ಬಳ್ಳಾರಿ | ರಸ್ತೆ ಕಾಮಗಾರಿ ಮುಗಿದರೂ ಸಂಚಾರಕ್ಕೆ‌ ಅವಕಾಶವಿಲ್ಲದ ರೈಲ್ವೆ ಅಂಡರ್ ಪಾಸ್

Date:

ಬಳ್ಳಾರಿ ನಗರದ ದುರ್ಗಮ್ಮ ಗುಡಿ ಹತ್ತಿರದ ರೈಲ್ವೆ ಅಂಡರ್ ಪಾಸ್‌ ರಸ್ತೆ ಕಾಮಗಾರಿಯು, ಅಂದಾಜು ₹1.80 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಕೇಂದ್ರವು ʼರೆಡ್ ಇನ್ಪ್ರಾʼ ಗುತ್ತಿಗೆದಾರರ ಮೂಲಕ ರಸ್ತೆ ಅಭಿವೃದ್ಧಿ ಮಾಡಿಸಿದ್ದು, ಕಾಲುದಾರಿಯೂ ನಿರ್ಮಾಣವಾಗಿದೆ. ಆದರೆ ವಿದ್ಯುತ್ ವ್ಯವಸ್ಥೆಯಾಗದೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.

“ರಸ್ತೆ ದುರಸ್ತಿಗೋಸ್ಕರ ವಾಹನಗಳ ಸಂಚಾರ ಬಂದ್ ಮಾಡಿರುವುದರಿಂದ ಇತರೆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದರೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರ ಇಂದು ಮುಗಿಯಲಿದೆ, ನಾಳೆ ಮುಗಿಯಲಿದೆಯೆಂದು ಸಬೂಬು ಹೇಳುತ್ತಿದ್ದಾರೆ. ನಾಳೆ, ನಾಳೆ ಎನ್ನುವ ಕಾರಣ ಕೊಡುವುದು ಯಾವಾಗ ನಿಲ್ಲುವುದೋ ದೇವರೇ ಬಲ್ಲ” ಎಂದು ಪಟ್ಟಣದ ನಾಗರಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಕಾಂಕ್ರೀಟ್‌ ರಸ್ತೆ

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಸ್ಥಳೀಯರು ಮಾತನಾಡಿ, “ರಸ್ತೆಯ ಎರಡು ಬದಿಯಲ್ಲಿನ ಗೋಡೆಗೆ ವಿವಿಧ ವರ್ಣದ ಚಿತ್ತಾರ ಬಿಡಿಸಿರುವುದು ಸ್ವಾಗತಾರ್ಹ. ಆದರೆ ಆ ರಸ್ತೆಯನ್ನು ಬಂದ್ ಮಾಡಿ 2 ತಿಂಗಳು ಕಳೆದರೂ ಸಾರ್ವಜನರು ಓಡಾಡಲು ಅನುಕೂಲ ಮಾಡಿಕೊಟ್ಟಿಲ್ಲ. ಇದರಿಂದ ವಾಹನಸವಾರರಿಗೆ, ಪಾದಚಾರಿಗಳ ಸಂಚಾರಕ್ಕೆ ಪರದಾಡುವಂತಾಗಿದೆ. ಹಾಗಾಗಿ ಅಂಡರ್ ಪಾಸ್‌ ರಸ್ತೆಯನ್ನು ಕೂಡಲೇ ಸಂಚಾರ ಯೋಗ್ಯ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದಿರಾ? ಬಳ್ಳಾರಿ | ಉದ್ಯೋಗ, ಆರ್ಥಿಕ ಸಮಾನತೆ ನೀಡುವಲ್ಲಿ ಕೇಂದ್ರ ಬಜೆಟ್ ವಿಫಲ: ಡಿವೈಎಫ್‌ಐ ಆರೋಪ

ಸ್ಥಳೀಯ ನಿವಾಸಿ ವಿಜಯಕುಮಾರ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾರ್ವಜನಿಕರಿಗೆ ಮುಕ್ತವಾಗಿ ಸಂಚರಿಸಲು ನಿರ್ಮಾಣ ರಸ್ತೆ ತೆರವು ಮಾಡುವುದರಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಹೀಗೇ ಆದರೆ ನಗರದಲ್ಲಿ ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತದೆ. ಜನರು ಸಂಚರಿಸಲು ಪರದಾಡುವಂತಾಗುತ್ತದೆ. ಆದ್ದರಿಂದ, ಶಾಸಕರು, ಸಂಸದರು, ಸಚಿವರು ಸೇರಿದಂತೆ ಸ್ಥಳೀಯ ನಾಯಕರು ರಾಜಕಾರಣ ಹೊರಗಿಟ್ಟು ನಗರದ ಅಬಿವೃದ್ಧಿ ಕಡೆ ಚಿಂತಿಸಬೇಕು” ಎಂದು ಆಗ್ರಹಿಸಿದರು.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...