂಬುವವರು ಪುತ್ರಿಯಾಗಿರುವ ಕು. ತ್ರಿವೇಣಿ ಅವರ ಮೇಯರ್‌ ಆಗಿ ಆಯ್ಕೆ ಆಗುವುದರೊಂದಿಗೆ ಇಬ್ಬರು ಮೇಯರ್ ಗಳನ್ನು ಬಳ್ಳಾರಿ ನಗರಕ್ಕೆ ನೀಡಿದ ಕುಟುಂಬ ಎಂಬ ಹೆಸರಿಗೆ ಖ್ಯಾತಿ ಪಡೆದಿದೆ. ತ್ರಿವೇಣಿ ಅವರ ತಾಯಿ 2019ರಲ್ಲಿ ಮೇಯರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

ಕಾಂಗ್ರೆಸ್‌ನಿಂದ ಉಮಾದೇವಿ, ಕುಬೇರ ಮತ್ತು ತ್ರಿವೇಣಿ ನಾಮಪತ್ರ ಸಲ್ಲಿಸಿದ್ದರು. ರಾಜ್ಯಸಭೆ‌ ಕಾಂಗ್ರೆಸ್‌ ಸದಸ್ಯ ಸಯ್ಯದ್ ನಾಸಿರ್‌ ಹುಸೇನ್ ಉಮಾದೇವಿ ಹಾಗೂ ಕುಬೇರ ಅವರಿಗೆ ನಾಮಪತ್ರ ಹಿಂಪಡೆಯಲು ಸೂಚಿಸಿದ್ದರು. ಇವರಿಬ್ಬರು ನಾಮ ಪತ್ರ ಪಡೆದಿದ್ದರಿಂದ ಡಿ. ತ್ರಿವೇಣಿ ಮತ್ತು ನಾಗರತ್ನ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.

ಚುನಾವಣೆಯಲ್ಲಿ ಸದಸ್ಯರು, ಸಂಸದರು, ಶಾಸಕರು ಸೇರಿದಂತೆ ಒಟ್ಟು 44 ಜನ ಪಾಲ್ಗೊಂಡರು. ಇದರಲ್ಲಿ ಕಾಂಗ್ರೆಸ್ನ ತ್ರಿವೇಣಿಗೆ 28 ಮತ ಬಂದರೆ, ನಾಗರತ್ನ ಅವರಿಗೆ 16 ಮತಗಳಷ್ಟೇ ಬಂದವು. 33ನೇ ವಾರ್ಡ್ ನ ಜಾನಕಮ್ಮ ಉಪಮೇಯರ್‌ ಆಗಿ ಆಯ್ಕೆಯಾದರು.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...