ಬಳ್ಳಾರಿ | ₹6 ಕೋಟಿ ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದಲ್ಲಿ ಹುಳು ಪತ್ತೆ; ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ

Date:

ಬಳ್ಳಾರಿಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ(ಕೆಎಸ್‌ಡಬ್ಲ್ಯೂಸಿ) ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಸುಮಾರು 24,000 ಕ್ವಿಂಟಾಲ್ ಜೋಳ ಸೇವನೆಗೆ ಯೋಗ್ಯವಲ್ಲವೆಂದು ತಿಳಿದುಬಂದಿದೆ. ಹುಳು ಬಿದ್ದಿರುವ ಜೋಳವನ್ನು ಬಳ್ಳಾರಿ ಜಿಲ್ಲೆ ಮತ್ತು ಸುತ್ತಮುತ್ತಲಿನ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸಲಾಗುತ್ತಿದೆ ಎನ್ನಲಾಗಿದೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಶುಕ್ರವಾರ ಕೆಎಸ್‌ಡಬ್ಲ್ಯೂಸಿಯ ಯುನಿಟ್-2ರ ಗೋದಾಮಿಗೆ ಭೇಟಿ ನೀಡಿದಾಗ ಇದು ಬೆಳಕಿಗೆ ಬಂದಿತು. ಒಟ್ಟಾರೆಯಾಗಿ, ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳ ಪತ್ತೆಯಾಗಿದೆ.

ನ್ಯಾಯಮೂರ್ತಿ ವೀರಪ್ಪ, ಉಪ ನೋಂದಣಾಧಿಕಾರಿ ಅರವಿಂದ್ ಎನ್ ವಿ ಮತ್ತು ಇತರರು ಪ್ರಶ್ನಿಸಿದಾಗ, “ಕೆಎಸ್‌ಡಬ್ಲ್ಯೂದ ಬಳ್ಳಾರಿ ಘಟಕದ ವ್ಯವಸ್ಥಾಪಕಿ ಶರಾವತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಸಕಿನಾ ಅವರು 2024ರ ಮಾರ್ಚ್ 29ರಂದು ಭಾರತೀಯ ಆಹಾರ ನಿಗಮ(ಎಫ್‌ಸಿಐ)ದಿಂದ ಜೋಳ ಸೇವನೆಗೆ ಯೋಗ್ಯವಾಗಿದೆಯೆಂದು ಪ್ರಮಾಣಪತ್ರ ಪಡೆದಿದ್ದೇವೆಂದು ಹೇಳಿದರು. ಹಾಗಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಜೋಳವನ್ನು ವಿತರಿಸಲು ಹಾವೇರಿ ಮತ್ತು ಇತರ ಜಿಲ್ಲೆಗಳಿಗೆ ಕಳುಹಿಸಲಾಗಿದೆ” ಎಂಬುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೋಳವು ಪ್ರಾಣಿಗಳು ತಿನ್ನಲೂ ಯೋಗ್ಯವಲ್ಲ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಒಟ್ಟಾರೆಯಾಗಿ 48,000 ಚೀಲ ಜೋಳ ವ್ಯರ್ಥವಾಗಿದೆ” ಎಂದು ಉಪ ಲೋಕಾಯುಕ್ತರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ʼನಮ್ಮ ಬದುಕೇ ಹೋರಾಟ; ನಾವು ಮತಕ್ಕಾಗಿ ಬೇಕೇ ಹೊರತು ಸಾಮಾಜಿಕ ಬದುಕಿಗಲ್ಲʼ; ಆದಿವಾಸಿಗಳ ಅಳಲು

“ನ್ಯಾಯಮೂರ್ತಿ ವೀರಪ್ಪ ಅವರ ವಾಗ್ವಾದದಿಂದ ಅಸಮಾಧಾನಗೊಂಡ ಶರಾವತಿ, ʼಗೋದಾಮಿಗೆ ಭೇಟಿ ನೀಡಿದ್ದನ್ನು ದೃಢೀಕರಿಸಲು ಜಿಪಿಎಸ್‌ಗೆ ಲಿಂಕ್ ಮಾಡುವ ಫೋಟೋವನ್ನು ಒದಗಿಸುವಂತೆ ಕೇಳಿದರು. ಈ ನಡೆ ನಮ್ಮನ್ನು ಪ್ರಶ್ನಿಸುವ ಹಂತವನ್ನು ತಲುಪಿದ್ದಾರೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆʼ ಎಂದು ಉಪ ನೋಂದಣಾಧಿಕಾರಿ ಅರವಿಂದ್ ಎನ್ ವಿ ಹೇಳಿದರು.

“ತೆರಿಗೆದಾರರ ಹಣವನ್ನು ಬಳಸಿ ಜೋಳವನ್ನು ಖರೀದಿಸಲಾಗಿದ್ದು, ಅದನ್ನು ಈ ರೀತಿ ವ್ಯರ್ಥ ಮಾಡಬಾರದು. ಸಂಬಂಧಪಟ್ಟ ಸಚಿವರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...