ಬಳ್ಳಾರಿ | ಹೆಚ್‌ಐವಿ ಪೀಡಿತ ಕುಟುಂಬಗಳ ಆರ್ಥಿಕ ನೆರವಿಗೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಆಗ್ರಹ

Date:

ಕರ್ನಾಟಕದಲ್ಲಿರುವ ಲಕ್ಷಾಂತರ ಕುಟುಂಬಗಳು ಮಾರಕವಾದ ಹೆಚ್‌ಐವಿ ಕಾಯಿಲೆಯಿಂದ ನರಳುತ್ತಿದ್ದಾರೆ. ಅವರು ಮಾನಸಿಕವಾಗಿ ಕುಗ್ಗಿದ್ದಲ್ಲದೇ ಸಮಾಜಿಕ ಭಹಿಷ್ಕಾರಕ್ಕೆ ಒಳಗಾಗಿರುತ್ತಾರೆ. ಅಂತ ಕುಟುಂಬಗಳನ್ನು ಗುರುತುಸಿ ಸರಕಾರ ಆರ್ಥಿಕ ಸಹಾಯ ಧನ ಹಾಗೂ ಮಾಸಿಕ ವೇತನ ನಿಡಬೇಕು ಎಂದು ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕ ಆಗ್ರಹಿಸಿತು.

ಜಿಲ್ಲೆಯ ಕಂಪ್ಲಿಯಲ್ಲಿ ಹೆಚ್‌ಐವಿ ಪೀಡಿತ ಕುಟುಂಬಗಳಿಗೆ ಅರ್ಥಿಕ ಧನ ಸಹಾಯ ಹಾಗೂ ಮಾಸಿಕ ಪಿಂಚಣಿ ನೀಡಲು ಒತ್ತಾಯಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

“ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹಾಗೂ ಬೇರೆಬೇರೆ ಕಾರಣಗಳಿಂದ ಹೆಚ್‌ಐವಿ ಎಂಬ ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ಕುಟುಂಬ ಹಾಗೂ ರೋಗಿಗಳನ್ನು ಗುರುತಿಸಿ ಸರಕಾರ ಆರ್ಥಿಕವಾಗಿ ಅವರ ಧನ ಸಹಾಯ ಮಾಡಬೇಕು. ಈಗಾಗಲೇ ಗೌಪ್ಯವಾಗಿ ಸರಕಾರ ಅಂತವರಿಗೆ ಔಷಧೋಪಚಾರ ಮಾಡುತ್ತಿದ್ದು, ಸರಕಾರಕ್ಕೆ ನಮ್ಮ ಸಂಘಟನೆಯಿಂದ ಅಭಿನಂದನೆಗಳು. ವಿಶೇಷ ಚೇತನರಿಗೆ, ವೃದ್ಯಾಪ್ಯರಿಗೆ, ವಿಧವೆಯರಿಗೆ ಮಾಸಿಕ ವೇತನ ನೀಡುವಂತೆ ಈ ಕಟುಂಬಗಳಿಗೂ ಮಾಸಿಕ ವೇತನ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಚ್ಐವಿ ಪೀಡಿತ ಸಂತ್ರಸ್ತರು ಸಮಾಜದಲ್ಲಿ ತಮ್ಮ ನೋವನ್ನು ಹೇಳಿಕೊಳ್ಳದೇ ಇದ್ದರೂ ಯಾವುದೋ ಕಾರಣದ ಮೂಲಕ ಸಮಾಜಕ್ಕೆ ಗೊತ್ತಾಗಿ ಉದ್ಯೋಗ, ಕೂಲಿ ಸಿಗುವುದಿಲ್ಲ. ಭಿಕ್ಷೆ ಬೇಡುವುದಕ್ಕೂ ಸ್ವಾಭಿಮಾನ ಅಡ್ಡಿ ಬರುತ್ತದೆ. ಇಂತವರ ಜೀವನ ಬಿಸಿ ತುಪ್ಪದಂತಾಗಿರುತ್ತದೆ. ಇಂತಹ ಕುಟುಂಬಗಳಿಗೆ ಮಾಸಾಶನ ಹಾಗೂ ಮಕ್ಕಳಿಗೆ ಉಚಿತ ಶಿಕ್ಷಣ, ಬಸ್ಸು-ರೈಲ್ವೆಗಳಲ್ಲಿ ಉಚಿತ ಪ್ರಯಾಣಕ್ಕೆ ಪಾಸ್, ರೂ 10 ಲಕ್ಷಗಳು ಸೋಂಕಿತ‌ ಮಕ್ಕಳಿಗೂ ತಲುಪುವಂತೆ ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಳ್ಳಾರಿ | ಫೋನ್ ಬದಲಿಗೆ ಚೆಸ್‌ನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ತಿರುಮಲ‌ ಶಾಲೆ ಅಧ್ಯಕ್ಷ ಯಲ್ಲಪ್ಪ

ಈ ವೇಳೆ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ರಾಜಕುಮಾರ್, ಮರಿಗೌಡ ಸಣಾಪುರ, ಎಸ್ ಬಸವರಾಜ್, ಎ.ಎಸ್.ಯಲ್ಲಪ್ಪ, ಧನಕಾಯಿ ಬಸವರಾಜ್, ಇ.ಧನಂಜಯ್, ಲಕ್ಷ್ಮಣ, ಮಂಜು, ರವಿ ಮಣ್ಣೂರ, ರಾಮಾಂಜನಯ್ಯ, ವಸಂತ ಕಹಾಳೆ, ಎಚ್.ಬಸಪ್ಪ, ಶಾಮತಪ್ಪ, ಮಂಜು, ಗೋಪಾಲ್, ಹುಸೇನಪ್ಪ, ಪ್ರವೀಣ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...