ಬಳ್ಳಾರಿ | ಅ.26ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶ

Date:

ವಿದ್ಯುತ್ ಖಾಸಗೀಕರಣ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಗೆ ವಿರುದ್ಧವಾಗಿ ಅಖಿಲ್ ಭಾರತ ವಿದ್ಯುತ್ ಬಳಕೆದಾರರ ಸಂಘದ ವತಿಯಿಂದ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶವನ್ನು ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ‌ ಆಯೋಜಿಸಲಾಗಿದೆ ಎಂದು ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘದ ರಾಜ್ಯ ಕಾರ್ಯದರ್ಶಿ ಜ್ಞಾನಮೂರ್ತಿ.ವಿ ತಿಳಿಸಿದರು.

ಬಳ್ಳಾರಿ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಸಮಾವೇಶದಲ್ಲಿ ಆಂಧ್ರಪ್ರದೇಶ, ಕೇರಳ, ಕರ್ನಾಟಕ, ಪುದುಚೆರಿ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಗ್ರಾಹಕರ ಸಂಘಟನೆಗಳ ಪ್ರತಿನಿಧಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳ ಹೋರಾಟಗಾರರು ಭಾಗವಹಿಸಲಿದ್ದಾರೆ. ಸಮಾವೇಶವನ್ನು ಆಲ್ ಇಂಡಿಯಾ ಎಲೆಕ್ಟ್ರಿಸಿಟಿ ಕಂಜೂಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಸ್ವಪನ್ ಘೋಷ್ ಅವರು ಉದ್ಘಾಟಿಸಲಿದ್ದಾರೆ. ಪ್ರಮುಖ ಅತಿಥಿಗಳಾಗಿ ಮಾಜಿ ಐಎಎಸ್ ಅಧಿಕಾರಿ ಹಾಗೂ ಹರಿಯಾಣ ವಿದ್ಯುತ್ ಮಂಡಳಿಯ ಮಾಜಿ ಅಧ್ಯಕ್ಷ ಎಂ ಜಿ ದೇವಸಹಾಯಂ ವಡ್ಡೆ, ಸಂಯುಕ್ತ ಕೃಷಿ ಮೋರ್ಚಾ ಸಂಚಾಲಕರು, ಮಾಜಿ ಸಂಸದರು ಮತ್ತು ಮಾಜಿ ಕೃಷಿ ಸಚಿವರು, ಆಂಧ್ರಪ್ರದೇಶ ಸೋಭನಾದ್ರಿಸ್ತರ ರಾವ್, ಸಲಹೆಗಾರ, ಎಐಇಸಿಎ ಅಧ್ಯಕ್ಷರು, ತಮಿಳುನಾಡು ಪವರ್ ಎಂಜಿನಿಯರ್ಸ್ ಸೊಸೈಟಿ ಎಸ್ ಗಾಂಧಿ, ಬಿ ಉಪಾಧ್ಯಕ್ಷರು, ಜನಕೀಯ ಪ್ರತಿರೋಧ ಸಮಿತಿ ಕೇರಳ ಬಿ ದಿಲೀಪನ್ ಮುಂತಾದವರು ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಎಐಇಸಿಎನ ಕಾರ್ಯಾಧ್ಯಕ್ಷ ಸಮರ್ ಸಿನ್ಹಾ, ಉಪಾಧ್ಯಕ್ಷ ಕೆ. ಸೋಮಶೇಖರ್, ಖಜಾಂಚಿ ಅಜಯ್ ಚಟರ್ಜಿ, ರಾಜ್ಯ ಕಾರ್ಯಕಾರಿ ಸದಸ್ಯೆ ದೀಪ ಮತ್ತು ಕರ್ನಾಟಕದ ಹಿರಿಯ ಸಂಘಟಕರಾದ ಕೆ. ವೇಣುಗೋಪಾಲ್ ಭಟ್ ಪ್ರಧಾನ ಕಾರ್ಯದರ್ಶಿ, ಎಐಇಸಿಎ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ದಕ್ಷಿಣ ರಾಜ್ಯಗಳ ಸಂಘಟಕರು ಜ್ಞಾನಮೂರ್ತಿ, ಸುಬ್ಬಾರೆಡ್ಡಿ, ಸುರೇಂದ್ರನ್, ಅನವರತನ್, ಶಿವಕುಮಾರ್, ಹೆಚ್‌.ಪಿ. ಶಿವಪ್ರಕಾರ್ ಮುಂತಾದವರು ಇರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಕಲೆಗಳು ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಬಸವರಾಜ

“ಸ್ಮಾರ್ಟ್ ಮೀಟರ್, ಪ್ರೀ-ಪೇಯ್ಡ್ ಮೀಟರ್ ಹಾಗೂ ಟಿಒಡಿ ದರ ವ್ಯವಸ್ಥೆಗಳು ಜನವಿರೋಧಿ ಕ್ರಮಗಳಾಗಿದ್ದು, ಬಡ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರವನ್ನು ಹೆಚ್ಚಿಸುತ್ತವೆ. ವಿದ್ಯುತ್ ಜನರ ಹಕ್ಕು, ಅದು ವ್ಯಾಪಾರದ ಸರಕಾಗಲು ಬಿಡಬಾರದು, ಎಂದು ಸಂಘಟನೆಯ ಮುಖಂಡರು ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ಕ್ರಮ, ದರ ಏರಿಕೆ, ನೌಕರರ ಗ್ರಾಚ್ಯುಟಿ ಹೊರೆ ಗ್ರಾಹಕರಿಗೆ ವರ್ಗಾವಣೆ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಯಿಂದ ಉಂಟಾಗುತ್ತಿರುವ ಅಸಮಾಧಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ
ಸಂಘಟನೆಯ ಪ್ರಕಾರ, ವಿವಿಧ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ವಿರೋಧಿ ಚಳುವಳಿಗಳು ವೇಗ ಪಡೆದುಕೊಂಡಿದ್ದು, ಹಲವಾರು ರಾಜ್ಯ ಸರ್ಕಾರಗಳು ಜನರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಯೋಜನೆಗಳಿಂದ ಹಿಂದೆ ಸರಿಯಬೇಕಾಗಿದೆ” ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾಕಾರ ಸೋಮಶೇಖರ್ ಗೌಡ, ಜಿಲ್ಲಾ ಸಂಘಟನಕಾರ ಗುರಳ್ಳಿರಾಜ ರಾಜು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...