ಬಳ್ಳಾರಿ | ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಎಐಡಿವೈಒ ಸಂಘಟನೆಯಿಂದ ಪ್ರತಿಭಟನೆ

Date:

ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಎಐಡಿವೈಒ ಯುವಜನ ಸಂಘಟನೆ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಬಳ್ಳಾರಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷರಾದ ಎ.ಪಂಪಾಪತಿ ಕೋಳೂರು ಅವರು ಮಾತನಾಡಿ, ಭಾರತವನ್ನ ಯುವ ರಾಷ್ಟ್ರ  ಎಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಭಾಷಣ ಮಾಡುತ್ತಾರೆ. ಆದರೆ ಯುವಕರ ಮುಖ್ಯ ಸಮಸ್ಯೆಯಾಗಿರುವ ನಿರುದ್ಯೋಗದ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಉದ್ಯೋಗ ಕೊಡಬೇಕಾದ ಸರ್ಕಾರಗಳೇ ಉದ್ಯೋಗ ಕಡಿತಮಾಡಿ ಯುವಕರನ್ನು ನಿರುದ್ಯೋಗದ ಸುಳಿಗೆ ಸಿಲುಕಿಸುತ್ತಿವೆ ಎಂದು ಆರೋಪಿಸಿದರು.

ಯುವಕರಿಗಾಗಿ ಒಂದು ಸರಿಯಾದ ಯುವನೀತಿಯನ್ನು ರೂಪಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿವೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇವೆ. ಅವನ್ನು ತುಂಬಿಸಿಕೊಳ್ಳುವುದನ್ನು ಬಿಟ್ಟು ಇರುವ ಹುದ್ದೆಗಳನ್ನು ನಾಶಮಾಡುವ ನಿಟ್ಟಿನಲ್ಲಿ ಸರ್ಕಾರಗಳು ಕೆಲಸ ಮಾಡುತ್ತಿವೆ. ಕಳೆದ ವರ್ಷ ಸುಮಾರು 90 ಸಾವಿರ ಹುದ್ದೆಗಳನ್ನು ನಾಶ ಮಾಡುವ ಮೂಲಕ ಕೇಂದ್ರ ಸರ್ಕಾರ ಯುವಕರಿಗೆ ದ್ರೋಹ ಬಗೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ ಮಾತನಾಡಿ, ಇಂದು ಯುವಜನರು ಉದ್ಯೋಗಕ್ಕಾಗಿ ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿ ಯುವಕರನ್ನು ಹತಾಶರನ್ನಾಗಿಸುತ್ತಿವೆ. ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿವೆ ಮತ್ತು ಅವು ಯಾವುದೇ ರೀತಿಯಾಗಿ ತನಿಖೆಗಳು ಆಗದೇ ನೆನೆಗುದಿಗೆ ಬಿದ್ದಿವೆ ಎಂದರು.

ಎಷ್ಟೋ ಜನ ಯುವಕರು ಉದ್ಯೋಗಕ್ಕಾಗಿ ಅಲೆದು ಅಲೆದು ಹತಾಶರಾಗಿ ಆತ್ಮಹತ್ಯೆ ಮತ್ತು ಸಮಾಜಘಾತುಕ ಕೆಲಸಗಳ ದಾರಿ ಹಿಡಿಯುತ್ತಿದ್ದಾರೆ. ಈ ಹಿಂದೆ ಬಾಲಶೋರ್‌ನಲ್ಲಿ ನಡೆದ ರೈಲು ಅಪಘಾತ ಈ ಶತಮಾನದಲ್ಲೇ ಅತಿ ದೊಡ್ಡ ಅಪಘಾತ ಎಂದು ಹೇಳಲಾಗುತ್ತಿದೆ. ಏಕೆಂದರೆ ಅಲ್ಲಿ ರೈಲ್ವೆ ನಿರ್ವಹಣೆಗೆ ಬೇಕಾದಷ್ಟು ಉದ್ಯೋಗ ಭರ್ತಿ ಇಲ್ಲದಿರುವುದು ಈ  ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಇಷ್ಟಾದರೂ, ಕೇಂದ್ರ ಸರ್ಕಾರ ಉದ್ಯೋಗಗಳನ್ನು ಭರ್ತಿ ಮಾಡುವುದುನ್ನು ಬಿಟ್ಟು ಖಾಸಗೀಕರಣದ ಹೆಸರಿನಲ್ಲಿ ಉದ್ಯೋಗ ಕಡಿತ ಮಾಡುತ್ತಿದೆ. ಇದರ ವಿರುದ್ಧ ದೇಶದ ಯುವಕರು ಒಂದಾಗಿ ಹೋರಾಡಬೇಕಿದೆ ಎಂದರು.

ಇದನ್ನು ಓದಿದ್ದೀರಾ? ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

ರೈಲ್ವೆ ಖಾಸಗೀಕರಣ ಬೇಡ, ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಿ, ಕಾಯ್ದಿರಿಸಿದ (ಯು ಆರ್) ಕೋಚ್ ಮತ್ತು ಸ್ಲೀಪರ್ ( ಎಸ್ ಎಲ್) ಗಳನ್ನು ಹೆಚ್ಚಿಸಬೇಕು, ಹಿರಿಯ ನಾಗರಿಕರಿಗೆ ರಿಯಾಯಿತಿ ಮರುಸ್ಥಾಪಿಸಬೇಕು, ಲಸೆ ಕಾರ್ಮಿಕರಿಗೆ ಸಂಪೂರ್ಣ ಕಾಯ್ದಿರಿಸಿದ (ಯು ಆರ್ ) ಕೋಚ್‌ಗಳ ರೈಲುಗಳನ್ನು ಓಡಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಯಿತು. ಕೇಂದ್ರ ರೈಲ್ವೆ ಸಚಿವರಿಗೆ ಬಳ್ಳಾರಿ ಸ್ಟೇಷನ್ ಮಾಸ್ಟರ್ ಮೂಲಕ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ವೀರಮಲ್ಲ, ನಿತಿನ್, ನಾಗರಾಜ್, ಆಕಾಶ್, ದರ್ಶನ್ ಮತ್ತು ಇನ್ನಿತರ ವಿದ್ಯಾರ್ಥಿ ಯುವಜನರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...