ಬಳ್ಳಾರಿ | ಖರೀದಿ ಕೇಂದ್ರದ ಜೋಳವನ್ನು ಶೀಘ್ರ ಸಾಗಾಣಿಕೆ ಮಾಡಿ: ಮೆಣಸಿನ ಈಶ್ವರಪ್ಪ

Date:

ಬಳ್ಳಾರಿ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ಬೆಳೆಯು ಜೋಳವಾಗಿದ್ದು, ಡಿಸೆಂಬರ್ ಅಥವಾ ಜನವರಿಯಲ್ಲಿ ಕಟಾವುಗೊಂಡು ರೈತರು ತಾವು ಬೆಳದಿರುವ ಬೆಳೆಗಳನ್ನು ಮನೆಯಲ್ಲಿ ಗುಡ್ಡೆ ಹಾಕಿಕೊಂಡಿದ್ದಾರೆ. ಹಿಂಗಾರು ಬೆಳೆ ಪ್ರಾರಂಭಗೊಂಡಲ್ಲಿ ರೈತರು ಬೆಳೆದಿರುವ ಬೆಳೆಯು ಸಂಪೂರ್ಣ ನಷ್ಟ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಇನ್ನೂ ಖರೀದಿ ಕೇಂದ್ರದಲ್ಲಿ ಶೇಖರಿಸಿ ಇಡುವುದಕ್ಕಿಂತ ಜೋಳವನ್ನು ಗೋದಾಮಿಗೆ ಸಾಗಿಸಬೇಕು ಎಂದು ಕನ್ನಡ ನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮೆಣಸಿನ ಈಶ್ವರಪ್ಪ ಒತ್ತಾಯಿಸಿದರು.

ಕನ್ನಡ ಹಾಗೂ ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ವೇಳೆ ಮಾತನಾಡಿ, “ಖರೀದಿ ಕೇಂದ್ರದಲ್ಲಿರುವ ಜೋಳವನ್ನು ಬೇಗ ಸಾಗಾಣಿಕೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಖರೀದಿ ಅವಧಿ ವಿಸ್ತರಿಸಬೇಕು” ಎಂದು ಕೋರಿದರು.

“ಇದೇ ತಿಂಗಳ 30ರಂದು ಜೋಳವನ್ನು ತೆಗೆದುಕೊಳ್ಳುವುದನ್ನು ತಡೆಹಿಡಿಯುವುದಾಗಿ ಹೇಳಿದ್ದಾರೆ. ಆದುದರಿಂದ ಈ ಆದೇಶವನ್ನು ರದ್ದು ಮಾಡಬೇಕು. ಅದನ್ನು ಇನ್ನೂ ಒಂದು ತಿಂಗಳ ಕಾಲ ವಿಸ್ತರಿಸಬೇಕು. ಖರೀದಿ ಕೇಂದ್ರದಲ್ಲಿ ಸುಮಾರು 3,796 ಮಂದಿ ರೈತರು ನೋಂದಣಿ ಮಾಡಿದ್ದಾರೆ. ಒಟ್ಟು 2,95,428 ಕ್ವಿಂಟಾಲ್ ಜೋಳವನ್ನು ನೋಂದಣಿ ಮಾಡಿದ್ದಾರೆ. 81,863 ಕ್ವಿಂಟಲ್ ಜೋಳವನ್ನು ತೂಕ ಹಾಕಿದ್ದು, ಇನ್ನುಳಿದ 2,625 ಮಂದಿ ರೈತರ 2,13,565 ಕ್ವಿಂಟಲ್ ಜೋಳ ಮಾರುಕಟ್ಟೆಗೆ ಬರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಜೋಳವನ್ನು ಇಂದಿನಿಂದ ಕೇವಲ 10 ದಿನಗಳಲ್ಲಿ ಹೇಗೆ ತೂಕಕ್ಕೆ ಹಾಕಲಾಗುತ್ತದೆ? ಇದು ಕಷ್ಟಸಾಧ್ಯವಾದುದು. ಆದುದರಿಂದ 01 ತಿಂಗಳವರೆಗೆ ಸಮಯಾವಕಾಶವನ್ನು ಮಾಡಿಕೊಟ್ಟಲ್ಲಿ ರೈತರಿಗೆ ತುಂಬಾ ಅನುಕೂಲ ಮಾಡಿದಂತಾಗುತ್ತದೆ. ಆದುದರಿಂದ ಆದಷ್ಟು ಬೇಗ ಜೋಳವನ್ನು ತೂಕ ಮಾಡಿ 80 ರಿಂದ 100 ಲಾರಿಗಳಲ್ಲಿ ಲೋಡ್ ಮಾಡಿಸಿ, ಆದಷ್ಟು ಬೇಗನೆ ಕಳುಹಿಸಿಕೊಡಬೇಕು. ಇದರಿಂದ ರೈತರಿಗೆ ಇನ್ನೂ ತುಂಬಾ ಅನುಕೂಲವಾಗುತ್ತದೆ” ಎಂದು ವಿನಂತಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬೆಣಚಿ, ಹೊನ್ನಾಪುರ ಪ್ರೌಢಶಾಲೆಗಳಿಗೆ ಬಿಇಒ ಭೇಟಿ; ಸುರಕ್ಷಿತ ಕೊಠಡಿಗೆ ವಿದ್ಯಾರ್ಥಿಗಳ ಸ್ಥಳಾಂತರ

ಪದಾಧಿಕಾರಿಗಳು ಕನ್ನಿ ಶಿವಮೂರ್ತಿ ಜಿ, ದೊಡ್ಡ ಬಸವನಗೌಡ ಜೆ,‌ ರಾಜಯ್ಯ ಕುಂಟನಹಾಲ್, ಯಾಲ್ಪಿ ಸುರೇಶ್, ವೈ ಮಲ್ಲಿಕಾರ್ಜುನ, ಮೇಟಿ ದಿವಾಕರ್ ಗೌಡ, ಜಿ ಚೆನ್ನಾ ರೆಡ್ಡಿ, ಎನ್ ವಿಶ್ವನಾಥ್ ಗೌಡ, ದಿವಾಕರ್ ರೆಡ್ಡಿ,‌ ಶಿವಪ್ರಸಾದ್ ರೆಡ್ಡಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...