ಬಳ್ಳಾರಿ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯ

Date:

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದ ಅತಿಥಿ ಶಿಕ್ಷಕರು ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 43,159, ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ಪ್ರತಿ ವರ್ಷ ಸರ್ಕಾರ ನೇಮಕಮಾಡಿಕೊಳ್ಳುತ್ತಿದೆ. ಹತ್ತನ್ನೇರಡು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ವೇತನ ಹೆಚ್ಚಿಸಬೇಕು, ಸೇವಾ ಭದ್ರತೆ ಒದಗಿಸಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮಗೆ ಯಾವುದೇ ತರಹದ ಉದ್ಯೋಗ ಭದ್ರತೆಯಾಗಲಿ, ಕನಿಷ್ಠ ವೇತನವಾಗಲಿ ಇಲ್ಲ. ಕೇವಲ 9, 10 ತಿಂಗಳು ಸೇವೆ ಸಲ್ಲಿಸಿದ ನಂತರ ಬೇರೆ ಕೆಲಸಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ ಪ್ರಾಥಮಿಕ ಶಾಲೆಯಲ್ಲಿ10,000 ರೂ. ಮತ್ತು ಪ್ರೌಢಶಾಲೆಗಳಲ್ಲಿ 10,500 ರೂ. ವೇತನ ಸಿಗುತ್ತಿದೆ. ಈ ಹಣದಿಂದ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಪ್ರತಿ ವರ್ಷ ಅತಿಥಿ ಶಿಕ್ಷಕರನ್ನು ಸರ್ಕಾರವು ತಮಗೆ ಬೇಕಾದ ಸಮಯದಲ್ಲಿ ನೇಮಕ ಮಾಡಿಕೊಂಡು ಮಾರ್ಚ್ 31ಕ್ಕೆ ಬಿಡುಗಡೆ ಮಾಡುತ್ತದೆ. ಈ ಪದ್ಧತಿಯಿಂದ ನಮಗೆ ಉದ್ಯೋಗವಿಲ್ಲದೆ ತೊಂದರೆಗೆ ಒಳಗಾಗುತ್ತೇವೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದರಿಂದ ಮಾನಸಿಕವಾಗಿ ನೊಂದಿದ್ದೇವೆ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಅತಿಥಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್ ರಾಮಪ್ಪ , ಗಂಗಾ , ಮಾರೆಣ್ಣ , ಎರ್ರಿ ಸ್ವಾಮಿ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ...