ಬಳ್ಳಾರಿ | ಭೂಮಿ, ವಸತಿ ಹಕ್ಕುವಂಚಿತ ಹೋರಾಟ ಸಮಿತಿಯಿಂದ ರಾಜ್ಯವ್ಯಾಪಿ ಭೂಮಿ ಸತ್ಯಾಗ್ರಹ

Date:

ಕಾಯಿಸಿದ್ದು ಸಾಕು, ಕಣ್ಣೊರೆಸಿದ್ದು ಸಾಕು, ಕಾನೂನು ನೆಪ ಮುಂದೊಡ್ಡಿದ್ದು ಸಾಕು, ಈಗ ನಮ್ಮಯ ಹಕ್ಕು ನಮ್ಮದಾಗಲೇಬೇಕು ಎಂಬ ಘೋಷವಾಕ್ಯದಡಿಯಲ್ಲಿ ಭೂಮಿ ಮತ್ತು ವಸತಿಗಾಗಿ ರಾಜ್ಯವ್ಯಾಪಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಭೂಮಿ ಸತ್ಯಾಗ್ರಹ ಹಮ್ಮಿಕೊಂಡಿದೆ.

ಈ ಕುರಿತು ಕರಿಯಪ್ಪ ಗುದಿಮನಿ ಮಾತನಾಡಿ, “ಉಳುವವರಿಗೆ ಭೂಮಿ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಕೋಟ್ಯಂತರ ಬಡ ಕುಟುಂಬಗಳು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರೂ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ಇರಲಿಕ್ಕೂ ತುಂಡು ಜಾಗ ಇಲ್ಲ. ಸತ್ತ ಮೇಲೂ ಹೂಳಲು ಪರದಾಟ ಶುರುವಾಗಿದೆ. ಭೂಮಿಯೆಲ್ಲಾ ಬಲಾಢ್ಯರ ಕೈಯಲ್ಲಿದೆ. ಕಾಯ್ದೆ ತಿದ್ದುಪಡಿ ಮಾಡಿ ಮನಸೋ ಇಚ್ಛೆ ಭೂಮಿ ಖರೀದಿಸಲು ಅವಕಾಶ ನೀಡಲಾಗುತ್ತಿದೆ. ಕಂಪನಿಗಳು ಮತ್ತು ರಾಜಕಾರಣಿಗಳು ಅಭಿವೃದ್ಧಿಯ ಹೆಸರಿನಲ್ಲಿ ರೈತರ ಬಳಿ ಇದ್ದ ಬದ್ದ ಭೂಮಿಗಳ ಸ್ವಾಧೀನ ಮಾಡಿಕೊಳ್ಳುತ್ತಿದ್ದಾರೆ. ಬಡವರ ಪರ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಇದೇ ಹಾದಿಯನ್ನು ಹಿಡಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಳ್ಳಾರಿ | ಎರಡನೇ ಬೆಳೆಗೆ ನೀರು ಬಿಡಲು ಒತ್ತಾಯ; ಕಂಪ್ಲಿ ಬಂದ್ ಮಾಡಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರಾಜ್ ಅರಸು ಅವರು “ಉಳುವವನೆ ಭೂ ಒಡೆಯ” ನೀತಿಯನ್ನು ಜಾರಿ ಮಾಡಿದಂತೆ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಸರ್ಕಾರವಾಗಿ ಕಾಂಗ್ರೆಸ್ ದಶಕಗಳಿಂದ ಸಾಗುವಳಿ ಮಾಡುತ್ತಿರುವ ಬೇರೆ ಭೂಮಿ ಅಥವಾ ಮನೆ ಹೊಂದಿಲ್ಲದವರಿಗೆ ನ್ಯಾಯ ದೊರಕಿಸಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ “ಒನ್ ಟೈಮ್ ಸೆಟಲ್‌ಮೆಂಟ್” ಮೂಲಕ ಭೂಮಿ ಹಕ್ಕು ಮಾನ್ಯವಾಗಬೇಕು. ವಸತಿ ಹೀನರಿಗಾಗಿ ರಾಜ್ಯವ್ಯಾಪಿ ಸಮಗ್ರ ಮೆಗಾ ವಸತಿ ಯೋಜನೆ ಘೋಷಣೆಯಾಗಬೇಕು. ಅರಣ್ಯ ಕಾಯ್ದೆಯಡಿ ಅರಣ್ಯವಾಸಿಗಳಿಗೂ ನ್ಯಾಯಬದ್ಧ ಹಕ್ಕು ದೊರಕುವತಾಗಬೇಕು. ಸಾಮಾಜಿಕ ನ್ಯಾಯಕ್ಕಿಂತ ಮಿಗಿಲಾದ ನ್ಯಾಯದ ತಕ್ಕಡಿ ಮತ್ತೊಂದಿಲ್ಲ. ಉಳ್ಳವರಿಗೆ ಕೊಟ್ಟಿದ್ದು ಸಾಕು. ಬಡವರಿಗೆ ಅವರ ಪಾಲು ದಕ್ಕಲೇಬೇಕು. ರಾಜ್ಯಾದ್ಯಂತ ನಿರಂತರ ಜನಜಾಗೃತಿ ಜಾಥಾ-ಪ್ರತಿಭಟನೆ-ಜನಾಂದೋಲನಗಳಾಗಿ ನಡೆಯುತ್ತವೆ. ನ್ಯಾಯ ದಕ್ಕುವವರೆಗೆ ಹೋರಾಟ ನಿಲ್ಲಲಾರದು” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...