ಬಳ್ಳಾರಿ | ಉದ್ಯೋಗ, ಆರ್ಥಿಕ ಸಮಾನತೆ ನೀಡುವಲ್ಲಿ ಕೇಂದ್ರ ಬಜೆಟ್ ವಿಫಲ: ಡಿವೈಎಫ್‌ಐ ಆರೋಪ

Date:

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್-2025ನಲ್ಲಿ ರಾಷ್ಟ್ರದ ಅತ್ಯಂತ ತುರ್ತು ಸಮಸ್ಯೆಗಳಾದ ನಿರುದ್ಯೋಗ, ಆರ್ಥಿಕ ಅಸಮಾನತೆಯ ಹೋಗಲಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಘಟಕ ಡಿವೈಎಫ್‌ಐ ಜಿಲ್ಲಾ ಮುಖಂಡ ನಾಗಭೂಷಣ ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸರ್ಕಾರವು ಜಿಡಿಪಿಯ ಶೇ.4.4ರಷ್ಟು ಆರ್ಥಿಕ ಕೊರತೆಯನ್ನು ಎತ್ತಿ ತೋರಿಸಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.4.8ರಷ್ಟು ಕಡಿಮೆಯಾಗಿದೆ. ಸಾಲದ ಮೇಲಿನ ಭಾರೀ ಅವಲಂಬನೆಯು ಸಾಲದ ಸುಸ್ಥಿರತೆ ಮತ್ತು ಖಾಸಗಿ ಹೂಡಿಕೆಯನ್ನು ಕುಂಠಿತಗೊಳಿಸುವ ಬಗ್ಗೆ ಚಿಂತೆ ಹೆಚ್ಚಿಸುತ್ತದೆ. ಅಂತಿಮವಾಗಿ ಭವಿಷ್ಯದ ಪೀಳಿಗೆಗಳನ್ನು ಅಸುಸ್ಥಿರ ಹೊಣೆಗಾರಿಕೆಗಳೊಂದಿಗೆ ದೊಡ್ಡ ಹೊರೆಯಾಗಲಿದೆ” ಎಂದು ಹೇಳಿದರು.

ಡಿವೈಎಫ್‌ಐ ನಾಗಭೂಷಣ್
ಡಿವೈಎಫ್‌ಐ ಬಳ್ಳಾರಿ ಜಿಲ್ಲಾಧ್ಯಕ್ಷ ನಾಗಭೂಷಣ್

“ಸರ್ಕಾರವು ಆರ್ಥಿಕ ವಿವೇಕ ಮತ್ತು ಬೆಳವಣಿಗೆಯ ಘೋಷಣೆಗಳನ್ನು ಮಾಡಿದರೂ, ಈ ಬಜೆಟ್ ದೇಶದ ಲಕ್ಷಾಂತರ ಯುವಜನರು, ಕಾರ್ಮಿಕರು ಮತ್ತು ಹಿಂದುಳಿದ ಸಮುದಾಯಗಳು ಎದುರಿಸುತ್ತಿರುವ ಕಠಿಣ ಆರ್ಥಿಕ ಸ್ಥಿತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ” ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಜೆಟ್‌ನ ಅತ್ಯಂತ ಗಂಭೀರವಾದ ನ್ಯೂನ್ಯತೆಯೆಂದರೆ ನಿರುದ್ಯೋಗದ ಬಗ್ಗೆ ಸಂಪೂರ್ಣ ಮೌನ ವಹಿಸಿರುವುದು. ಯುವಜನರಿಗೆ ಔಪಚಾರಿಕ ಉದ್ಯೋಗದ ಒದಗಿಸದಿರುವುದು. ನಿರುದ್ಯೋಗ ಮತ್ತು ಅಲ್ಪ ಉದ್ಯೋಗದ ಸಂಕಟವು ದೇಶದ ಯುವಜನರ ಭವಿಷ್ಯವನ್ನು ಅಂಧಕಾರಮಯಗೊಳಿಸುತ್ತಿದೆ” ಎಂದು ದೂರಿದರು.

“2025ರ ಕೇಂದ್ರ ಬಜೆಟ್ ಸರ್ಕಾರದ ಕಾರ್ಪೊರೇಟ್-ಪರ ಮತ್ತು ಜನ-ವಿರೋಧಿ ನೀತಿಗಳ ಇನ್ನೊಂದು ಉದಾಹರಣೆಯಾಗಿದೆ. ನಿರುದ್ಯೋಗ ಸಂಕಟವನ್ನು ಅಂಗೀಕರಿಸಲು ನಿರಾಕರಿಸುವುದು, ಆದಾಯ ಅಸಮಾನತೆಯನ್ನು ಪರಿಹರಿಸಲು ವಿಫಲವಾಗಿರುವುದು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಅಗತ್ಯಗಳನ್ನು ನಿರ್ಲಕ್ಷಿಸುವ ಮೂಲಕ, ಕೇಂದ್ರ ಸರ್ಕಾರವು ಮತ್ತೊಮ್ಮೆ ಜನರ ಕಲ್ಯಾಣಕ್ಕಿಂತ ಕಾರ್ಪೊರೇಟ್ ಲಾಭಗಳಿಗೆ ಆದ್ಯತೆ ನೀಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉಳ್ಳಾಲ | ಎಡಪಂಥೀಯರೇ ವಿವೇಕಾನಂದ ಚಿಂತನೆಯ ನಿಜ ವಾರಸುದಾರರು: ಚಿಂತಕ ಇಸ್ಮಾಯಿಲ್

“ಉದ್ಯೋಗ ಸೃಷ್ಟಿ ಕಾರ್ಯಕ್ರಮಗಳು, ಬಲವಾದ ಕಾರ್ಮಿಕ ಭದ್ರತೆ ಮತ್ತು ದೇಶದ ಶ್ರಮಿಕ ಜನರಿಗೆ ನ್ಯಾಯಯುತ ಹಾಗೂ ಸಮಾನ ಭವಿಷ್ಯವನ್ನು ಖಚಿತಪಡಿಸಲು ಸಾರ್ವಜನಿಕ ಸೇವೆಗಳಲ್ಲಿ ತುರ್ತಾಗಿ ಹೂಡಿಕೆಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಡಿವೈಎಫ್‌ಐನ ಜಿಲ್ಲಾ ಕಾರ್ಯದರ್ಶಿ ಸ್ವಾಮಿ, ಮುಖಂಡರಾದ ಶರೀಪ್, ಶಿವು, ಲೋಕೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...